![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸಾಕುನಾಯಿಗಳಿಗೆ ಪರವಾನಗಿ ಜತೆಗೆ ಮೈಕ್ರೊಚಿಪ್ ಅಳವಡಿಕೆ
Team Udayavani, Apr 15, 2017, 11:53 AM IST
![dog2.jpg](https://www.udayavani.com/wp-content/uploads/2017/04/15/dog2.jpg)
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಾಗರಿಕರು ಇನ್ಮುಂದೆ ತಮ್ಮ ಮನೆಗಳಲ್ಲಿ ನಾಯಿ ಸಾಕಲು ಬಿಬಿಎಂಪಿ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದ್ದು, ಈ ಕುರಿತ ಪಾಲಿಕೆ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆಯಿಂದ ಸದ್ಯದಲ್ಲೇ ಅನುಮತಿ ದೊರೆಯುವ ಸಾಧ್ಯತೆಯಿದೆ.
ಪಾಲಿಕೆಯ ಪಶುಪಾಲನಾ ಇಲಾಖೆ ಅಧಿಕಾರಿಗಳು ಕೆಲ ತಿಂಗಳ ಹಿಂದೆ ನಾಯಿ ಸಾಕುವ ಸಂಬಂಧ ನಿಯಮಾವಳಿ ರೂಪಿಸಿ, ಸರ್ಕಾರದ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿದ್ದರು. ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ ಕೂಡಲೇ ನಾಯಿ ಸಾಕಲು ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ.
2013ರಲ್ಲಿಯೇ ನಾಯಿ ಸಾಕಲು ಪರವಾನಗಿ ನೀಡುವ ಸಂಬಂಧ ನಿಯಮ ರೂಪಿಸಿ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಾಗಿತ್ತು. ಆದರೆ, ಅದು ಸಮರ್ಪಕವಾಗಿಲ್ಲವೆಂದು ತಿರಸ್ಕೃತಗೊಂಡಿತ್ತು. ಅಧಿಕಾರಿಗಳು ಆ ಪ್ರಸ್ತಾವನೆ ಪರಿಷ್ಕರಿಸಿ ಮತ್ತೂಮ್ಮೆ ಸಲ್ಲಿಸಿದ್ದರು.
ಪರವಾನಗಿ ಶುಲ್ಕ 250 ರೂ: ಮಾಲೀಕರು ನಾಯಿ ಸಾಕಲು ಪರವಾನಗಿ ಪಡೆಯಲು ಬಿಬಿಎಂಪಿಗೆ 250 ರೂ. ಶುಲ್ಕ ಪಾವತಿಸಬೇಕು. ಅಪಾರ್ಟ್ಮೆಂಟ್ಗಳಲ್ಲಿ ಒಂದು ಫ್ಲ್ಯಾಟ್ಗೆ ಒಂದು ನಾಯಿ ಮತ್ತು ಪ್ರತ್ಯೇಕ ಮನೆಗಳಲ್ಲಿ 2 ಅಥವಾ3 ನಾಯಿ ಸಾಕಲು ಮಾತ್ರ ಅವಕಾಶ ನೀಡಲಾಗುತ್ತದೆ. ಜತೆಗೆ ಅತಿ ದೊಡ್ಡದಾದ ಅಥವಾ ಆಕ್ರಮಣಕಾರಿ ವರ್ತನೆ ತೋರುವ ತಳಿಯ ನಾಯಿ ಸಾಕಲು ಅನುಮತಿ ಸಿಗುವುದಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಮಲ, ಮೂತ್ರ ವಿಸರ್ಜಿಸುವುದು ಕಂಡುಬಂದರೆ ಮೊದಲ ಬಾರಿಗೆ 100 ರೂ. ಮತ್ತು ಎರಡನೇ ಬಾರಿ ಪುನರಾವರ್ತನೆಯಾದರೆ ದಂಡದ ಮೊತ್ತ ದ್ವಿಗುಣಗೊಳ್ಳಲಿದೆ. ಜತೆಗೆ ಪ್ರತಿವರ್ಷ ನಾಯಿ ಸಾಕಲು ಪರವಾನಗಿ ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಮೈಕ್ರೋಚಿಪ್ ಕಡ್ಡಾಯ
ನಾಯಿ ಸಾಕುವವರು ಕಡ್ಡಾಯವಾಗಿ ನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆ ಮಾಡಬೇಕೆಂಬ ನಿಯಮವನ್ನು ಪ್ರಸ್ತಾವನೆಯಲ್ಲಿ ಸೇರಿಸಲಾಗಿದ್ದು, ಚಿಪ್ನಲ್ಲಿ ನಾಯಿ ಹಾಗೂ ಮಾಲೀಕರ ಕುರಿತ ಸಂಪೂರ್ಣ ಮಾಹಿತಿ ಹಾಕಬೇಕು. ಚಿಪ್ ಅಳವಡಿಕೆಯಿಂದ ನಾಯಿಯ ವಯಸ್ಸು, ತಳಿ, ರೇಬಿಸ್ ಲಸಿಕೆ ಹಾಕಿಸಲಾಗಿದೆಯೇ, ನಾಯಿಯ ಮಾಲೀಕರ ವಿವರ ಇರಲಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಾಯಿಗಳನ್ನು ಸಾಕಲು ಕಡ್ಡಾಯವಾಗಿ ಪರವಾನಗಿ ಪಡೆಯುವುದು ಸೇರಿ ಹಲವು ನಿಯಮಗಳ ಜಾರಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ವಿಶ್ವಾಸವಿದ್ದು, ಸರ್ಕಾರದಿಂದ ಅಧಿಸೂಚನೆ ಹೊರಡಿಸಿದ ಕೂಡಲೇ ಪರವಾನಗಿ ಕಡ್ಡಾಯಗೊಳಿಸ ಲಾಗುವುದು.
-ಆನಂದ್, ಪಾಲಿಕೆಯ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.