ಶಿಕ್ಷಣ ವಂಚಿತರಾಗುತ್ತಿದ್ದಾರೆ ಕಾನನದ ನೂರಾರು ಮಕ್ಕಳು


Team Udayavani, Nov 22, 2018, 6:00 AM IST

children-education-forest.jpg

ಬೆಂಗಳೂರು: ಅಡವಿದೇವಿಯ ಹಿರಿಯ ಮಕ್ಕಳು ಹಾಗೂ ಕಾಡಿನ ಸಂರಕ್ಷಣೆ ಹೊಣೆ ಹೊತ್ತ ಅರಣ್ಯ ಇಲಾಖೆ ನಡುವಿನ ಸಂಘರ್ಷದಲ್ಲಿ ನೂರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಶಾಲೆಗಳಿಗೆ ಹೋಗಲು ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದ ಕಾರಣ ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ದೊಡ್ಡಾಣೆ, ಪಡಸನಾಥ, ಇಂಡಿಗನಾಥ, ಪೊನ್ನಾಚಿ,ತುಳಸಿಕೆರೆ, ಚಂಗಡಿ, ಕಬಗಟ್ಟಿ, ಕೊಕಬರೆ, ತೋಕರೆ,ಹನೂರು, ಮರೂರು, ಮೆದಗಾಣೆ, ದಂಟಳ್ಳಿ ಗ್ರಾಮಗಳಲ್ಲಿ ಮಕ್ಕಳು ನಗರ ಪ್ರದೇಶಗಳಿಗೆ ಕೆಲಸಕ್ಕೆ ಗುಳೆ ಹೋಗುವುದು, ಸುತ್ತಮುತ್ತಲ ಹೊಲಗಳಲ್ಲಿ ಕೂಲಿಗೆ ಹೋಗುತ್ತಿದ್ದಾರೆ.

ಶಿಕ್ಷಣ ಇಲಾಖೆ ಅಂಕಿ-ಅಂಶಗಳ ಪ್ರಕಾರ ಕಳೆದ 2 ವರ್ಷಗಳಲ್ಲಿಯೇ 150ಕ್ಕೂ ಹೆಚ್ಚು ಮಕ್ಕಳು ಶಾಲೆ ಬಿಟ್ಟಿದ್ದಾರೆ. ಗ್ರಾಮಗಳಿಗೆ ಸಮೀಪವಿರುವ ಶಾಲೆಗಳಲ್ಲಿ ಕೇವಲ 4ನೇ ತರಗತಿಯವರೆಗೆ ಮಾತ್ರ ಕಲಿಸಲಾಗುತ್ತದೆ. 5ನೇ ತರಗತಿಗೆ ಸೇರಬೇಕೆಂದರೆ ಕನಿಷ್ಠ 10 ಕಿ.ಮೀ. ಕಾಡಿನಲ್ಲಿ ನಡೆದು ಹೋಗಬೇಕು. ಈ ವೇಳೆ ಮಕ್ಕಳ ಮೇಲೆ ವನ್ಯಜೀವಿಗಳು ದಾಳಿ ಮಾಡುವ ಸಾಧ್ಯತೆಯಿದೆ ಎಂಬ ಭಯದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ. ಚಾಮರಾಜನಗರದ ವಿವಿಧ ಅರಣ್ಯಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯನ ನಡುವಿನ ಸಂಘರ್ಷ ತಪ್ಪಿಸಲು ಅಲ್ಲಿನ ಕಾಡಿನಲ್ಲಿ ವಾಸವಾಗಿರುವ ಗ್ರಾಮದ ಜನರನ್ನು ಕಾಡು ಬಿಟ್ಟು ಬರುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡುತ್ತಲೇ ಇದ್ದಾರೆ. ಆದರೆ, ಹಿರಿಯ ಜೀವಿಗಳು ಕಾಡು ತೊರೆಯಲು ಒಪ್ಪುತ್ತಿಲ್ಲ. ಇದರ ನಡುವೆ ಇಲ್ಲಿನ ಹತ್ತಾರು ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ.

ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಕಾಡಂಚಿನ 10 ಗ್ರಾಮಗಳು ಇಂದಿಗೂ ರಸ್ತೆ, ಕುಡಿಯುವ ನೀರು, ವಿದ್ಯುತ್‌, ಶಾಲೆ, ಆರೋಗ್ಯ ಕೇಂದ್ರಗಳಂತಹ ಕನಿಷ್ಠ ಸೌಲಭ್ಯಗಳು ಇಲ್ಲದೆ ನಲುಗುತ್ತಿವೆ. ಸೌಕರ್ಯಗಳನ್ನು ಒದಗಿಸುವಂತೆ ಅರಣ್ಯ ಇಲಾಖೆಯನ್ನು ಕೋರಿದರೆ, ಕಾಡಿನಲ್ಲಿ ರಸ್ತೆ, ವಿದ್ಯುತ್‌ ನೀಡಿದರೆ ವನ್ಯಜೀವಿಗಳಿಗೆ ತೊಂದರೆಯಾಗುವ ಜತೆಗೆ, ಪ್ರಾಣಿ ದಾಳಿ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುವ ಸಾಧ್ಯತೆಯಿದೆ. ನೀವು ಕಾಡಿನಿಂದ ಹೊರ ಬನ್ನಿ ನಿಮಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದು ಮನವೊಲಿಸುತ್ತಿದ್ದಾರೆ. ಜನರು ಮಾತ್ರ ಕಾಡು ಬಿಟ್ಟು ಬರಲು ಹಿಂದೇಟು ಹಾಕುತ್ತಿದ್ದಾರೆ.

ವರ್ಗಾವಣೆ ಕೇಳುವ ಶಿಕ್ಷಕರು: ಕೆಲ ಗ್ರಾಮಗಳಿಗೆ ವಾಹನ, ಸುಸಜ್ಜಿತ ಕಟ್ಟಡಗಳಿಲ್ಲ. ಜತೆಗೆ ಒಮ್ಮೊಮ್ಮೆ ಕಾಡು ಪ್ರಾಣಿಗಳು ಎದುರಾಗುತ್ತವೆ ಎಂಬ ಕಾರಣದಿಂದ ಶಿಕ್ಷಕರು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕೆಲ ಶಿಕ್ಷಕರು ವರ್ಗಾವಣೆ ಕೇಳುತ್ತಿದ್ದರೆ, ಪಡಸನಾಥ ಗ್ರಾಮಕ್ಕೆ ನೇಮಕವಾಗಿದ್ದ ಶಿಕ್ಷಕಿಯೊಬ್ಬರು ರಾಜೀನಾಮೆಯನ್ನೇ ನೀಡಿದ್ದಾರೆ. ಇನ್ನು ಹೊಲಗಳಿಗೆ ಕೆಲಸಕ್ಕೆ ಹೋಗುವ ಮಕ್ಕಳು ಶಾಲೆ ಕಡೆ ಬರುತ್ತಿಲ್ಲ, ಈ ಬಾರಿಯೂ ಸಾಕಷ್ಟು ಮಕ್ಕಳು ಶಾಲೆ ಬಿಟ್ಟಿದ್ದು, ಖುದ್ದು ಅಧಿಕಾರಿಗಳೇ ಪೋಷಕರ ಬಳಿಹೋಗಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಕೇಳಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಶಿಕ್ಷಣಾಧಿಕಾರಿಯೊಬ್ಬರು.

ಮಂಚವೇ ಆ್ಯಂಬುಲೆನ್ಸ್‌
ಇಲ್ಲಿ ಸೂಕ್ತ ರಸ್ತೆ ಹಾಗೂ ವಾಹನ ಸೇವೆಯಿಲ್ಲ. ದೊಡ್ಡಾಣೆ, ಪಡಸನಾಥ, ಇಂಡಿಗನಾಥ ಸೇರಿದಂತೆ ಕೆಲ ಗ್ರಾಮಗಳಲ್ಲಿ ಇಂದಿಗೂ ಕತ್ತೆ ಮೇಲೆಯೇ ಸರಕು-ಸಾಮಾನು ಸಾಗಿಸುತ್ತಾರೆ. ಇನ್ನು ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಹತ್ತಾರು ಕಿ.ಮೀ ದೂರದ ಪ್ರಾಥಮಿಕ ಕೇಂದ್ರಗಳಿಗೆ ಹಣವಂತರು ತೊಟ್ಟಿಲು ಮಾಡಿಕೊಂಡು ಹೋದರೆ, ಬಡವರು ಮಂಚದಲ್ಲಿ ಹೊತ್ತೂಯ್ಯುತ್ತಾರೆ.

ಸೂಕ್ತ ಸೌಲಭ್ಯಗಳಿಲ್ಲದ ಕಾರಣ ಶಾಲೆಗಳು ಸರಿಯಾಗಿ ನಡೆಯುವುದಿಲ್ಲ. ಜತೆಗೆ ಇಲ್ಲಿನ ಜನರು ಗುಳೆ ಹೋಗುವುದರಿಂದ ಮಕ್ಕಳು ಶಾಲೆಯನ್ನು ಬಿಡುತ್ತಾರೆ. ವರ್ಷದಿಂದ ವರ್ಷಕ್ಕೆ ಶಾಲೆ ಬಿಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಕುರಿತು ಮೂಲಸೌಕರ್ಯಕ್ಕೆ ಅರಣ್ಯ ಇಲಾಖೆಗೆ ಮನವಿ ಮಾಡಿದರೆ ಅವರು ಕಾಡು ಬಿಟ್ಟು ಬನ್ನಿ ಎನ್ನುತ್ತಿದ್ದಾರೆ.
– ಹೊನ್ನೂರು ಪ್ರಕಾಶ್‌, ರೈತ ಮುಖಂಡ.

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.