ಕೊರೊನಾ ಕುಗ್ಗಿದರೆ ಕರಗದ ಹಿಗ್ಗು


Team Udayavani, Mar 12, 2020, 3:09 AM IST

corona

ಬೆಂಗಳೂರು: ನಗರದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಏ.8ರಂದು ನಿಗದಿಯಾಗಿರುವ ಕರಗ ಮಹೋತ್ಸವ ಆಚರಿಸುವುದೋ ಬೇಡವೋ ಎಂಬ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಕೊರೊನಾ ಹಾಗೂ ಕಾಲರಾ ರೋಗದ ಪ್ರಕರಣಗಳು ದಾಖಲಾಗುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರಗ ಮಹೋತ್ಸವ ಆಚರಣೆ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬುಧವಾರ ಮೇಯರ್‌ ಎಂ.ಗೌತಮ್‌ಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಸದಸ್ಯರ ತುರ್ತು ಸಭೆ ನಡೆಸಲಾಯಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಕರಗ ಮಹೋತ್ಸವ ಏ.8ಕ್ಕೆ ಪ್ರಾರಂಭವಾಗಿ 9ದಿನಗಳ ಕಾಲ ನಡೆಯಲಿದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಸಂಪೂರ್ಣ ಸ್ವಚ್ಛತೆ ಆದ್ಯತೆ ನೀಡಲಾಗುತ್ತಿದೆ. ನೀರು ಶೇಖರಣೆ ಮಾಡುವ ಟ್ಯಾಂಕರ್‌ಗಳ ಸ್ವಚ್ಛತೆ, ಬ್ಲ್ಯಾಕ್‌ಸ್ಪಾಟ್‌ಗಳ ತೆರವು, ಕರಗ ಮಹೋತ್ಸವ ಸಾಗುವ ರಸ್ತೆಗಳ ಸ್ವಚ್ಛತೆ ಸೇರಿದಂತೆ ಹಲವು ಮುಂಜಾಗ್ರತೆಯ ಬಗ್ಗೆ ಚರ್ಚೆ ಮಾಡಲಾಗಿದೆ.

ಈ ಸಂಬಂಧ ಜಲಮಂಡಳಿ, ಬೆಸ್ಕಾಂ ಸಂಸ್ಥೆಗಳೊಂದಿಗೂ ಚರ್ಚೆ ಮಾಡಲಾಗುವುದು. ಸದ್ಯಕ್ಕೆ ಕರಗ ನಡೆಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಕೊರೊನಾ ವೈರಸ್‌ನ ಭೀತಿ ಇರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಸಾಂಪ್ರದಾಯದಂತೆ ಪ್ರತಿ ವರ್ಷ ಕರಗ ಮಹೋತ್ಸವದ ದಿನದಂದೇ ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುವುದು. ಈ ಹಿಂದಿನ ವರ್ಷ ಚುನಾವಣೆ ನೀತಿ ಸಂಹಿತೆಯಿಂದ ಆಚರಣೆ ವಿಳಂಬವಾಗಿತ್ತು. ಈ ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಲಭ್ಯತೆ ಹಾಗೂ ಪರಿಸ್ಥಿತಿ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸ ಲಾಗುವುದು ಎಂದು ಮಾಹಿತಿ ನೀಡಿದರು.

ದೇವಾಲಯ, ಸುತ್ತಲ ಸ್ವಚ್ಛತೆ ಪರಿಶೀಲನೆ ಇಂದು: ಮೇಯರ್‌ ಎಂ. ಗೌತಮ್‌ಕುಮಾರ್‌ ಮಾತನಾಡಿ, ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಹಾಗೂ ಕೊರೊನಾ, ಕಾಲರಾದಂತ ರೋಗಗಳಿಂದ “ಮಹೋತ್ಸವ’ಕ್ಕೆ ಅಡ್ಡಿಯಾಗದ ರೀತಿಯಲ್ಲಿ ಮುಂಜಾಗ್ರತೆ ವಹಿಸಲಾಗುವುದು.

ಕರಗ ಭಾವನಾತ್ಮಕ ವಿಚಾರವಾಗಿದ್ದು, ಸುರಕ್ಷತೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ. ಈ ಸಂಬಂಧ ಗುರುವಾರ (ಮಾ.12) ಬೆಳಗ್ಗೆ 7 ಗಂಟೆಗೆ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಹಾಗೂ ಕರಗ ಮಹೋತ್ಸವ ಸಾಗುವ ಹಾದಿಯ ಪರಿಶೀಲನೆ ಮಾಡಲಾಗುವುದು ಈ ರಸ್ತೆಗಳಲ್ಲಿ ಕಸ, ರಸ್ತೆಗುಂಡಿ, ಒಳಚರಂಡಿ ನೀರು ಸೋರಿಕೆ ಸೇರಿ ಯಾವುದಾರು ಸಮಸ್ಯೆಗಳಿದ್ದರೆ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌ ಮಾತನಾಡಿ, ಸಂದರ್ಭ ನೋಡಿಕೊಂಡು ಮಹೋತ್ಸವದ ಮೆರವಣಿಗೆಗೆ ಯೋಜನೆ ರೂಪಿಸಲಾಗುವುದು. ಕೊರೊನಾ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾದರೆ ಅಥವಾ ಪರಿಸ್ಥಿತಿ ಕೈಮೀರಿದರೆ ಮೋಹತ್ಸವವನ್ನು ದೇವಸ್ಥಾನದ ಆವರಣಕ್ಕೆ ಸೀಮಿತಗೊಳಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಚಿಕ್ಕಪೇಟೆ ಶಾಸಕ ಉದಯ್‌ ಗರುಡಾಚಾರ್‌, ಆಡಳಿತ ಪಕ್ಷದ ನಾಯಕ ಮುನೀಂದ್ರಕುಮಾರ್‌, ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಕೊರೊನಾಗೆ ಔಷಧ ಇದೆ!: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಭೆ ಸಮಾರಂಭಗಳನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸೂಚಿಸಿದೆ. ಈ ಮಧ್ಯೆ ಕರಗ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿಧಾನ ಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌, ಕೊರೊನಾ ವೈರಸ್‌ ಏನು ವಿಶೇಷವಲ್ಲ.

ಕೇರಳದಲ್ಲಿ ಕೊರೊನಾ ಸೋಂಕಿತ ಮಹಿಳೆ ಈಗಾಗಲೇ ಗುಣಮುಖರಾಗಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದರೆ ಯಾವುದೇ ತೊಂದರೆ ಇಲ್ಲ. ಕೊರೊನಾ ವೈರಸ್‌ಗೆ ಔಷಧ ಇದೆ ಎಂದು ಹೇಳಿ ಅಚ್ಚರಿ ಮೂಡಿಸಿದರು. ಇದಕ್ಕೆ ಪತ್ರಕರ್ತರು ಔಷಧ ಯಾವುದು ಹೇಳಿ ಎಂದು ಪ್ರಶ್ನಿಸಿದಾಗ, ನಾನು ಹೇಳಿದ್ದು ಆ ರೀತಿ ಅಲ್ಲ ಎಂದು ನುಣುಚಿಕೊಂಡರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.