ಸಾಧಕರನ್ನು ಗುರುತಿಸಿ ಗೌರವಿಸಿ: ಪಿ.ಜಿ.ಆರ್.ಸಿಂಧ್ಯಾ
Team Udayavani, May 1, 2019, 3:00 AM IST
ಬೆಂಗಳೂರು: ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಸಾಧಕರು ಇನ್ನೂ, ಎಲೆಮರೆ ಕಾಯಂತಿದ್ದು ಅವರನ್ನು ಗುರುತಿಸಿ ಗೌರವಿಸುವ ಕೆಲಸ ಮತ್ತಷ್ಟು ನಡೆಯಬೇಕಾಗಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ಸಂಗೀತ ಗಂಗಾ ಸಂಸ್ಥೆ, ಮಂಗಳವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಗಾಯಕ ಜಿ.ವಿ.ಅತ್ರಿ ಸವಿನೆನಪು, ಸಂಗೀತೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಅವರ ಜವಾಬ್ದಾರಿ ಕೂಡ ಹೆಚ್ಚುತ್ತದೆ ಎಂದರು.
ಗಾಯಕ ಜಿ.ವಿ.ಅತ್ರಿ ಅವರ ಸಾಧನೆಯ ಗುಣಗಾನ ಮಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಹಲವರ ಪ್ರಶಂಸೆಗೆ ಪಾತ್ರರಾಗಿದ್ದರು ಎಂದು ಸ್ಮರಿಸಿದರು.
ಸಾಹಿತಿ ಡಾ.ಎಚ್.ಎಸ್ ವೆಂಕಟೇಶ್ಮೂರ್ತಿ ಮಾತನಾಡಿ, ಯಾವುದೇ ಕಲಾವಿದನಾಗಿರಲಿ ಕಲೆಯ ಬಗ್ಗೆ ಹೆಚ್ಚಿನ ಶ್ರದ್ಧೆ, ಭಕ್ತಿ ಹೊಂದಿರಬೇಕು. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿದ್ದ ಜಿ.ವಿ.ಅತ್ರಿ ತಮ್ಮ ಮಧುರ ಕಂಠದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳ ಮನಸ್ಸಿಗೆ ಇಂಪು ಮೂಡಿಸಿದ್ದರು. ಇವರ ಸಾಧನೆ ಯುವ ಸಮುದಾಯಕ್ಕೆ ಪ್ರೇರಣೆ ಎಂದರು.
ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ರಂಗಕರ್ಮಿ ಕೆ.ವಿ.ನಾಗರಾಜ ಮೂರ್ತಿ ಮಾತನಾಡಿದರು. ನಿವೃತ್ತ ಐಎಸ್ಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ಮಹೇಂದ್ರ ಮುನೋತ್ ಜೈನ್ ಇದ್ದರು. ಇದೇ ವೇಳೆ ವಿವಿಧ ಕಲಾವಿದರು ಜಿ.ವಿ.ಅತ್ರಿ ಅವರು ಸಂಗೀತ ಸಂಯೋಜನೆ ಮಾಡಿ, ಹಾಡಿದ ಗೀತೆಗಳನ್ನು ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ