ನನಗೆ ಯಾವುದೇ ಅಸಮಾಧಾನ ಇಲ್ಲ: ಆರ್. ಶಂಕರ್ ಮನವೊಲಿಸುವಲ್ಲಿ ಸಿಎಂ BSY ಯಶಸ್ವಿ
Team Udayavani, Jan 22, 2021, 6:35 PM IST
ಬೆಂಗಳೂರು: ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿತ್ತು. ಆದರೆ ಅಂತಿಮವಾಗಿ ಸಿ.ಎಂ ಯಡಿಯೂರಪ್ಪ ಅನಿವಾರ್ಯ ಕಾರಣಗಳಿಂದ ಮತ್ತೆ ಖಾತೆ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದಿದ್ದು, ಮುಂದಿನ ದಿನಗಳಲ್ಲಿ ಬೇರೆ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ನನಗೆ ಯಾವುದೇ ಅಸಮಧಾನ ಇಲ್ಲ ಎಂದು ಸಚಿವ ಆರ್ ಶಂಕರ್ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಭೇಟಿ ನಂತರ ಮಾತನಾಡಿದ ಆರ್ ಶಂಕರ್, ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿ, ಅದೇ ಖಾತೆ ಬೇಕು ಎಂದು ಸಿಎಂ ಬಳಿ ಪಟ್ಟು ಹಿಡಿದಿದ್ದೆ. ಆದರೇ ಈಗಿರುವ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೆ ಮುಂದುವರೆಯುವಂತೆ ಯಡಿಯೂರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ನನಗೆ ಮತ್ತೆ ಖಾತೆ ಬದಲಾಯ್ತಾ? ಯಾವುದು ತೆಗೆದು, ಯಾವುದು ಕೊಟ್ರು?: ಮಾಧುಸ್ವಾಮಿ ಅಚ್ಚರಿ
ಹೀಗಾಗಿ ಭರವಸೆಯಿಂದ ಇದೀಗ ಸಿಎಂ ಮಾತಿಗೆ ಒಪ್ಪಿ ಬಂದಿದ್ದೇನೆ. ಜೊತೆಗೆ ಜನವರಿ 26 ರಂದು ಧ್ವಜಾರೋಹಣ ಆದ ನಂತರ ಹಾವೇರಿ ಜಿಲ್ಲಾ ಉಸ್ತುವಾರಿ ಕೊಡುವುದಾಗಿ ಭರವಸೆ ಕೂಡ ನೀಡಿದ್ದಾರೆ. ಸಿಎಂ ಮಾತಿಗೆ ಬೆಲೆ ಕೊಟ್ಟು ಇವಾಗ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೇ ಸಂತೋಷ ದಿಂದ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹಾನರ್ V40 5G ಸ್ಮಾರ್ಟ್ ಪೋನ್ ವೈಶಿಷ್ಟ್ಯತೆಗಳೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ