ಎಂಬೆಸ್ಸಿ ಸಂಸ್ಥೆಯಿಂದ ಅಕ‹ಮ ಒತ್ತುವರಿ: ಆರೋಪ


Team Udayavani, Dec 8, 2017, 5:24 PM IST

579280.jpg

ಬೆಂಗಳೂರು: ಸಚಿವ ಕೆ.ಜೆ.ಜಾರ್ಜ್‌ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್‌ ಟೆಕ್‌ಪಾರ್ಕ್‌ ಸರ್ಕಾರಿ ಜಮೀನು ಒತ್ತುವರಿ ಮಾಡಿರುವುದಲ್ಲದೆ, ವಾರ್ಷಿಕ ಬಿಬಿಎಂಪಿಗೆ 9 ಕೋಟಿಗೂ ಹೆಚ್ಚಿನ ಆಸ್ತಿ ತೆರಿಗೆ ವಂಚಿಸುತ್ತಿದೆ ಎಂದು ಬಿಜೆಪಿ ನಗರ ವಕ್ತಾರ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬೆಂಗಳೂರು ಪೂರ್ವ ತಾಲೂಕಿನಲ್ಲಿ ಜಾರ್ಜ್‌ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್‌ ಟೆಕ್‌ಪಾರ್ಕ್‌ ನಿರ್ಮಾಣಕ್ಕಾಗಿ 18 ಸರ್ವೆ ನಂಬರ್‌ಗಳಲ್ಲಿ ಒಟ್ಟು 52.03 ಎಕರೆ ಕ್ರಯಕ್ಕೆ ಪಡೆದಿದೆ. ಆದರೆ, ಅದರೊಂದಿಗೆ 850 ಕೋಟಿ ಮೌಲ್ಯದ 13 ಎಕರೆ
ಸರ್ಕಾರಿ ಜಮೀನು ಒತ್ತುವರಿ ಮಾಡಿ ಟೆಕ್‌ಪಾರ್ಕ್‌ ನಿರ್ಮಿಸಲಾಗಿದೆ ಎಂದು ದೂರಿದರು.

ಸಿಬಿಐ ತಿನಿಖೆಗೆ ಒತ್ತಾಯ: ಈ ಹಿಂದೆ ಕೆ.ಜೆ. ಜಾರ್ಜ್‌ ವಸತಿ ಸಚಿವರಾಗಿದ್ದಾಗ ಸರ್ಕಾರಿ ಜಮೀನನ್ನು ರೈತರಿಗೆ ಮ್ಯುಟೇಷನ್‌ ರಿಜಿಸ್ಟರ್‌ ಮಾಡಿಕೊಡಲಾಗಿದೆ. ನಂತರದಲ್ಲಿ ಅವರಿಂದ 52.03 ಎಕರೆಯನ್ನು ಟೆಕ್‌ಪಾರ್ಕ್‌ಗಾಗಿ ಕ್ರಯಕ್ಕೆ ಪಡೆಯಲಾಗಿದೆ. ಒಟ್ಟು 52.03 ಎಕರೆ ಪೈಕಿ ಶಾಂತಿನಗರ ಶಾಸಕ ಎನ್‌.ಎ.ಹ್ಯಾರೀಸ್‌ ಕುಟುಂಬದವರಿಂದ 4.01 ಎಕರೆ ಜಮೀನು ಕ್ರಯಕ್ಕೆ ಪಡೆಯಲಾಗಿದ್ದು, ಹ್ಯಾರೀಸ್‌ ಕುಟುಂಬದವರಿಗೆ ಈ ಜಮೀನು ಹೇಗೆ ಬಂತು ಎಂಬ ದಾಖಲೆಗಳಿಲ್ಲ. ಆ ಮೂಲಕ ಒಟ್ಟು 65 ಎಕರೆಗೆ ಮ್ಯುಟೇಷನ್‌ ರಿಜಿಸ್ಟರ್‌ನಲ್ಲಿಯೂ ಅವ್ಯವಹಾರ ನಡೆದಿರುವ ಅನುಮಾನವಿದ್ದು, ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ತಪ್ಪು ಮಾಹಿತಿ: ಒಟ್ಟು 65 ಎಕರೆ ಪ್ರದೇಶದಲ್ಲಿ ಹಿಲ್ಟನ್‌ ಪಂಚತಾರಾ ಹೋಟೆಲ್‌ ಸೇರಿದಂತೆ 23 ಕಟ್ಟಡ ಗಳನ್ನು ನಿರ್ಮಿಸಲಾಗಿದೆ. ಟೆಕ್‌ಪಾರ್ಕ್‌ನ ನಿರ್ಮಿತ ಪ್ರದೇಶ (ಬಿಲ್ಟ್ಅಪ್‌ ಏರಿಯಾ) 45 ಲಕ್ಷ ಚದರ ಅಡಿಗಳಿದ್ದರೂ, ಸ್ವಯಂ ಘೋಷಿತ ಆಸ್ತಿ ವ್ಯವಸ್ಥೆಯಡಿ ಟೆಕ್‌ಪಾರ್ಕ್‌ ಪಾಲಿಕೆಗೆ ನಿರ್ಮಿತ ಪ್ರದೇಶ 4,79,729 ಚದರ ಅಡಿ ಎಂದು ತಪ್ಪು
ಮಾಹಿತಿ ನೀಡಿದೆ. ಅದರಂತೆ ವಾರ್ಷಿಕ ಕೇವಲ 1.24 ಕೋಟಿ ರೂ. ತೆರಿಗೆ ಪಾವತಿಸುತ್ತಿದ್ದು, 9 ಕೋಟಿ ರೂ. ಗೂ ಅಧಿಕ ಆಸ್ತಿ ತೆರಿಗೆ ವಂಚಿಸುತ್ತಿದೆ ಎಂದು ದೂರಿದರು.

ಆ ಹಿನ್ನೆಲೆಯಲ್ಲಿ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ, ಸರ್ಕಾರಿ ಜಮೀನಿಗೆ ಮ್ಯುಟೇ ಷನ್‌ ನೀಡಿದ ಹಿಂದಿನ ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌, ಕಾನೂನು ಬಾಹಿರವಾಗಿ ನಕ್ಷೆ ಹಾಗೂ ಸ್ವಾಧೀನಾನುಭವ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್, ನಗರದ ಎಸಿಎಂಎಂ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.

ಯಾರಾದರೂ ಜವಾಬ್ದಾರಿ ಯುತವಾಗಿ ಮಾಡಿದ ಆರೋಪಗಳಿಗೆ ಉತ್ತರಿಸುತ್ತೇನೆ. ಆದರೆ, ನಿಮ್ಹಾನ್ಸ್‌ನಲ್ಲಿರ
ಬೇಕಾದವರು ಬೀದಿಯಲ್ಲಿ ನಿಂತು ಮಾಡುವ ಆರೋಪಗಳಿಗೆ ಉತ್ತರ ಕೊಡುವುದಿಲ್ಲ. ಏನು ಅವ್ಯವಹಾರ ಎಂಬುದಕ್ಕೆ ದಾಖಲೆ ಇದ್ದರೆ ಮಾಧ್ಯಮದವರು ಆ ವಿಚಾರದಲ್ಲಿ ನನ್ನನ್ನು ಪ್ರಶ್ನಿಸಿ. ನನ್ನ ವಿರುದ್ಧ ಆರೋಪ ಮಾಡಿರುವ ಎನ್‌.ಆರ್‌.ರಮೇಶ್‌ಗೆ ಮೆಂಟಲ್‌ ಆಸ್ಪತ್ರೆಗೆ ಹೋಗಲು ಹೇಳಿ. ಕೆ.ಜೆ.ಜಾರ್ಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ

ಕಾನೂನು ಉಲ್ಲಂಘನೆ: ಎಂಬೆಸ್ಸಿ ಸಂಸ್ಥೆಯು ರೈತರಿಂದ ಕ್ರಯಕ್ಕೆ ಪಡೆವಾಗ “ವಾಸದ ಉದ್ದೇಶ’ಕ್ಕಾಗಿ ಭೂ ಪರಿವರ್ತನೆ ಮಾಡಲಾಗಿದೆ. ಪರಿವರ್ತನೆ ಬಳಿಕ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಮತ್ತು ನಗರ ಯೋಜನೆ ಎಂಜಿನಿಯರ್‌ ಕಾನೂನು ಬಾಹಿರವಾಗಿ ನಕ್ಷೆ ಮಂಜೂರಾತಿ ನೀಡಿದ್ದರಿಂದ ಒಟ್ಟು ಜಮೀನಿನ ಶೇ.90ರಷ್ಟು ಭಾಗದಲ್ಲಿ ವಾಣಿಜ್ಯ ಉದ್ದೇಶಿತ ಕಟ್ಟಡಗಳನ್ನು ನಿರ್ಮಿಸಿ ಕಾನೂನು ಉಲ್ಲಂ ಸಲಾಗಿದೆ ಎಂದು ರಮೇಶ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.