ಇಡಗುಂಜಿ ಮೇಳದ ಓಡುವ ಕುದುರೆ ನೆಬ್ಬೂರು


Team Udayavani, Jun 3, 2019, 3:05 AM IST

idagunji

ಬೆಂಗಳೂರು: “ಇಡಗುಂಜಿ ಮೇಳದಲ್ಲಿ ಸತತ ನಾಲ್ಕು ದಶಕಗಳ ಕಾಲ ಎಲ್ಲಿಯೂ ನಿಲ್ಲದೆ, ಓಡುವ ಕುದುರೆಯಂತೆ ನಿಷ್ಠೆ ಕಾಯ್ದುಕೊಂಡವರು ನೆಬ್ಬೂರು ನಾರಾಯಣ’ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ವಿಶ್ಲೇಷಿಸಿದರು.

ನಗರದ ಮಲ್ಲೇಶ್ವರದಲ್ಲಿನ ಹವ್ಯಕ ಭವನದಲ್ಲಿ ಭಾನುವಾರ ಅಖೀಲ ಹವ್ಯಕ ಮಹಾಸಭಾ ಏರ್ಪಡಿಸಿದ್ದ ನೆಬ್ಬೂರು ನಾರಾಯಣ ಭಾಗವತ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಯಕ್ಷಗಾನ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನೆಬ್ಬೂರು ಇಡಗುಂಜಿ ಮೇಳದಲ್ಲಿಯೇ ಕೊನೆಯವರೆಗೆ ಇದ್ದು, ನಿಷ್ಠೆ ಕಾಯ್ದುಕೊಂಡಂತಹ ವ್ಯಕ್ತಿ. ಈ ನಿಟ್ಟಿನಲ್ಲಿ ಅವರೊಂದು ಓಡುವ ಕುದುರೆ ಎಂದು ಬಣ್ಣಿಸಿದರು.

ನೆಬ್ಬೂರು ಅವರು ಹಾಡುಗಾರಿಕೆ, ಶಾಸ್ತ್ರೀಯ ಸಂಗೀತ, ತಾಳ ಹಾಗೂ ಯಕ್ಷಗಾನ ಶೈಲಿಯಲ್ಲಿ ಪ್ರವೀಣರಾಗಿದ್ದರು. ಯಾವುದಾದರೂ ಹಾಡು ಹಾಡುವಾಗ ರಸ, ಭಾವದಲ್ಲಿ ತಲ್ಲೀನರಾಗಿ ಸಭೆಯಲ್ಲಿ ನೆರೆದಿರುವವರ ಹೃದಯವನ್ನು ತಟ್ಟುವ ರೀತಿ ಹಾಡುತ್ತಿದ್ದರು.

ಕರುಣರಸದಲ್ಲಿ ಅವರನ್ನು ಮೀರಿಸುವಂತಹ ಶೈಲಿ ಇತರರಲ್ಲಿ ಬರಲು ಸಾಧ್ಯವೇ ಇಲ್ಲ ಎಂದ ಅವರು, ನೆಬ್ಬೂರರು ಆರ್ಥಿಕವಾಗಿ ಬಡವರಾಗಿದ್ದರು. ಆದರೆ, ಅವರಲ್ಲಿ ಹೃದಯವಂತಿಕೆ ಇತ್ತು. ತಾನು ಬಡವ ಎಂದು ಯಾರೊಬ್ಬರ ಬಳಿಯೂ ಹೇಳಿಕೊಂಡವರಲ್ಲ. ಜನರ ಬಳಿ ನಡೆದುಕೊಳ್ಳುವ ರೀತಿ, ತೋರುತ್ತಿದ್ದ ಪ್ರೀತಿ ಬಡತನಕ್ಕೂ ಮೀರಿದ್ದು ಎಂದು ಸ್ಮರಿಸಿದರು.

ಸಭೆಯಲ್ಲಿ ಅಖೀಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ, ಯಕ್ಷಗಾನ ಚಿಂತಕ ಶ್ರೀಪಾದ ಹೆಗಡೆ ಹುಕ್ಲಮಕ್ಕಿ, ಉದ್ಯಮಿ ಸುಧಾಕಿರಣ ಅಧಿಕಶ್ರೇಣಿ, ಮದ್ದಳೆ ವಾದಕ ಅನಂತ ಪದ್ಮನಾಭ ಪಾಠಕ್‌, ಮಹಾಸಭಾ ಉಪಾಧ್ಯಕ್ಷ ಶ್ರೀಧರ ಭಟ್‌ ಕೆಕ್ಕಾರು, ಪ್ರಧಾನ ಕಾರ್ಯದರ್ಶಿ ವೇಣುವಿಘ್ನೇಶ್‌ ಸಂಪ, ಕಾರ್ಯದರ್ಶಿ ಪ್ರಶಾಂತ್‌ ಭಟ್‌,

ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್‌, ಅರ್ಥಶಾಸ್ತ್ರಜ್ಞ ಮೋಹನ್‌ ಭಾಸ್ಕರ ಹೆಗಡೆ, ಹಿರಿಯ ಪತ್ರಕರ್ತ ರವೀಂದ್ರ ಭಟ್‌ ಮತ್ತಿತರರು ಉಪಸ್ಥಿತರಿದ್ದರು. ಸಂಚಾಲಕರಾದ ಸದಾನಂದ ಹೆಗಡೆ ಹಣಜಿಬೈಲ್‌ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ ಪುಷ್ಪಾಂಜಲಿ, ಕಾವ್ಯಾಂಜಲಿ, ಭಾವಾಂಜಲಿ ಹಾಗೂ ನಾಟ್ಯಾಂಜಲಿ ಎಂಬ ವಿವಿಧ ಪ್ರಾಕಾರಗಳ ಮೂಲಕ ನೆಬ್ಬೂರು ಅವರಿಗೆ ಗೌರವ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.