ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ; ಪೇಜಾವರ ಶ್ರೀ ಅಭಿಮತ

ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತಿ ಸಂಪನ್ನ

Team Udayavani, Mar 18, 2024, 1:36 PM IST

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ;ಪೇಜಾವರ ಶ್ರೀ ಅಭಿಮತ

ಬೆಂಗಳೂರು: ಗೋವುಗಳ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿಸುತ್ತದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

‘ಕಲಿಯುಗದ ಕಾಮಧೇನು-ಕಲ್ಪವೃಕ್ಷ’ ಎಂದೇ ಜಗನ್ಮಾನ್ಯರಾದ ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತಿ ಪ್ರಯುಕ್ತ ರಾಜಧಾನಿ ಜಯನಗರದ 5ನೇ ಬಡಾವಣೆಯ ರಾಯರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ ಅವರು ವೃಂದಾವನಕ್ಕೆ ಲಕ್ಷ ಪುಷ್ಪಾರ್ಚನೆಯನ್ನು ಮಾಡಿದ ಸಂದರ್ಭ ‘ಪ್ರಸನ್ನ ವಚನಂ ಧ್ಯಾಯೇತ್’ ಕೃತಿ ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.

ಗುರು ರಾಯರಿಗೆ ಹಾಲಿನ ಅಭಿಷೇಕ ಸಮರ್ಪಣೆ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ.ಅದರ ನೂರು ಪಟ್ಟು ಅನುಗ್ರಹವನ್ನೂ ಮಾಡುತ್ತಾರೆ. ಆ ಕಾರಣಕ್ಕಾದರೂ ನಾವು ಶುದ್ಧ ಭಾರತೀಯ ತಳಿಯ ಗೋ ಸಂಪತ್ತನ್ನು ( ಕಾಮಧೇನುಗಳನ್ನು) ಪಾಲನೆ ಮಾಡಬೇಕು ಎಂದು ಹೇಳಿದರು.

ಪ್ರಸನ್ನ ವಚನಂ ಧ್ಯಾಯೇತ್- ಕೃತಿ ಬಗ್ಗೆ ಮಾತನಾಡಿದ ಅವರು, ಗೋಸಂರಕ್ಷಣೆ, ಗೋವಿನ ಮಹತ್ವವನ್ನು ಸಾರುವ ಅನೇಕ ಲೇಖನಗಳನ್ನು ನಾವು ಬರೆದಿದ್ದೆವು. ಅವುಗಳನ್ನು ಸಮಗ್ರವಾಗಿ ಸಂಗ್ರಹ ಮಾಡಿ, ಸಂಪಾದಿಸಿ ಕೃತಿ ರೂಪದಲ್ಲಿ ಹೊರತಂದಿರುವ ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸ ಶ್ಯಾಮಾಚಾರ್ಯ ಬಂಡಿ ಅವರ ಶ್ರಮ ಮಾನ್ಯವಾದದ್ದು ಎಂದರು. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಗೋ ಸೇವೆಗಾಗಿಯೇ ಮೀಸಲಿರಿಸಿರುವುದು ಅವರ ಗುರುಭಕ್ತಿಯ ಪ್ರತೀಕವಾಗಿದೆ ಎಂದು ಶ್ರೀಗಳು ಶ್ಲಾಘಿಸಿದರು.

ಮಹಾಭಾಗ್ಯ ದೊರಕಿದೆ:
ಕೃತಿ ಸಂಪಾದಕ ಮತ್ತು ಅರಣ್ಯಕ ಪ್ರಕಾಶನದ ಮುಖ್ಯಸ್ಥ ಶ್ಯಾಮಾಚಾರ್ಯ ಬಂಡಿ ಮಾತನಾಡಿ, ಪೇಜಾವರ ಶ್ರೀಗಳು ಕೇವಲ ಪೀಠಾಧಿಪತಿಯಲ್ಲ, ಸಾಮಾನ್ಯ ಸಂತರಲ್ಲ. ಅವರಲ್ಲಿ ಒಬ್ಬ ಅನನ್ಯ ಸಾಧಕರಿದ್ದಾರೆ. ಉತ್ತಮ ಸಾಹಿತಿಯೂ ಇದ್ದಾರೆ. ಗೋ ಸೇವೆ ಮತ್ತು ಗೋಪಾಲ ಕೃಷ್ಣನ ಸೇವೆಯೇ ಅವರ ಪರಮೋದ್ದೇಶ. ಆ ಮೂಲಕ ಅವರು ವಿಶ್ವವೇ ಮೆಚ್ಚುವ ಮರ್ಯಾದಾ ಪುರುಷೋತ್ತಮ ಶ್ರೀರಾಮನನ್ನು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಗುರುಗಳ ಲೇಖನಗಳನ್ನು ಸಂಗ್ರಹಿಸಿ, ಸಂಪಾದಿಸಿ, ಹೊರತರುವ ಭಾಗ್ಯ ನನಗೆ ದೊರಕಿರುವುದು ಮಹಾಪುಣ್ಯ ಎಂದರು.

ಶ್ರೀ ವಿಶ್ವಪ್ರಸನ್ನ ತೀರ್ಥರು ಗುರುರಾಜರ ಭವ್ಯ ವೃಂದಾವನಕ್ಕೆ ಲಕ್ಷ ಪುಷ್ಪಾರ್ಚನೆ ಮಾಡುವ ಮೂಲಕ ನೆರೆದ ಭಕ್ತ ಜನತೆಗೆ ಧನ್ಯತೆಯ ಭಾವವನ್ನು ಉಂಟು ಮಾಡಿದರು. ಸಂಸ್ಥಾನ ಪೂಜೆ, ಪ್ರಸಾದ ವಿತರಣೆ ಮೂಲಕ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ ಸಂಪನ್ನಗೊಂಡಿತು. ಮಠದ ವ್ಯವಸ್ಥಾಪಕ ಆರ್. ವಾದೀಂದ್ರಾಚಾರ್ಯ, ನಂದಕಿಶೋರ ಮತ್ತು ಸಿಬ್ಬಂದಿ ಇದ್ದರು.

ಅಖಂಡ ಭಾರತ ಎಂಬುದು ಶ್ರೀ ರಾಮನು ಆಳಿದ ಪುಣ್ಯ ಭೂಮಿ. ಭಾರತೀಯ ಸನಾತನ ಪರಂಪರೆಯ ವೇದ, ಯೋಗ ಮತ್ತು ಅಧ್ಯಾತ್ಮ ಜ್ಞಾನಗಳನ್ನು ರಕ್ಷಣೆ ಮಾಡುವಂತೆ ಗೋ ಸಂಪತ್ತನ್ನೂ ರಕ್ಷಿಸಿದರೆ ನಮ್ಮ ನಾಡು ಮತ್ತೆ ರಾಮರಾಜ್ಯ ಆಗುತ್ತದೆ. ತ್ರೇತಾಯುಗ ಮರಳಿ ಬರುತ್ತದೆ. ಭಾರತ ವಿಶ್ವಗುರುವಾಗುತ್ತದೆ. ಅಂಥಾ ರಾಮರಾಜ್ಯದ ಕನಸು ಈಡೇರಿಸಲು ಎಲ್ಲ ಭಕ್ತರೂ ಸಂಕಲ್ಪ ಮಾಡಬೇಕು. ಸನ್ಮಾರ್ಗದಲ್ಲಿ ನಡೆಯಬೇಕು.

ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಪೇಜಾವರ ಅಧೋಕ್ಷಜ ಮಠ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.