ಪ್ರಧಾನಮಂತ್ರಿ ಆವಾಸ್ ಹಣದಲ್ಲಿ ಅವ್ಯವಹಾರ
Team Udayavani, Mar 27, 2018, 12:05 PM IST
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ಹಣದಲ್ಲಿ ನೂರಾರು
ಕೋಟಿ ರೂ. ಅವ್ಯವಹಾರ ನಡೆದಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಗರ ಘಟಕದ ವಕ್ತಾರ ಎನ್.ಆರ್. ರಮೇಶ್ ಆಗ್ರಹಿಸಿದ್ದಾರೆ.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಎಲ್ಲರಿಗೂ ಸೂರು ಕಲ್ಪಿಸಲು ಜಾರಿಗೆ ತಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಮೂರು ಹಂತಗಳಲ್ಲಿ ನಿಯಮ ಬಾಹಿರವಾಗಿ ಟೆಂಡರ್ ಕರೆಯಲಾಗಿದೆ. ಅಷ್ಟೇ ಅಲ್ಲ, ಅನುಮೋದಿತ ಟೆಂಡರ್ಗಳಲ್ಲಿ ಗುತ್ತಿಗೆದಾರರು ಸರಾಸರಿ ಶೇ. 20ರಷ್ಟು ಹೆಚ್ಚು ಮೊತ್ತ ನಮೂದು ಮಾಡಿದ್ದಾರೆ. ಇಡೀ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಆರ್.ವಿ.
ದೇವರಾಜ್ ಅವರು “ಕಿಕ್ಬ್ಯಾಕ್’ ಪಡೆದಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
800 ಕೋಟಿ ಲೂಟಿ: ಒಟ್ಟಾರೆ ಮೂರು ಹಂತಗಳಲ್ಲಿ ಕೈಗೆತ್ತಿಕೊಂಡ ಯೋಜನೆಯಲ್ಲಿ 1 ಮತ್ತು 2ನೇ ಹಂತದಲ್ಲಿ 300 ಕೋಟಿ ರೂ. ಹಾಗೂ 3ನೇ ಹಂತದಲ್ಲಿ 562 ಕೋಟಿ ರೂ. ಹೆಚ್ಚುವರಿ ಪಡೆಯಲಾಗಿದ್ದು, 800 ಕೋಟಿ ರೂ. ಗಳಿಗೂ ಅಧಿಕ ಲೂಟಿಯಾಗಿದೆ. ಇದರಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಭೀಮಪ್ಪ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಕೂಡ ಶಾಮೀಲಾಗಿದ್ದಾರೆ ಎಂದೂ ದೂರಿದರು.
ಮಾಹಿತಿ ಅಲಭ್ಯ: ಮೊದಲ ಹಂತದಲ್ಲಿ 882 ಕೋಟಿ ವೆಚ್ಚದಲ್ಲಿ 16,293 ಮನೆಗಳ ನಿರ್ಮಾಣಕ್ಕೆ ಹಾಗೂ 3ನೇ ಹಂತದಲ್ಲಿ 2,662 ಕೋಟಿ ವೆಚ್ಚದಲ್ಲಿ 49,368 ಮನೆಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ. 2ನೇ ಹಂತದ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಕೇಳಿದರೂ ಕೊಡುತ್ತಿಲ್ಲ ಎಂದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ಸಲ್ಲಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೂ ದೂರು ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್