ಬಿಜೆಪಿ ಟಿಕೆಟ್ ಸಿಗದಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ: ಈಶ್ವರಪ್ಪ
Team Udayavani, Apr 5, 2018, 6:45 AM IST
ಸವಣೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮಣ್ಣ ಬೇವಿನಮರದಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ. ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅವರನ್ನು ಗೆಲ್ಲಿಸಲಿ. ಈ ಕುರಿತು ಅವರು ಆಣೆ, ಪ್ರಮಾಣ ಮಾಡಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಮಾತನಾಡಿ, ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ತೀರ್ಮಾನಿಸಿದ್ದು, ಮತ್ತೂಬ್ಬರಿಗೆ ಟಿಕೆಟ್ ದೊರಕುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಸೋಮಣ್ಣ ಬೇವಿನಮರದ ಪಕ್ಷೇತರರಾಗಿ ಸ್ಪರ್ಧಿಸುವ ಸಂದರ್ಭ ಬಂದರೆ ಕ್ಷೇತ್ರದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಸೇರಿ ಆಣೆ ಪ್ರಮಾಣ ಮಾಡುವ ಮೂಲಕ ಶತಾಯಗತಾಯ ಅವರನ್ನು ಗೆಲ್ಲಿಸಲೇಬೇಕು. ಸುಮ್ಮನೆ ಕಾಟಾಚಾರಕ್ಕೆ ಕಣಕ್ಕೆ ನೂಕಿ ಹರಕೆಯ ಕುರಿ ಮಾಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ