ಪತ್ನಿ, ಮಗನೆದುರೇ ರೌಡಿಶೀಟರ್‌ ಬರ್ಬರ ಹತ್ಯೆ 


Team Udayavani, Jul 20, 2021, 9:24 AM IST

ಪತ್ನಿ, ಮಗನೆದುರೇ ರೌಡಿಶೀಟರ್‌ ಬರ್ಬರ ಹತ್ಯೆ 

ಬೆಂಗಳೂರು: ನಗರದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಎಂಟು ಮಂದಿ ದುಷ್ಕರ್ಮಿಗಳು ಹಳೇ ದ್ವೇಷಕ್ಕೆ ಹಾಡಹಗಲೇ ಪತ್ನಿ, ಮಗನ ಎದುರೇ ರೌಡಿಯೊಬ್ಬನನ್ನು ಅಟ್ಟಾಡಿಸಿಕೊಂಡು ಬ್ಯಾಂಕ್‌ ವೊಂದರಲ್ಲಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಕೋರಮಂಗಲ ನಿವಾಸಿ ಜೋಸೆಫ್ ಅಲಿಯಾಸ್‌ ಬಬ್ಲಿ(40) ಕೊಲೆಯಾದ ರೌಡಿಶೀಟರ್‌. ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಾಲ್ವರು ಶಂಕಿತ ರನ್ನು ಕೋರಮಂಗಲ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ಆಡುಗೋಡಿ ಠಾಣೆಯ ರೌಡಿ ಶೀಟರ್‌ ಆಗಿರುವ ಬಬ್ಲಿ ಸೋಮ ವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಪತ್ನಿ, ಮಗನ ಜತೆ ಕೋರಮಂಗಲದ 8ನೇಬ್ಲಾಕ್‌ನಲ್ಲಿನಯೂನಿಯನ್‌ ಬ್ಯಾಂಕ್‌ ಶಾಖೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಎಂಟು ಮಂದಿ ಮುಸುಕುಧಾರಿಗಳು ಹಿಂಬಾಲಿಸುತ್ತಿರುವುದನ್ನು ಅರಿತ ಬಬ್ಲಿ, ವೇಗವಾಗಿ ಹೋಗಿ ಬ್ಯಾಂಕ್‌ ಮುಂದೆ ವಾಹನ ನಿಲ್ಲಿಸಿ ಬ್ಯಾಂಕ್‌ನೊಳಗೆ ಓಡಿದಿ ದ್ದಾನೆ. ಆದರೂ ಬಿಡದ ಆರೋಪಿಗಳು ಬ್ಯಾಂಕ್‌ನಮ್ಯಾನೇಜರ್‌ ಕೊಠಡಿಗೆ ನುಗ್ಗಿದ ಬಬ್ಲಿ ಮೇಲೆ ಮಾರ ಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದರು.

ಆಗ ಪತ್ನಿ ಪತಿಯ ನೆರವಿಗೆ ಧಾವಿಸಿದರೂ ಬಿಡದಆರೋಪಿಗಳು, ಆಕೆಯನ್ನು ಕೊಠಡಿಯಿಂದ ಹೊರ ದಬ್ಬಿ ಬರ್ಬರವಾಗಿ ಹತ್ಯೆಗೈದು, ಸಾರ್ವಜನಿಕರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಪರಾರಿಯಾಗಿದ್ದಾರೆ. ಈಘಟನೆ ವೇಳೆ ಬಬ್ಲಿ ಪತ್ನಿಯ ಕೈ ಬೆರಳುಗಳು ತುಂಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮುಖಕ್ಕೆ ಬಟ್ಟೆ ಕಟ್ಟಿದ್ದರು: ಹಂತಕರು ಮುಖ ಚಹರೆ ಗೊತ್ತಾಗಬಾರದು ಎಂಬ ಕಾರಣಕ್ಕೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಹತ್ಯೆ ಮಾಡಿದ್ದಾರೆ. ಬ್ಯಾಂಕ್‌ ಒಳಗೆ ಹಾಗೂ ಹೊರಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಗಳು ಬಂದಿದ್ದ ಬೈಕ್‌ಗಳ ನಂಬರ್‌ ಪತ್ತೆ ಹಚ್ಚಲಾಗುತ್ತಿದೆ. ಅನುಮಾನದ ಮೇರೆಗೆ ನಾಲ್ವರನ್ನು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಹಳೇ ದ್ವೇಷವೇ ಕಾರಣ: ಆಡುಗೋಡಿಯ ರೌಡಿಶೀಟರ್‌ ಆಗಿರುವ ಬಬ್ಲಿ ಈ ಹಿಂದೆ ವಿವೇಕನಗರ ರೌಡಿಶೀಟರ್‌ ಜಾರ್ಜ್‌, ಕೋರಮಂಗಲ ರೌಡಿಶೀಟರ್‌ ರಾಜೇಂದ್ರ, ಅಶೋಕನಗರದ ರೌಡಿಯೊಬ್ಬನ ಕೊಲೆಯಲ್ಲಿ ಭಾಗಿಯಾಗಿದ್ದ. ಇದೇ ದ್ವೇಷಕ್ಕೆ ಕೊಲೆಯಾಗಿದೆ ಎಂದು ಹೇಳಲಾಗಿದೆ.

ಕಳೆದ ಆರೇಳು ವರ್ಷಗಳಿಂದ ಅಪರಾಧ ಜಗತ್ತಿನಿಂದ ಸ್ವಲ್ಪ ದೂರ ಉಳಿದಿದ್ದ ಈತ, ಗುತ್ತಿಗೆದಾರನ ಕೆಲಸ ಮಾಡಿಕೊಂಡುಕುಟುಂಬದ ಜತೆ ವಾಸವಾಗಿದ್ದಈತ, ಕೊಳಚೆ ಪ್ರದೇಶದಲ್ಲಿ ಕಚೇರಿಯೊಂದನ್ನು ತೆರೆದು ಮೂರು ಲಕ್ಷ ರೂ. ಪಡೆದು ಕೆಲವರನ್ನು ಮತಾಂತರ ಮಾಡುತ್ತಿದ್ದ ಎಂದು ಸ್ಥಳೀಯರು ಹೇಳುತಿರುವುದಾಗಿ ಪೊಲೀಸರು ಮಾಹಿತಿ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ಆಯುಕ್ತ ಎಸ್‌.ಮುರುಗನ್‌, ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್‌ ಮಹ ದೇವ ಜೋಷಿ, ಮಡಿವಾಳ ಉಪವಿಭಾಗದ ಎಸಿಪಿಸುಧೀರ್‌ ಹೆಗಡೆ ಹಾಗೂ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರೌಡಿಶೀಟರ್‌ ಬಬ್ಲಿಯನ್ನು ಬ್ಯಾಂಕ್‌ನೊಳಗೆ ಹತ್ಯೆಗೈದಿದ್ದು, ಹಂತಕರುಕೊಲೆಗೈಯುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸದ್ಯಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಎಸ್‌. ಮುರುಗನ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.