ಮಿಶ್ರ ಕಸ ಸುರಿಯುವ ಮಿಟ್ಟಗಾನಹಳ್ಳಿ ಭೂಭರ್ತಿಯಲ್ಲಿ ಆಕಸ್ಮಿಕ ಬೆಂಕಿ
Team Udayavani, Mar 21, 2021, 9:02 PM IST
ಬೆಂಗಳೂರು: ನಗರದ ಮಿಶ್ರ ಕಸ ಸುರಿಯುವ ಮಿಟ್ಟಗಾನಹಳ್ಳಿ ಭೂಭರ್ತಿಯಲ್ಲಿ ಭಾನುವಾರ ಸಂಜೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ನಗರದಲ್ಲಿ ಕಸ ವಿಲೇವಾರಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನಗರದಲ್ಲಿ ಹಸಿಕಸ ಸಂಸ್ಕರಣಾ ಘಟಕಗಳಿಗೆ ಸಾಗಾಣಿಕೆ ಆಗುವ ಹಸಿಕಸ ಹೊರತುಪಡಿಸಿ, ಮಿಶ್ರಕಸ ಸುರಿಯಲು ಇರುವ ಏಕೈಕ ಭೂಭರ್ತಿ (ಕ್ವಾರಿ) ಇದಾಗಿದೆ. ಭಾನುವಾರ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲಿನ ಒಣಗಿದ ಗಿಡ ಗಂಟಿಗಳು ಮಾತ್ರ ಬೆಂಕಿಗಾಹುತಿಯಾಗಿವೆ.
ಸಂಜೆ ನಾಲ್ಕು ಗಂಟೆ ವೇಳೆಗೆ ಭೂಭರ್ತಿ ಕ್ವಾರಿಯ ಬಳಿ ಒಣಗಿದ ಗಿಡಗಳಿಗೆ ಬೆಂಕಿ ಕಾಣಿಸಿಕೊಂಡಿದೆ. ಗಾಳಿ ಹೆಚ್ಚಾಗಿದ್ದ ಕಾರಣ ಬೆಂಕಿ ಹೆಚ್ಚಾಗಿ ಆವರಸಿದ್ದು, ಅದನ್ನು ತಕ್ಷಣ ನಂದಿಸಲಾಗಿದೆ. ಆದರೆ, ಭೂಭರ್ತಿ ಮಾಡಲಾದ ತ್ಯಾಜ್ಯಕ್ಕೆ ಬೆಂಕಿ ಕಾಣಿಸಿಕೊಂಡಿಲ್ಲ. ಇನ್ನು ಭೂ ಭರ್ತಿ ಮಾಡಲಾದ ತ್ಯಾಜ್ಯವನ್ನು ಬೆಳ್ಳೂರು ಕ್ವಾರಿಯಂತೆ ತೆರೆದಿಡದೇ, ತ್ಯಾಜ್ಯದ ಮೇಲೆ 2 ಅಡಿ ಎತ್ತರದಷ್ಟು ಮಣ್ಣು ಮುಚ್ಚಲಾಗುತ್ತದೆ. ಇದರಿಂದ ಸುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಪಾಲಿಕೆ ಘನ ತ್ಯಾಜ್ಯ ವಿಭಾಗದ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ಹೆಚ್ಚಳ ಹಿನ್ನೆಲೆ: ಹೋಳಿ ಆಚರಣೆಗೆ ನಿರ್ಬಂಧ ಹೇರಿದ ಒಡಿಶಾ ಸರ್ಕಾರ
ನಗರದಲ್ಲಿ ಶನಿವಾರ ಉತ್ಪತ್ತಿಯಾದ ಮಿಶ್ರಕಸವನ್ನು ಬಹುತೇಕ ಭಾನುವಾರ ವಿಲೇವಾರಿ ಮಾಡಲಾಗಿದೆ. ಸೋಮವಾರದ ಬೆಳಗ್ಗೆ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರದೆ ಇದ್ದಲ್ಲಿ, ನಗರದಲ್ಲಿ ಭಾನುವಾರ ಉತ್ಪತ್ತಿ ಆಗುವ ಮಿಶ್ರಕಸ ವಿಲೇವಾರಿ ತೊಡಕಾಗಲಿದ್ದು, ನಗರದಲ್ಲಿ ಕಸ ಸಮಸ್ಯೆ ಉಲ್ಭಣಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ