ಶೀಘ್ರ ಬರಲಿದೆ ಸಂಚಾರಿ ಐಸಿಯು ಬಸ್‌!


Team Udayavani, May 18, 2021, 10:02 AM IST

ಶೀಘ್ರ ಬರಲಿದೆ ಸಂಚಾರಿ ಐಸಿಯು ಬಸ್‌!

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ “ಆಕ್ಸಿ ಬಸ್‌’ ಪರಿಚಯಿಸುವ ಮೂಲಕ ಗಮನಸೆಳೆಯಿತು. ಈಗ ಕೆಎಸ್‌ಆರ್‌ಟಿಸಿ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಸೋಂಕಿತರಿಗಾಗಿ “ಸಂಚಾರಿ ಐಸಿಯು’ ಅಭಿವೃದ್ಧಿಪಡಿಸಿದೆ.

ಈ ವಿಶಿಷ್ಟ ಐಸಿಯು ಬಸ್‌ ಆ್ಯಂಬುಲೆನ್ಸ್‌ನಲ್ಲಿ ಆಮ್ಲಜನಕ, ವೆಂಟಿಲೇಟರ್‌ ಸೇರಿದಂತೆ ಸೋಂಕಿತರಿಗೆ ತುರ್ತು ಸೇವೆಗೆ ಅಗತ್ಯವಿರುವ ಎಲ್ಲ ಸೌಲಭ್ಯ ಗಳು ಇರಲಿದ್ದು, ನಿಗಮದಲ್ಲೇ  ಆಂತರಿಕವಾಗಿ ಈ ವಿನೂತನ ವ್ಯವಸ್ಥೆ ರೂಪಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಸಾರ್ವಜನಿಕ ಸೇವೆಗೆ ಇದು ಸಿದ್ಧಗೊಳ್ಳಲಿದೆ. ಆಕ್ಸಿ ಬಸ್‌ನ ಮುಂದುವರಿದ ಭಾಗ ಇದಾಗಿದ್ದು, ಈ ರೀತಿಯ ಪ್ರಯತ್ನ ಇದೇ ಮೊದಲು ಎಂದು ವಿಶ್ಲೇಷಿಸಲಾಗುತ್ತಿದೆ.

ಸುಮಾರು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದ್ದು, ಏಕಕಾಲದಲ್ಲಿಐದು ಜನ ರೋಗಿಗಳಿಗೆ ಇದರಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ಸದ್ಯ ಬೆಂಗಳೂರಿನಲ್ಲಿ ವೆಂಟಿಲೇಟರ್‌ ಮತ್ತು ಆಮ್ಲಜನಕ ಕೊರತೆ ಹೆಚ್ಚು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿಇದು ಕಾರ್ಯಾಚರಣೆ ನಡೆಸಲಿದೆ. ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಮುಂದೆ ಇದನ್ನು ನಿಲುಗಡೆ ಮಾಡಲಾಗುತ್ತದೆ. ಒಂದು ವೇಳೆ ತಕ್ಷಣಕ್ಕೆ ಆಸ್ಪತ್ರೆಯಲ್ಲಿ ಪ್ರವೇಶ ಲಭ್ಯವಾಗದವರು, ಈ ಬಸ್‌ ಆ್ಯಂಬುಲೆನ್ಸ್‌ನಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ವಿಶೇಷವೆಂದರೆ ಇದು ಸಂಚಾರಿ ಐಸಿಯು ಆಗಿರುವುದರಿಂದ ಬೇಡಿಕೆ ಇರುವ ಕಡೆಗೆ ಬಸ್‌ ಅನ್ನು ತೆಗೆದುಕೊಂಡು ಹೋಗಬಹುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ : ಭಾರತ: ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆ, ಸಾವಿನ ಪ್ರಮಾಣ ಹೆಚ್ಚಳ

ಸಂಚಾರಿ ಆಮ್ಲಜನಕ ಬಸ್‌ಗೆ ಚಾಲನೆ :

ಕೆಎಸ್‌ಆರ್‌ಟಿಸಿಯು ಫೌಂಡೇಶನ್‌ ಇಂಡಿಯಾ ಸಹಯೋಗದಲ್ಲಿ ಸಂಚಾರಿ ಆಮ್ಲಜನಕ ಬಸ್‌ (Oxygen on Wheels) ಮತ್ತು ಆ್ಯಂಬುಲೆನ್ಸ್‌ ಅನ್ನು ಆನೇಕಲ್‌ ಹಾಗೂ ಚಿಕ್ಕಬಳ್ಳಾಪುರಕ್ಕೆ ನೀಡಲಾಯಿತು. ಬಸ್‌ ಆ್ಯಂಬುಲೆನ್ಸ್‌ನಲ್ಲಿ ಆರುಆಸನಗಳು ಹಾಗೂ ಎರಡು ಬೆಡ್‌ಗಳ ವ್ಯವಸ್ಥೆ ಇದ್ದು, 4ಆಕ್ಸಿಜನ್‌ ಸಿಲಿಂಡರ್‌ಮತ್ತು2ಆಕ್ಸಿಜನ್‌ಕಾನ್ಸಂಟ್ರೇಟರ್‌ ಗಳನ್ನು ಅಳವಡಿಸಲಾಗಿದೆ. ಸುಮಾರು 7ರಿಂದ 8 ರೋಗಿಗಳು ಒಂದು ಬಾರಿಗೆ ಎರಡರಿಂದ ನಾಲ್ಕು ಗಂಟೆವರೆಗೆ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಆರೋಗ್ಯ ಸಿಬ್ಬಂದಿ ವ್ಯವಸ್ಥೆ ಮೇಲ್ವಿಚಾರಣೆಯನ್ನು ಫೌಂಡೇಶನ್‌ ಇಂಡಿಯಾ ನಿರ್ವಹಿಸಲಿದೆ. ಕೆಎಸ್‌ಆರ್‌ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಈ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಫೌಂಡೇಶನ್‌ ಇಂಡಿಯಾ ಗೌರವ ಕಾರ್ಯದರ್ಶಿ ಸಂಜಯ್‌ ಗುಪ್ತ ಇತರರು ಇದ್ದರು.

 ಸಂಚಾರಿಐಸಿಯುನಲ್ಲಿ ಏನು ಇರಲಿದೆ? :

„ ಐದು ಹಾಸಿಗೆಗಳುಳ್ಳ ಆ್ಯಂಬುಲೆನ್ಸ್‌ ಇದಾಗಿದೆ

„ ಪ್ರತಿ ಬೆಡ್‌ಗೆ ಆಮ್ಲಜನಕ ವ್ಯವಸ್ಥೆ, ರೋಗಿಗಳ ಆರೋಗ್ಯದ ಮೇಲೆ ನಿಗಾ ಇಡಲು ಹೃದಯದೊತ್ತಡ, ರಕ್ತದಲ್ಲಿ ಆಮ್ಲಜನಕ ಪ್ರಮಾಣ, ಇಸಿಜಿ, ದೇಹದ ಉಷ್ಣಾಂಶ ಅಳೆಯುವ ಮಾಪನ, ಐವಿ, ವೆಂಟಿಲೇಟರ್‌ ಅಳವಡಿಸುವ ಸೌಲಭ್ಯ.

„ ತುರ್ತು ಔಷಧ, ಜನರೇಟರ್‌ ವ್ಯವಸ್ಥೆ ಲಭ್ಯ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.