ಹಲವೆಡೆ ಮುಂದುವರಿದ ಮಳೆ ಅವಘಡ
Team Udayavani, Jun 4, 2018, 6:05 AM IST
ಬೆಂಗಳೂರು/ಮಂಗಳೂರು: ರಾಜಧಾನಿ ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಭಾನುವಾವೂ ಮಳೆ
ಯಾಗಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಚಿಕ್ಕೋಡಿಯಲ್ಲಿ
ರಾಜ್ಯದಲ್ಲೇ ಗರಿಷ್ಠ, 7 ಸೆಂ.ಮೀ. ಮಳೆ ಸುರಿಯಿತು.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೊಂದಿಹಳ್ಳಿಯಲ್ಲಿ ರೇಷ್ಮೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಅವ
ಘಡಕ್ಕೆ ರೆಡ್ಡಪ್ಪ (58) ಎಂಬುವರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಮಳೆ ಬಂದಾಗ ಬೀಸಿದ ಬಾರಿ ಗಾಳಿಗೆ ವಿದ್ಯುತ್ ಸಮಸ್ಯೆ ಉಂಟಾಗಿತ್ತು. ಅದನ್ನು ಸರಿಪಡಿಸುವ ವೇಳೆ ವಿದ್ಯುತ್ ಶಾಕ್ ಹೊಡೆಯಿತು.
ಶಿವಮೊಗ್ಗದಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಹಲವೆಡೆ ಸಂಪರ್ಕ ರಸ್ತೆ ಕಡಿದುಹೋಗಿದ್ದು, ಜನರು ಪರದಾಡುವಂತಾಯಿತು. ತಾಲೂಕಿನ ಹೊರಬೈಲು ಗ್ರಾಮದ ಸಂಪರ್ಕ ರಸ್ತೆ ಬಂದ್ ಆಗಿದ್ದು, ರಸ್ತೆಯಲ್ಲಿ ನಾಲ್ಕೈದು ಅಡಿ ನೀರು ಹರಿಯುತ್ತಿತ್ತು. ಸುತ್ತಮುತ್ತಲ ಗದ್ದೆ, ತೋಟಗಳಿಗೂ ನೀರು ನುಗ್ಗಿದ್ದು, ಹಲವೆಡೆ ಶುಂಠಿ ಗದ್ದೆಗಳಲ್ಲಿ ನೀರು ನುಗ್ಗಿದ ಪರಿಣಾಮ ಬಿತ್ತನೆ ಮಾಡಿದ್ದ ಶುಂಠಿ, ಮೆಕ್ಕೆಜೋಳ ಕೊಚ್ಚಿ ಹೋಗಿದೆ.
ಕರಾವಳಿಯ ಕೆಲವೆಡೆಯೂ ಮಳೆಯಾಗಿದ್ದು, ಕೆದೂರಿನಲ್ಲಿ ಸಿಡಿಲು ಬಡಿದು ಕೆಲ ಮನೆಗಳಿಗೆ ಹಾನಿಯಾಗಿದೆ. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆ ಯಂತೆ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳ ಒಳಹರಿವು ಹೆಚ್ಚಳ
ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ.
ಕೆಆರ್ಎಸ್ನ ನೀರಿನ ಮಟ್ಟ (124.80 ಅಡಿ ಗರಿಷ್ಠ) 75.55 ಅಡಿಗಳಿಗೆ ಏರಿದೆ. ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ(2284.00 ಅಡಿ ಗರಿಷ್ಠ) ನೀರಿನ ಮಟ್ಟ 2258.40 ಅಡಿಗೆ ಏರಿದೆ. ಜಲಾಶಯ ಭರ್ತಿಯಾಗಲು 25.60 ಅಡಿ ಬಾಕಿ ಇದೆ.
ಹಾಸನ ಜಿಲ್ಲೆಯ ಹೇಮಾವತಿಯಲ್ಲಿ (2922.00 ಅಡಿ ಗರಿಷ್ಠ) 2867.50 ಅಡಿ ನೀರು ಸಂಗ್ರಹವಿದ್ದು, ಭರ್ತಿಯಾಗಲು 54.50 ಅಡಿ ಬಾಕಿ ಇದೆ. ಕೊಡಗಿನ ಹಾರಂಗಿಯಲ್ಲಿ (2859.00 ಅಡಿ ಗರಿಷ್ಠ) 2784.23 ಅಡಿ ನೀರು ಸಂಗ್ರಹವಿದ್ದು,ಭರ್ತಿಯಾಗಲು 74.77 ಅಡಿ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ