ಬಲೂನ್ ವ್ಯಾಪಾರ ಮಾಡುತ್ತಿದ್ದ 15 ಬಡ ಕುಟುಂಬಗಳನ್ನು ಎತ್ತಂಗಡಿ ಮಾಡಿದ ಪೊಲೀಸರು
Team Udayavani, May 30, 2021, 4:48 PM IST
ಬೆಂಗಳೂರು : ಬಲೂನ್ ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್ಗೇಟ್ ಮೆಟ್ರೋ ಕೆಳಗೆ ಟೆಂಟ್ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳನ್ನು ಪೊಲೀಸರು ನಿನ್ನೆ ರಾತ್ರಿ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ.
ದಿಕ್ಕು ಕಾಣದ ಆ ವಲಸೆ ಕಾರ್ಮಿಕ ಕುಟುಂಬಗಳು ಸದ್ಯ ಕಾರ್ಡ್ ರೋಡ್ನಲ್ಲಿರುವ ದೋಬಿ ಘಾಟ್ ಸಿಗ್ನಲ್ನಲ್ಲಿರುವ ಫ್ಲೈ ಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ.
ಇದನ್ನೂ ಓದಿ: ಸುಳ್ಯ: ಕಳ್ಳನ ಹೊಟ್ಟೆಯಲ್ಲಿತ್ತು 35 ಗ್ರಾಂ ಚಿನ್ನಾಭರಣ
ಈ ಲಾಕ್ಡೌನ್, ಕೋವಿಡ್ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.
ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಮಳೆ ಗಾಳಿಯಿಂದ ರಕ್ಷಿಸಬೇಕು. ಆಹಾರದ ಕಿಟ್ಗಳನ್ನು ಕೊಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ