Arrested: ಪತ್ನಿಯ ಕೊಂದ ಪತಿ 31 ವರ್ಷ ಬಳಿಕ ಬಂಧನ!
ಹತ್ಯೆಗೈದು ಮುಸ್ಲಿಂಗೆ ಮತಾಂತರಗೊಂಡಿದ್ದ| ಮಸೀದಿಯಲ್ಲಿ ಮೌಲ್ವಿಯಾಗಿದ್ದ ಸುಬ್ರಮಣಿ
Team Udayavani, Feb 14, 2024, 12:44 PM IST
ಬೆಂಗಳೂರು: ಪತ್ನಿಯನ್ನು ಕೊಲೆಗೈದು, ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 31 ವರ್ಷಗಳ ಬಳಿಕ ಹೆಬ್ಟಾಳ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಬ್ಬಾಳ ನಿವಾಸಿ ಸುಬ್ರಮಣಿ ಅಲಿಯಾಸ್ ಹುಸೇನ್ ಸಿಕ್ಕಂದರ್(56) ಬಂಧಿತ. ಆರೋಪಿ 1993ರಲ್ಲಿ ಪತ್ನಿ ಸುಧಾ ಎಂಬಾಕೆಯನ್ನು ಕೊಲೆಗೈದು ಪರಾರಿಯಾಗಿದ್ದ. ಇತ್ತೀಚೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಳೇ ಪ್ರಕರಣಗಳ ಇತ್ಯರ್ಥಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ.
1993ರಲ್ಲಿ ಪತ್ನಿಯ ಶೀಲ ಶಂಕಿಸಿ ಕೊಲೆಗೈದಿದ್ದ ಸುಬ್ರಮಣಿಯನ್ನು ಪೊಲೀಸರು ಅಂದೇ ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ, ಕೋರ್ಟ್ನ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇತ್ತ ಪೊಲೀಸರು ಆತನ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕೋರ್ಟ್ ಆರೋಪಿಯ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಎಲ್ಪಿಆರ್ ಪ್ರಕರಣಗಳ ಇತ್ಯರ್ಥಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬಾತ್ಮೀದಾರರು ಹಾಗೂ ತಾಂತ್ರಿಕ ತನಿಖೆ ನಡೆಸಿದಾಗ ಆರೋಪಿ ಜಾಮೀನು ಪಡೆದು ಮೊದಲಿಗೆ ಕೇರಳಕ್ಕೆ ಹೋಗಿದ್ದ ಎಂಬುದು ಗೊತ್ತಾಗಿದೆ.
ಆದರೆ, ಸುಬ್ರಮಣಿ, ಪೊಲೀಸರು ತನ್ನನ್ನು ಹುಡುಕಾಡುತ್ತಿದ್ದಾರೆ. ಮತ್ತೆ ಬಂಧಿಸುತ್ತಾರೆ ಎಂಬ ಭಯದಲ್ಲಿ ಮುಸ್ಲಿಂ ಸಮುದಾಯದ ಆಚರಣೆಗಳು, ಪದ್ಧತಿಗಳನ್ನು ತಿಳಿದುಕೊಂಡು ಸುಬ್ರಮಣಿ ಎಂಬ ತನ್ನ ಹೆಸರಿನ್ನು ಹುಸೇನ್ ಸಿಕಿಂದರ್ ಎಂದು ಬದಲಾಯಿಸಿ ಕೊಂಡಿದ್ದ. ತಾನೂ ಮುಸ್ಲಿಂ ಎಂದು ಸ್ಥಳೀಯರನ್ನು ನಂಬಿಸಿ, ಅವರ ಜತೆ ಒಡನಾಟ ಇಟ್ಟುಕೊಂಡಿದ್ದ. ಕೆಲ ವರ್ಷಗಳ ಹಿಂದೆ ಚಿಕ್ಕಮಗಳೂರಿಗೆ ಸ್ಥಳಾಂತರ ಗೊಂಡು ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಎಂದು ಹೇಳಲಾಗಿದೆ.
ಇತ್ತ ಹೆಬ್ಟಾಳ ಪೊಲೀಸರು ಆರೋಪಿಯ ಹಿನ್ನೆಲೆ ಹಾಗೂ ಆತ ಇಲ್ಲಿಂದ ಎಲ್ಲಿಗೆ ಹೋಗಿದ್ದಾನೆ ಎಂಬ ಬಗ್ಗೆ ಸ್ಥಳೀಯರು ಹಾಗೂ ತಾಂತ್ರಿಕ ತನಿಖೆ ನಡೆಸಿದಾಗ ಚಿಕ್ಕಮಗಳೂರಿನ ಮಸೀದಿಯಲ್ಲಿ ಮೌಲ್ವಿಯಾಗಿರುವುದು ಪತ್ತೆಯಾಗಿತ್ತು. ಈ ಮಾಹಿತಿ ಮೇರೆಗೆ ಸುಮಾರು ದಿನಗಳ ಕಾಲ ಪೊಲೀಸರು ಮಸೀದಿ ಬಳಿಯೇ ಆತನ ಮೇಲೆ ನಿಗಾವಹಿಸಿದಾಗ ಈತನೇ ಸುಬ್ರಮಣಿ ಎಂಬುದು ಗೊತ್ತಾಗಿ, ಬಂಧಿಸಿ ನಗರಕ್ಕೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ