ತೆಲಂಗಾಣದಲ್ಲಿ ಬಿಜೆಪಿ ಉತ್ತಮ ಸಾಧನೆ
Team Udayavani, May 25, 2019, 3:06 AM IST
ಬೆಂಗಳೂರು: ಹಿಂದಿನ 2014ರ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕೇವಲ ಒಂದು ಸ್ಥಾನವನ್ನಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಉತ್ತಮ ಸಾಧನೆ ತೋರಿದೆ.
ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ಕರೀಂ ನಗರ, ಅದಿಲಾಬಾದ್, ನಿಜಾಮಾಬಾದ್ ಹಾಗೂ ಸಿಕಂದರಾಬಾದ್ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿದೆ.
ತೆಲಂಗಾಣ ಚುನಾವಣಾ ಉಸ್ತುವಾರಿಯಾಗಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಗೆಲುವಿಗಾಗಿ ಸಾಕಷ್ಟು ಶ್ರಮ ವಹಿಸಿದ್ದರು. ಜತೆಗೆ ಕೋಲಾರ ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಸ್ವಾಮಿಯವರ ಹೆಸರನ್ನು ಅರವಿಂದ ಲಿಂಬಾವಳಿಯವರೇ ಶಿಫಾರಸು ಮಾಡಿದ್ದರು.
ಇದೀಗ ಮುನಿಸ್ವಾಮಿಯವರು ಗೆಲುವು ಸಾಧಿಸಿದ್ದಾರೆ ಸಹಜವಾಗಿಯೇ ಸಂತಸ ಮೂಡಿಸಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಅರವಿಂದ ಲಿಂಬಾವಳಿ ಅವರು ಸಿಹಿ ತಿನಿಸಿ ಸಂತಸ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ