ಪತ್ನಿಗೆ ಮುದ್ದೆಕೋಲಿನಿಂದ ಹೊಡೆದು ಕೊಂದ ಪತಿ!
ಕೊಂದ ಬಳಿಕ ಮನೆ ಬಾಗಿಲು ಹಾಕಿದ್ದ ಆರೋಪಿ
Team Udayavani, Apr 24, 2022, 10:15 AM IST
ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿ ಮುದ್ದೆಕೋಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಲಘಟ್ಟ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ನಾಗೇಗೌಡನ ಪಳ್ಯದ ನಿವಾಸಿ ಪದ್ಮಾ (45) ಕೊಲೆ ಯಾದ ಮಹಿಳೆ.
ಕೊಲೆ ಪ್ರಕರಣದ ಸಂಬಂಧ ತಲಘಟ್ಟಪುರ ಪೊಲೀಸರು ಆಕೆಯ ಪತಿ ಮಾರಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಾರಪ್ಪ ವ್ಯವಸಾಯ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪತ್ನಿ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ಮಾರಪ್ಪ ಆಗಾಗ್ಗೆ ಜಗಳವಾಡುತ್ತಿದ್ದ. ಶುಕ್ರವಾರ ಸಂಜೆ 6.30ರಿಂದ 9.30ರ ನಡುವೆ ಇದೇ ವಿಚಾರವಾಗಿ ದಂಪತಿ ನಡುವೆ ಜಗಳವಾಗಿದೆ. ಆ ಸಂದರ್ಭದಲ್ಲಿ ಮಾರಪ್ಪ ಕೈಗೆ ಸಿಕ್ಕಿದ ಮುದ್ದೆಕೋಲಿನಿಂದ ಪತ್ನಿಗೆ ಹೊಡೆದು ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; 10ರಿಂದ 15 ವರ್ಷದ ಬಾಲಕರ ಬಂಧನ
ನಂತರ ಮನೆಯ ಬಾಗಿಲ ಚಿಲಕ ಹಾಕಿಕೊಂಡು ಒಳಗೆ ಇದ್ದ. ಮಗ ಗಿರೀಶ್ ಮನೆಗೆ ಬಂದು ಅಮ್ಮ ಎಂದು ಕೂಗಿದ್ದಾನೆ. ಬಾಗಿಲು ತೆರೆಯದಿದ್ದಾಗ ಅಪ್ಪ ಎಂದು ಕೂಗಿದ್ದಾನೆ. ಒಳಗಿದ್ದ ಅಪ್ಪ ಓಹ್ ಎಂದು ಹೇಳಿದ್ದಾನೆ. ಆದರೆ ಬಾಗಿಲು ತೆಗೆಯುವಂತೆ ಹೇಳಿದರೂ ತೆಗೆದಿಲ್ಲ. ಅನುಮಾನಗೊಂಡ ಗಿರೀಶ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಘಟನೆ ಅರಿತು ಸ್ಥಳಕ್ಕಾಗಮಿಸಿದ ತಲಘಟ್ಟಪುರ ಠಾಣೆ ಪೊಲೀಸರು ಬಾಗಿಲು ತೆಗೆಸಿದ್ದು, ಒಳಗೆ ಹೋಗಿ ನೋಡಿದಾಗ ಮಹಿಳೆ ಕೊಲೆಯಾಗಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರು ಆರೋಪಿ ಮಾರಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಮೃತ ದೇಹವನ್ನು ಕೆಂಪೇಗೌಡ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ