ಬೈಕ್ ತಾಗಿದ ಸಣ್ಣ ವಿಚಾರಕ್ಕೆ ಜಗಳ; ಚಾಕುವಿನಿಂದ ಇರಿದು ಯುವಕನ ಹತ್ಯೆ
Team Udayavani, Apr 24, 2022, 11:30 PM IST
ಬೆಂಗಳೂರು: ಕರಗ ನೋಡಲು ಸ್ನೇಹತರೊಂದಿಗೆ ಬಂದಿದ್ದ ಯುವಕನನ್ನು ಕ್ಷುಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಹರ್ಷ ಲೇಔಟ್ನಲ್ಲಿ ನಡೆದಿದೆ.
ಇತ್ತೀಚೆಗೆ ಜೆಜೆನಗರದಲ್ಲಿ ಬೈಕ್ ತಾಗಿತೆಂದು ಕೋಪಗೊಂಡ ಯುವಕರ ಗುಂಪು ಚಂದ್ರು ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೂಂದು ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ತಂದಿದೆ. ರೈಲ್ವೆ ಟ್ರಾಕ್ ಬಳಿ ಎಂಟಿಎಸ್ ಲೇಔಟ್ನಿವಾಸಿ ಭರತ್ (20)ನನ್ನು ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಟವಿ ಶೋ ರೂಮ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಶನಿವಾರ ರಾತ್ರಿ ಕೆಂಗೇರಿಯ ಕರಗ ನಡೆಯುತ್ತಿರುವುದನ್ನು ನೋಡಲು ಬಂದಿದ್ದ. ಈ ವೇಳೆ ಡಿಯೋ ಸ್ಕೂಟರ್ನಲ್ಲಿ ಬಂದಿದ್ದ ಯುವಕನೊಬ್ಬ ಭರತ್ ಕೈಗೆ ತಗುಲಿಸಿದ್ದ. ಕೋಪಗೊಂಡ ಭರತ್ ಯುವಕನಿಗೆ ಸ್ಕೂಟರ್ ತಡೆದು ನೋಡಿಕೊಂಡು ಸ್ಕೂಟರ್ ಚಲಾಯಿಸುವಂತೆ ಬುದ್ದಿ ಹೇಳಿದ್ದು ಸ್ನೇಹಿತರು ಜೊತೆಗೂಡಿದ್ದರು.
ಈ ಸಂದರ್ಭದಲ್ಲಿ ಯುವಕ ಮತ್ತು ಭರತ್ ನಡುವೆ ಮಾತಿನ ಚಕಮಕಿ ನಡೆದಿದ್ದು ನಿನ್ನ ನೋಡಿಕೊಳ್ತೀನಿ ಎಂದು ಯುವಕ ಹೇಳಿ ಹೋಗಿದ್ದ. ಘಟನೆ ನಡೆದ ಕೆಲವೇ ನಿಮಿಷದಲ್ಲಿ 10ರಿಂದ 15 ಮಂದಿಯ ಗ್ಯಾಂಗ್ನ್ನು ಕರೆದುಕೊಂಡು ಬಂದ ಆರೋಪಿ ಮುಂಜಾನೆ 2 ಗಂಟೆ ಸುಮಾರಿನಲ್ಲಿ ಭರತನ ಜೊತೆ ಮತ್ತೆ ಜಗಳವಾಡಿದ್ದಾನೆ.
ನಂತರ ಈ ಗ್ಯಾಂಗ್ನವರು ರೈಲ್ವೆ ಹಳಿ ಬಳಿ ಕರೆದೊಯ್ದು ಚಾಕುವಿನಿಂದ ದೇಹದ 15 ಕಡೆ ಮನಬಂದಂತೆ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ರೈಲ್ವೆ ಹಳಿ ಬಳಿ ಎಳೆದುಕೊಂಡು ಹೋಗುತ್ತಿದ್ದಾಗ ಅದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ಕೊಲೆಗಾರರ ಸಮೀಪ ಹೋಗುತ್ತಿದ್ದಂತೆ ಶವವನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆ ಅರಿತು ರೈಲ್ವೆ ಎಸ್ಪಿ ಸಿರಿಗೌರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಟಿ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ