ಕಸಾಯಿಖಾನೆಯಲ್ಲಿ ಅಕ್ರಮ
Team Udayavani, Mar 24, 2017, 11:35 AM IST
ಬೆಂಗಳೂರು: ಹಾರೋಹಳ್ಳಿಯಲ್ಲಿ ಕಾಸಾಯಿಖಾನೆ ನಿರ್ಮಿಸುವ ಒಪ್ಪಂದವನ್ನು ಬಿಬಿಎಂಪಿ ಕಾನೂನು ಬಾಹಿರವಾಗಿ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದೆ ಎಂದು ಪಾಲಿಕೆ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಸಾಯಿಖಾನೆ ನಿರ್ಮಾಣಕ್ಕೆ ಪಾಲಿಕೆ ಟೆಂಡರ್ ಆಹ್ವಾನಿಸಿ ಚೆನ್ನೈ ಅಬಾಟಿಯರ್ ಮತ್ತು ಸಗ್ ಇನಾಸ್ಟ್ರಕ್ಚರ್ ಕಂಪನಿಗೆ ವಹಿಸಿತ್ತು. ಆನಂತರದಲ್ಲಿ ಸಗ್ ಸಂಸ್ಥೆ ಪಾಲಿದಾರಿಕೆಯಿಂದ ಹೊರನಡೆದಿತ್ತು. ಈ ವೇಳೆ ಅಬಾಟಿಯರ್ ಸಂಸ್ಥೆ ಕ್ಯಾಪ್ರಿಮೀಟ್ ಎಂಬ ಹೆಸರಿ ನೊಂದಿಗೆ ನಿರ್ವಹಣೆ ಗುತ್ತಿಗೆಯನ್ನು ಪಡೆದಿದ್ದು, ಪಾಲಿಕೆಯ ಅಧಿಕಾರಿಗಳು ಕಾನೂನು ಬಾಹಿರವಾಗಿ ಅವರಿಗೆ ಐದು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ,” ಎಂದು ದೂರಿದರು.
ಕಸಾಯಿಖಾನೆ ನಿರ್ವಹಣೆಗೆ 28.40 ಕೋಟಿ ರೂ.ಗಳನ್ನು ನೀಡಬೇಕೆಂದು ಕೋರಿದ್ದ ಕಂಪನಿ ನಂತರದಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ವಾರ್ಷಿಕ 14.25 ಕೋಟಿ ರೂ.ಗಳಿಗೆ ಒಪ್ಪಿತ್ತು. ಆದರೆ, 19.80 ಕೋಟಿ ರೂ. ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ