ಕಸ ಗುಡಿಸುವ ಯಂತ್ರ ಖರೀದಿಯಲ್ಲಿ ಅಕ್ರಮ; ಲೋಕಾಕ್ಕೆ ದೂರು ಸಲ್ಲಿಕೆ
Team Udayavani, Jun 10, 2017, 12:40 PM IST
ಬೆಂಗಳೂರು: ಕಸ ಸಾಗಿಸುವ 25 ಕಾಂಪ್ಯಾಕ್ಟರ್ ವಾಹನಗಳು ಹಾಗೂ ಕಸ ಗುಡಿಸುವ ಯಂತ್ರಗಳ ಖರೀದಿ ಹಾಗೂ ನಿರ್ವಹಣೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಮೂವರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.
ಅವ್ಯವಹಾರದಲ್ಲಿ ಬಿಬಿಎಂಪಿ ಆರೋಗ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ಇಲಾಖೆ ಜಂಟಿ ಆಯುಕ್ತ ಸಫìರಾಜ್ ಖಾನ್, ಕಾರ್ಯಪಾಲಕ ಎಂಜಿನಿಯರ್ ಹೇಮಲತಾ ಹಾಗೂ ಲೋಕೇಶ್ ಪಾತ್ರವಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಅವರು ಲೋಕಾಯುಕ್ತರಿಗೆ ಶುಕ್ರವಾರ ದೂರು ನೀಡಿದ್ದಾರೆ.
ಬಿಬಿಎಂಪಿ 2016-17ನೇ ಸಾಲಿನಲ್ಲಿ 25 ಕಾಂಪ್ಯಾಕ್ಟರ್ ವಾಹನಗಳನ್ನು ತಲಾ 35 ಲಕ್ಷ ರೂ.ಗೆ ಮೆ. ಟಿ.ಪಿ.ಎಸ್ ಇನ್ಫ್ರಾಸ್ಟ್ರಕ್ಚರ್ ಮೂಲಕ ಖರೀದಿ ಮಾಡಿತ್ತು. ಆದರೆ, ವಾಹನಗಳ ಮಾರುಕಟ್ಟೆ ಮೌಲ್ಯ 21.60 ಲಕ್ಷ ರೂ. ಆಗಿದೆ. ಮಾರುಕಟ್ಟೆ ಬೆಲೆಯನ್ನು ಪರಿಗಣಿಸದೆ 3.35 ಕೋಟಿ ರೂ. ನೀಡಿ ವಾಹನ ಖರೀದಿ ಮಾಡಲಾಗಿದೆ.
ಅದೇ ರೀತಿ ಇತ್ತೀಚೆಗೆ ಟಿ.ಪಿ.ಎಸ್.ಸಂಸ್ಥೆಯಿಂದ ರಸ್ತೆ ಗುಡಿಸುವ 9 ಯಂತ್ರಗಳನ್ನು ಖರೀದಿ ಮಾಡಿ, ನಿರ್ವಹಣೆ ಗುತ್ತಿಗೆ ನೀಡಲಾಗಿದ್ದು, ಈ ಮೂಲಕ ಕೋಟ್ಯಂತರ ರೂ. ಅಕ್ರಮ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ