ನಾನು ಆರೂವರೆ ಕೋಟಿ ಜನರ ಸಿಎಂ: ಎಚ್ಡಿಕೆ
Team Udayavani, May 29, 2018, 7:00 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಜತೆಗಿನ ಸಮ್ಮಿಶ್ರ ಸರ್ಕಾರದಲ್ಲಿ ಭಾಗಿಯಾಗಿರುವುದರಿಂದ ತಾವು ಕಾಂಗ್ರೆಸ್
ಮುಲಾಜಿನಲ್ಲಿರುವುದಾಗಿ ಹೇಳಿರುವುದೇ ಹೊರತು ನಾಡಿನ ಜನರಿಗೆ ಅಗೌರವ ಸಲ್ಲಿಸಲು ಅಲ್ಲ ಎಂದು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರೊಂದಿಗೆ ಸಂಪುಟ ವಿಸ್ತರಣೆ
ಕುರಿತಂತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಎಲ್ಲರಿಗೂ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ ಎಂದು ಹೇಳುವ ಮೂಲಕ ನಾನು ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂಬ ತಮ್ಮ ಈ ಹಿಂದಿನ ಹೇಳಿಕೆಯಿಂದ ಉಂಟಾಗಿರುವ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದರು.
ಜೆಡಿಎಸ್ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತನ್ನಿ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಮನವಿ ಮಾಡಿದ್ದೆ. ಆದರೆ, ಈ ಮನವಿಯನ್ನು ಜನ ತಿರಸ್ಕರಿಸಿದ್ದಾರೆ.
ಹೀಗಾಗಿ, ಕಾಂಗ್ರೆಸ್ ಜತೆಗಿನ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದೇನೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮ ಅನುಷ್ಠಾನಕ್ಕೆ ತರಬೇಕಾದರೂ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ, ತಾವು ಕಾಂಗ್ರೆಸ್ನ ಮುಲಾಜಿನಲ್ಲಿರುವುದಾಗಿ ಹೇಳಿದ್ದೇನೆಯೇ ಹೊರತು ನಾಡಿನ ಜನರಿಗೆ ಅಗೌರವ ಸಲ್ಲಿಸಲು ಅಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…