ಡ್ರಾಪ್ ನೀಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ
Team Udayavani, Sep 3, 2022, 1:10 PM IST
ಬೆಂಗಳೂರು: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.
25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ. ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಇದನ್ನೂ ಓದಿ: ಉ.ಭಾರತದಲ್ಲಿ ಕದ್ದ ಕಾರು ಬೆಂಗಳೂರಲ್ಲಿ ಮಾರಾಟ
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ