![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
“ನೆನಪಿನ ಬುತ್ತಿ’ಯಲ್ಲಿ ತೇಲಿಬಂದ ಮಲೆನಾಡಿಗರ ನೆನಪು
Team Udayavani, Apr 17, 2017, 12:26 PM IST
![tara-malenadu.jpg](https://www.udayavani.com/wp-content/uploads/2017/04/17/tara-malenadu.jpg)
ಬೆಂಗಳೂರು: ಕರೆಂಟೇ ಇಲ್ಲದಂತಹ ಊರಿಂದ ಸಿಟಿಗೆ ಬಂದಾಗ, ಲೈಟ್ ಹಚ್ಚಲಿಕ್ಕೂ ಬರುತ್ತಿರಲಿಲ್ಲ. ನೆನೆಸಿಕೊಂಡರೆ ಈಗಲೂ ನಗು ಬರುತ್ತದೆ. ಮಲೆನಾಡು ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ನೆನಪಿನ ಬುತ್ತಿ’ಯಿಂದ ತೇಲಿಬಂದ ನೆನಪು ಇದು.
ನಗರದ ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಅಭಿಮಾನಿ ವಸತಿಯಲ್ಲಿ ಮಲೆನಾಡ ಮಿತ್ರ ವೃಂದ ಭಾನುವಾರ “ಮಲೆನಾಡು ದಿನ’ದ ಅಂಗವಾಗಿ ನೆನಪಿನ ಬುತ್ತಿ ಕಾರ್ಯಕ್ರಮ ಏರ್ಪಡಿಸಿತ್ತು. ತೀರ್ಥಹಳ್ಳಿ, ಕೊಪ್ಪ, ಎನ್.ಆರ್. ಪುರ, ಶೃಂಗೇರಿ ಸೇರಿದಂತೆ ನೂರಾರು ಮಲೆನಾಡಿನ ಜನ ಅಲ್ಲಿ ನೆರೆದಿದ್ದರು. 20-30 ವರ್ಷಗಳಿಂದ ನಗರದಲ್ಲೇ ಜೀವನ ನಡೆಸುತ್ತಿರುವ ಅವರೆಲ್ಲಾ ತಮ್ಮ ಸಿಹಿ-ಕಹಿ ಘಟನೆಗಳನ್ನು ಹಂಚಿಕೊಂಡರು.
“ನಮ್ಮೂರಲ್ಲಿ ಕರೆಂಟೇ ಇರಲಿಲ್ಲ. ಅಂತಹ ಊರಲ್ಲಿ ಇದ್ದ ನನಗೆ ಸಿಟಿಗೆ ಬಂದಾಗ ಬೆಂಗಳೂರು ಝಗಮಗಿಸುತ್ತಿತ್ತು. ನಾನಿದ್ದ ರೂಮಿನಲ್ಲಿಯ ಲೈಟ್ ಹಾಕಲಿಕ್ಕೂ ನನಗೆ ಬರುತ್ತಿರಲಿಲ್ಲ’ ಎಂದು ಚಿಕ್ಕಮಗಳೂರು ಮೂಲದವರೊಬ್ಬರು ಮೆಲುಕುಹಾಕಿದರು. ಇದಕ್ಕೆ ಇತರ ಮಲೆನಾಡಿಗರೂ ದನಿಗೂಡಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ತಮ್ಮ ಕಾನೂರು ಸುಬ್ಬಮ್ಮ ಹೆಗ್ಗಡತಿಯ ಪಾತ್ರವನ್ನು ಮೆಲುಕು ಹಾಕಿದರು. “ಚಿತ್ರದ ಶೂಟಿಂಗ್ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡುವವರೆಗೂ ನನಗೆ ಯಾವ ಪಾತ್ರ ಕೊಡುತ್ತಿದ್ದಾರೆ ಎಂಬುದೇ ಗೊತ್ತಿರಲಿಲ್ಲ. ಆಮೇಲೆ ಅಲ್ಲಿಯೇ ಒಂದು ವಾರ ಠಿಕಾಣಿ ಹೂಡಿ ಮಲೆನಾಡಿನ ಪರಿಸರ, ಅಲ್ಲಿನ ಸಂಸ್ಕೃತಿ, ಅಡಿಗೆ ಮಾಡುವುದು ಸೇರಿದಂತೆ ಪ್ರತಿಯೊಂದು ನೋಡಿ ಕಲಿತೆ’ ಎಂದು ಸ್ಮರಿಸಿದರು.
ಅಲ್ಲದೆ, ದೇಹದ ತೂಕವನ್ನು 20 ಕೆ.ಜಿ ಕರಿಗಸಬೇಕು ಎಂದು ನಿರ್ದೇಶಕರಿಂದ ಸೂಚನೆ ಬಂತು. ಇದಕ್ಕಾಗಿ ಆರು ತಿಂಗಳು ಅವಕಾಶವೂ ಸಿಕ್ಕಿತು. 50 ದಿನಗಳ ಶೂಟಿಂಗ್ ಮುಗಿಸಿಕೊಂಡು ಬರುವಾಗ ದುಃಖ ಉಮ್ಮಳಿಸಿತು. ಅಷ್ಟರಮಟ್ಟಿಗೆ ಅಲ್ಲಿನ ಜನ, ಪರಿಸರದೊಂದಿಗೆ ಬೆರೆತುಹೋಗಿದ್ದೆ ಎಂದರು. ಕಾರ್ಯಕ್ರಮದಲ್ಲಿ ಮಲೆನಾಡ ಮಿತ್ರ ವೃಂದದ ಅಧ್ಯಕ್ಷ ಅನಿಲ್ ಹೊಸಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.