ಬಹುಮಹಡಿ ವಸತಿ ಯೋಜನೆಗೆ ಚಾಲನೆ


Team Udayavani, Mar 9, 2019, 6:27 AM IST

bahumahadi.jpg

ಬೆಂಗಳೂರು: ನಗರದ ವಸತಿರಹಿತರಿಗೆ ಸೂರು ಕಲ್ಪಿಸುವ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ರೂಪಿಸಿರುವ “ಒಂದು ಲಕ್ಷ ಬಹುಮಹಡಿ ಬೆಂಗಳೂರು ನಗರ ವಸತಿ ಯೋಜನೆ’ಗೆ ಶುಕ್ರವಾರ ಬೆಟ್ಟಹಲಸೂರು ಗ್ರಾ.ಪಂ.ನ ಕುದುರೆಗೆರೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ 1 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ವಸತಿರಹಿತರಿಗೆ ಸೂರು ಕಲ್ಪಿಸಬೇಕು ಎಂಬ ಉದ್ದೇಶದೊಂದಿಗೆ ಈ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಸರ್ಕಾರಿ ಕಟ್ಟಡಗಳ ಬಗ್ಗೆ ಕೆಲವರಿಗೆ ಅನುಮಾನಗಳಿವೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳುವುದಿಲ್ಲ, ಕಟ್ಟಡಗಳು ಹೆಚ್ಚು ವರ್ಷ ಬಾಳಿಕೆ ಬರುವುದಿಲ್ಲ ಎಂಬ ಆರೋಪಗಳಿವೆ. ಹೀಗಾಗಿ ಪ್ರಸ್ತುತ ಯೋಜನೆಯನ್ನು ಖಾಸಗಿ ನಿರ್ಮಾಣ ಕಂಪನಿಗಳಿಗಿಂತಲೂ ಹೆಚ್ಚು ಗುಣಮಟ್ಟದೊಂದಿಗೆ ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.

ಸಾವಿರ ಎಕರೆ ಭೂಮಿ: ನಗರ ಪ್ರದೇಶದ ನಿವೇಶನ ಕೊರತೆ ನೀಗಿಸುವ ಸಂಬಂಧ ಸರ್ಕಾರ ಬೆಂಗಳೂರಿನ ವಿವಿಧ ಕಡೆ ಸುಮಾರು 1 ಸಾವಿರ ಎಕರೆ ಪ್ರದೇಶವನ್ನು ಕಾಯ್ದಿರಿಸಿದೆ. ಇಲ್ಲಿ 2 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಮೊದಲ ಹಂತದಲ್ಲಿ 50 ಸಾವಿರ ಮನೆಗಳನ್ನು ಕಾಲ ಮಿತಿಯೊಳಗೆ ನಿರ್ಮಿಸಲಾಗುವುದು ಎಂದರು. 

ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಮೂರು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಮನೆಗಳನ್ನು ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ನೀಡಲಾಗುವುದು. ಹಲವು ಮಂದಿ ಆನ್‌ಲೈನ್‌ನಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದರು. ಜಿಲ್ಲಾಧಿಕಾರಿ ವಿಜಯಶಂಕರ್‌, ಬೆಂಗಳೂರು ನಗರ ಜಿ.ಪಂ ಸಿಇಒ ಅರ್ಚನಾ ಮತ್ತಿತರರು ಇದ್ದರು.

ನಿವೇಶನ ವೆಚ್ಚ 8 ಲಕ್ಷ ರೂ.: ವಸತಿ ಯೋಜನೆಗೆ 8 ಲಕ್ಷ ರೂ. ವೆಚ್ಚ ಬಿಳಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಫ‌ಲಾನುಭವಿಗಳಿಗೆ ಕೇಂದ್ರ ಸರ್ಕಾರ 1.5 ಲಕ್ಷ ರೂ. ಮತ್ತು ರಾಜ್ಯ ಸರ್ಕಾರ 2 ಲಕ್ಷ ರೂ. ನೀಡಲಿದೆ. ಹಾಗೆಯೇ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರ 1.5 ಲಕ್ಷ ರೂ. ಮತ್ತು ರಾಜ್ಯ ಸರ್ಕಾರ 1.2 ಲಕ್ಷ ರೂ. ನೀಡಲಿದ್ದು ಉಳಿದ ಹಣವನ್ನು ಫ‌ಲಾನುಭವಿಗಳೇ ಭರಿಸಬೇಕು. ಇದಕ್ಕಾಗಿ ಸರ್ಕಾರ ಫ‌ಲಾನುಭವಿಗಳಿಗೆ ಬ್ಯಾಂಕ್‌ನಿಂದ ಸಾಲ ಕೊಡಿಸಲಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.