ಅಕ್ರಮ  ಸಂಬಂಧ: ಪತ್ನಿಯ ಪ್ರಿಯಕನ ಕೊಲೆಗೈದ ಪತಿ


Team Udayavani, Mar 25, 2021, 11:58 PM IST

Untitled-1

ಸಾಂದರ್ಭಿಕ ಚಿತ್ರ

ಬೆಂಗಳೂರು:  ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಪತಿಯೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಹೊಸಹಳ್ಳಿ ತಾಂಡ ನಿವಾಸಿ ಶಿವಕುಮಾರ್‌ (26) ಹತ್ಯೆಯಾದ ವ್ಯಕ್ತಿ. ಈ ಸಂಬಂಧ ನೆಲಮಂಗಲದ ನಿವಾಸಿ ಭರತ್‌ ಕುಮಾರ್‌ (31) ಬಂಧಿತ.

ಎಂಟು ವರ್ಷಗಳ ಹಿಂದೆ ಆರೋಪಿ ಭರತ್‌ ಮತ್ತು ವಿನುತಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿದ್ದು, ಇಬ್ಬರು ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ಮಧ್ಯೆ ಮೂರು ವರ್ಷಗಳ ಹಿಂದೆ ವಿನುತಾಳ ಊರಿನವನಾದ ಶಿವಕುಮಾರ್‌ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ. ಆಗ 2-3 ದಿನ ವಿನುತಾ ಮನೆಯಲ್ಲೇ ಉಳಿದುಕೊಂಡಿದ್ದ. ಈ ವೇಳೆ ವಿನುತಾ ಜತೆ ಶಿವಕುಮಾರ್‌ ಹೆಚ್ಚು ಸಲುಗೆಯಿಂದ ಇದ್ದ. ಅದನ್ನು ಕಂಡ ಭರತ್‌ ಈತನೊಂದಿಗೆ ಜಗಳ ಮಾಡಿದ್ದ. ಅದರಿಂದ ಆಕ್ರೋಶಗೊಂಡ ಶಿವಕುಮಾರ್‌ ವಿನುತಾ ಮನೆಯಿಂದ ಹೊರ ಹೋಗಿದ್ದ. ಈ ಘಟನೆಯಿಂದ ನೊಂದ ವಿನುತಾ ಕೂಡ ಪತಿಯೊಂದಿಗೆ ಜಗಳ ಮಾಡಿಕೊಂಡು ಆಂದ್ರಹಳ್ಳಿಯ ಬಾಡಿಗೆ ಮನೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದಳು. ಬಳಿಕವೂ ಶಿವಕುಮಾರ್‌ ಆಗಾಗ ವಿನುತಾ ಮನೆಗೆ ಬಂದು ಹೋಗುತ್ತಿದ್ದ. ಬುಧವಾರ ರಾತ್ರಿ ಶಿವಕುಮಾರ್‌ ಕರೆ ಮಾಡಿ ಮನೆಗೆ ಬರುತ್ತೇನೆ ಎಂದು ವಿನುತಾಗೆ ತಿಳಿಸಿದ್ದ. ಹೀಗಾಗಿ ವಿನುತಾ  ಮನೆಯ ಬಾಗಿಲು ಚೀಲಕ ಹಾಕಿಕೊಂಡು  ಚಿಕನ್‌ ತರಲು ಹೋಗಿದ್ದಳು. ಅದೇ ವೇಳೆ ಸ್ನೇಹಿತ ಅಭಿ ಎಂಬಾತನನ್ನು ಅಂದ್ರಹಳ್ಳಿಗೆ ಬೈಕ್‌ನಲ್ಲಿ ಡ್ರಾಪ್‌ ಮಾಡಲು ಬಂದಿದ್ದ ಭರತ್‌, ಪತ್ನಿ ಚಿಕನ್‌ ಅಂಗಡಿಯಲ್ಲಿ ಇರುವುದನ್ನು ಗಮನಿಸಿದ್ದಾನೆ  ಎಂದು ಪೊಲೀಸರು ಹೇಳಿದರು.

ಮಂಚದಡಿ ಅಡಗಿಕುಳಿತ ಪತಿ:

ಪತ್ನಿ ವಿನುತಾಗೆ ಗೊತ್ತಾಗದಂತೆ ಆಕೆಯ ಮನೆಗೆ ಹೋಗಿ ಮಂಚದ ಕೆಳಗೆ ಬಚ್ಚಿಟ್ಟುಕೊಂಡಿದ್ದ. ಶಿವಕುಮಾರ್‌ ರಾತ್ರಿ 10.30ಕ್ಕೆ ವಿನುತಾ ಮನೆಗೆ ಬಂದಿದ್ದು, ಊಟ ಮುಗಿಸಿ ಇಬ್ಬರೂ ಜತೆಯಾಗಿ ಮಲಗಿದ್ದರು. ಈ ನಡುವೆ ಮುಂಜಾನೆ 4 ಗಂಟಗೆ ವಿನುತಾ ಶೌಚಗೃಹಕ್ಕೆ ಹೋಗಿದ್ದಾಳೆ. ಈ ವೇಳೆ ಮಂಚದಡಿಯಿಂದ ಹೊರಬಂದ ಭರತ್‌, ಪತ್ನಿಯನ್ನು ಶೌಚಗೃಹದ ಚಿಲಕ ಹಾಕಿ ಕೂಡಿಹಾಕಿದ್ದಾನೆ. ಬಳಿಕ ಶಿವಕುಮಾರ್‌ನ ಕತ್ತು ಹಿಸುಕಿ ತನ್ನ ಬಳಿ ಇಟ್ಟುಕೊಂಡಿದ್ದ ಚಾಕುಯಿಂದ ಆತನ ಹೊಟ್ಟೆಗೆ ಹಲವು ಬಾರಿ ಇರಿದು ಹತ್ಯೆ ಮಾಡಿದ್ದಾನೆ. ನಂತರ ಆತನೇ ಶೌಚಗೃಹದ ಬಾಗಿಲು ತೆರೆದಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿವಕುಮಾರ್‌ನನ್ನು ಕಂಡು ಆತಂಕಗೊಂಡ ವಿನುತಾ ಜೋರಾಗಿ ಕೂಗಿಕೊಂಡಿದ್ದಾಳೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಬ್ಯಾಡರಹಳ್ಳಿ ಪೊಲೀಸರು ಆರೋಪಿ ಭರತ್‌ನನ್ನು ಬಂಧಿಸಿದ್ದಾರೆ.

ತಿಂಗಳ ಹಿಂದೆಯೇ ಸಂಚು: ಪತ್ನಿ ಮತ್ತು ಆಕೆಯ ಪ್ರಿಯಕರನ ಮೇಲೆ ಆಕ್ರೋಶಗೊಂಡಿದ್ದ ಭರತ್‌, ಒಂದು ತಿಂಗಳ ಹಿಂದೆಯೇ ಹತ್ಯೆಗೆ ಸಂಚು ರೂಪಿಸಿದ್ದ. ಅದಕ್ಕಾಗಿ ಆನ್‌ಲೈನ್‌ ಮೂಲಕ ಸ್ಪ್ರಿಂಗ್‌ ಚಾಕುವನ್ನು ಖರೀದಿಸಿದ್ದಾನೆ. ಕಾಕತಾಳೀಯ ಎಂಬಂತೆ ಅಂದ್ರಹಳ್ಳಿಗೆ ಬಂದ ಭರತ್‌ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.