ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ನೀತಿ: ಎಚ್ಡಿಕೆ
Team Udayavani, Apr 14, 2018, 12:01 PM IST
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರು ಬೀದಿಯಲ್ಲಿ ನಿಂತು ಹೋರಾಟಕ್ಕೆ ಅವಕಾಶ ನೀಡುವುದಿಲ್ಲ. 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೃಷಿ ನೀತಿ ಜಾರಿಗೆ ತಂದು ರೈತರ ಸಾಲಮನ್ನಾ ಜತೆಗೆ ಮತ್ತೆ ಅವರು ಸಾಲದ ಶೂಲಕ್ಕೆ ಸಿಲುಕದಂತೆ ನೋಡಿಕೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ಕಾರ್ಪೋರೇಷನ್ ಸರ್ಕಲ್ ಬಳಿ ಇರುವ ದೇವಾಂಗ ಸಂಘದ ಸಭಾಂಗಣದಲ್ಲಿ ಶುಕ್ರವಾರ ರೇಷ್ಮೆ ಬೆಳೆಗಾರರು, ರೇಷ್ಮೆ ಮೊಟ್ಟೆ ಉತ್ಪಾದಕರು, ನೂಲು ಬಿಚ್ಚಾಣಿಕೆದಾರರು ಮತ್ತು ನೇಕಾರರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರಸ್ತುತ ಇರುವ ಕೃಷಿ ನೀತಿ ಬದಲಾವಣೆ ಮಾಡಿ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು.
ರೇಷ್ಮೆ ಬೆಳೆಗಾರರ ಅನುಕೂಲಕ್ಕಾಗಿ ರೇಷ್ಮೆ ಕಾರಿಡಾರ್ ನಿರ್ಮಾಣ, ಮ್ಯೂಸಿಯಂ ಸ್ಥಾಪನೆ, ರೇಷ್ಮೆಗೂ ಬೆಂಬಲ ಬೆಲೆ ನೀಡುವ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಪ್ರತಿ ತಿಂಗಳು ವಿಧಾನಸೌಧದಲ್ಲಿ ರೇಷ್ಮೆ ಬೆಳೆಗಾರರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರು, ನೇಕಾರರು ಪಾಲ್ಗೊಂಡಿದ್ದರು.
ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋಗಲ್ಲ: ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣಾವದರೆ ಕಾಂಗ್ರೆಸ್ ಅಥವಾ ಬಿಜೆಪಿ ಮನೆ ಬಾಗಿಲಿಗೆ ಹೋಗದೆ ಅಧಿಕಾರದಿಂದ ದೂರವೇ ಉಳಿಯುವುದಾಗಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗುವ ಸಂದರ್ಭ ಎದುರಾದರೆ ಅದರಿಂದ ದೂರವೇ ಉಳಿಯುತ್ತೇನೆ.
ಜೆಡಿಎಸ್ ಅಧಿಕಾರಕ್ಕೆ ಬರುವ ವಿಚಾರದಲ್ಲಿ ನಾನು ಭ್ರಮಾಲೋಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ನಾನು ಭ್ರಮಾಲೋಕದಲ್ಲಿಲ್ಲ, ಜನತಾ ಲೋಕದಲ್ಲಿದ್ದೇನೆ. ಇನ್ನು ಒಂದು ತಿಂಗಳು ಕಾದರೆ ಯಾರು ಭ್ರಮಾಲೋಕದಲ್ಲಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು.
ಮಾಜಿ ಪ್ರಧಾನಿ ದೇವೇಗೌಡರು ಅಮರೇಂದ್ರ ಬಾಹುಬಲಿ. ಎಚ್.ಡಿ.ಕುಮಾರಸ್ವಾಮಿ ಮಹೇಂದ್ರ ಬಾಹುಬಲಿ, ಪಿಜಿಆರ್.ಸಿಂಧ್ಯಾ ಕಟ್ಟಪ್ಪ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಲ್ಲಾಳದೇವ. ಕರ್ನಾಟಕದಲ್ಲಿ ಸಮರದ ಫಲಿತಾಂಶ ಇನ್ನು ಒಂದು ತಿಂಗಳಲ್ಲಿ ಗೊತ್ತಾಗುತ್ತದೆ.
-ಟಿ.ಎ.ಶರವಣ, ವಿಧಾನಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್