ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ: ಬಾಲಕ ಸಾವು
Team Udayavani, Mar 6, 2023, 1:47 PM IST
ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಾಲಕ ದುರ್ಮರಣ ಹೊಂದಿರುವ ಪ್ರಕರಣ ಹೆಬ್ಟಾಳದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಹೆಬ್ಟಾಳದ ಗುಡ್ಡದಹಳ್ಳಿಯ ನಿವಾಸಿ ಮಹೇಶ್ (13) ಮೃತಪಟ್ಟಿದ್ದಾನೆ.
ದೇವರಾಜ್ ಅವರಿಗೆ ಸೇರಿದ ಸಿಲಿಂಡರ್ ಅಂಗಡಿಯೊಂದರಲ್ಲಿ ರಿಯಾಕತ್ ಅಕ್ರಮವಾಗಿ ಸಿಲಿಂಡರ್ ರಿಫಿಲ್ಲಿಂಗ್ ಮಾಡುವಾಗ ಉಂಟಾದ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿತ್ತು. ಸ್ಫೋಟದ ರಭಸಕ್ಕೆ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಬಳಿ ಆಟವಾಡುತ್ತಿದ್ದ ಮಹೇಶ್ ದೇಹ ಛಿದ್ರಗೊಂಡಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಪೋಷಕರು ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಆರೋಪಿ ರಿಯಾಕತ್ ಪರಾರಿಯಾಗಿದ್ದು, ಹೆಬ್ಟಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾದಗಿರಿಯ ರಾಮಸಮುದ್ರ ಮೂಲದ ಮಲ್ಲಪ್ಪ, ಸರಸ್ಪತಿ ದಂಪತಿ ಎರಡನೇ ಮಗ ಮಹೇಶ್, ಚೋಳನಾಯ ನಕಹಳ್ಳಿಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತನ ಪಾಲಕರು ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ