ಐಬಿಸಿಯಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸುಧಾರಣೆ
Team Udayavani, Sep 23, 2018, 6:00 AM IST
ಬೆಂಗಳೂರು: ಕೇಂದ್ರ ಸರ್ಕಾರವು ನೂತನವಾಗಿ ಜಾರಿಗೊಳಿಸಿರುವ ದಿವಾಳಿತನ ಸಂಹಿತೆಯಿಂದಾಗಿ(ಐಬಿಸಿ) ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಬಿಜೆಪಿ ಆರ್ಥಿಕ ಪ್ರಕೋಷ್ಠವತಿಯಿಂದ ಆಯೋಜಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕ್ರಮಬದ್ಧ ಆರ್ಥಿಕ ಸುಧಾರಣೆಗಳು ಮತ್ತು ಸಾಮಾನ್ಯ ಜನರ ಮೇಲಿನ ಪ್ರಭಾವ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ಸಾಲ ವಸೂಲಾತಿ ವಿಷಯದಲ್ಲಿ ಮಧ್ಯಮ, ಶ್ರೀಮಂತ ಎಂಬ ಭೇದವಿಲ್ಲದೆ ಎಲ್ಲಾ ಉದ್ಯಮಿಗಳನ್ನು ಸಮಾನವಾಗಿ ಪರಿಗಣಿಸುತ್ತಿವೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ದಿವಾಳಿತನ ಸಂಹಿತೆಯನ್ನು (ಐಬಿಸಿ) ಜಾರಿಗೊಳಿಸಿದೆ. ಇದರಿಂದ ಮಧ್ಯಮ ಉದ್ಯಮಗಳು ಸಾಲ ಮರುಪಾವತಿ ಮಾಡದಿದ್ದರೆ ಸಾಲ ವಸೂಲಿ ಮಾಡಲು ಯಾವ ಕ್ರಮಗಳನ್ನು ಅನುಸರಿಸಲಾಗುತ್ತದೆಯೋ ಅದೇ ಕ್ರಮಗಳನ್ನು ಶ್ರೀಮಂತ ಉದ್ಯಮಿಗಳ ವಿರುದ್ಧವೂ ಕೈಗೊಳ್ಳಲಾಗುತ್ತಿದೆ. ಸುಸ್ತಿದಾರ ಕಂಪನಿಗಳನ್ನು ಸಾಲ ವಸೂಲಾಗದ (ಎನ್ಪಿಎ) ವರ್ಗಕ್ಕೆ ಸೇರಿಸಿದರೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದರು.ನೋಟು ಅಮಾನ್ಯಿàಕರಣ ಬಳಿಕ ಜನರು ಕಷ್ಟಪಟ್ಟಿದ್ದರು. ಆದರೆ, ತೆರಿಗೆ ಪಾವತಿಯಿಂದ ದೂರ ಉಳಿದವರನ್ನು ಪತ್ತೆ ಮಾಡಲು ನೋಟು ಅಮಾನ್ಯಿàಕರಣ ಸಹಕಾರಿಯಾಗಿದೆ ಎಂದು ಹೇಳಿದರು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೂ ಮುನ್ನ ಸಣ್ಣಪುಟ್ಟ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಹೊರರಾಜ್ಯಗಳಿಗೆ ಮಾರಾಟ ಮಾಡಲು ಕಷ್ಟಪಡಬೇಕಾಗಿತ್ತು. ಜಿಎಸ್ಟಿಯಿಂದ ಇದಕ್ಕೆಲ್ಲಾ ಮುಕ್ತಿ ಸಿಕ್ಕಂತಾಗಿದೆ. ಹೊರರಾಜ್ಯಗಳಿಗೆ ಸುಲಭವಾಗಿ ತಮ್ಮ ಉತ್ಪನ್ನಗಳನ್ನು ತಲುಪಿಸಬಹುದಾಗಿದೆ. ಯಾವುದೇ ರೀತಿಯಾಗಿ ಅಧಿಕಾರಿಗಳ ಕಿರುಕುಳ ಇಲ್ಲವಾಗಿದೆ ಎಂದುಹೇಳಿದರು. ವಿಧಾನಪರಿಷತ್ ಸದಸ್ಯ ರವಿಕುಮಾರ್, ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕ ವಿಶ್ವನಾಥ್ ಭಟ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ