ಕ್ಲಚ್‌ ಬದಲು ಆಕ್ಸಿಲೇಟರ್‌ ಒತ್ತಿ 2 ಜೀವ ಕಳೆದ


Team Udayavani, Feb 7, 2023, 11:05 AM IST

tdy-5

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಶಾಸಕ ಹರತಾಳು ಹಾಲಪ್ಪ ಅವರ ಬೀಗರ ಕಾರಿನ ಚಾಲಕ ಸರಣಿ ಅಪಘಾತ ಎಸಗಿದ್ದು, ದುರ್ಘ‌ಟನೆಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಹಲಸೂರು ಗೇಟ್‌ ಸಂಚಾರ ಠಾಣೆವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂಭಾಗ ಸೋಮವಾರ ನಡೆದಿದೆ.

ಇದೇ ವೇಳೆ ನಾಲ್ವರು ಗಾಯಗೊಂಡಿದ್ದಾರೆ.ಮತ್ತೂಂದೆಡೆ ಕಾರಿನಲ್ಲಿ ಶಾಸಕಹರತಾಳು ಹಾಲಪ್ಪ ಹೆಸರಿನ ಪಾಸ್‌ ಹೊಂದಿರುವ ಸ್ಟೀಕರ್‌ ಪತ್ತೆಯಾಗಿದೆ.

ಎಚ್‌ಬಿಆರ್‌ ಲೇಔಟ್‌ ನಿವಾಸಿ, ವಾಹನಗಳ ಬಿಡಿ ಭಾಗಗಳ ಮಾರಾಟಗಾರ ಮಜೀದ್‌ ಖಾನ್‌ (36) ಮತ್ತು ಕೆ.ಜಿ.ಹಳ್ಳಿ ನಿವಾಸಿ, ಪಾರ್ಕಿಂಗ್‌ ಸ್ಥಳದ ನಿರ್ವಾಹಕ ಅಯ್ಯಪ್ಪ(60) ಮೃತರು. ಕೃತ್ಯ ಎಸಗಿದ ಕಾರು ಚಾಲಕ ಯಲ ಹಂಕ ನ್ಯೂಟೌನ್‌ ನಿವಾಸಿ ಮೋಹನ್‌ (48) ಎಂಬಾತನನ್ನು ಬಂಧಿಸಲಾಗಿದೆ.

ಘಟನೆಯಲ್ಲಿ ರಿಯಾಜ್‌ ಪಾಷಾ, ಮೊಹಮ್ಮದ್‌ ರಿಯಾಜ್‌, ಮೊಹಮ್ಮದ್‌ ಸಲೀಂ, ಶೇರ್‌ ಗಿಲಾನಿ ಎಂಬುವರು ಗಾಯಗೊಂಡಿದ್ದಾರೆ. ಈ ಕಾರು ಆಟೋ ಗೇರ್‌ ವಾಹನವಾಗಿದ್ದು, ಕಾರು ನಿಯಂತ್ರಿಸಲು ಕ್ಲಚ್‌ ಬದಲು ಆಕ್ಸಿಲೇಟರ್‌ ಒತ್ತಿದ್ದೇ ಘಟನೆಗೆ ಕಾರಣವಾಗಿದೆ.

ಗಾಬರಿಗೊಂಡು ಕ್ಲಚ್‌ ಒತ್ತುವ ಬದಲು, ಆಕ್ಸಿಲೇಟರ್‌ ಒತ್ತಿದ್ದಾನೆ. ಹೀಗೆಂದುಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಹೇಳಿದರು.

ಮಧ್ಯಾಹ್ನ 3.30ರ ಸುಮಾರಿಗೆ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂಭಾಗದಲ್ಲಿರುವ ಸಿಗ್ನಲ್‌ ನಲ್ಲಿ ಕೆಂಪು ದೀಪ ಕಾಣಿಸಿದೆ. ಹೀಗಾಗಿ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿದ್ದರು. ಮಜೀದ್‌ ಖಾನ್‌ ಹೋಂಡಾ ಆಕ್ಟೀವಾದಲ್ಲಿ ಪರಿಚಯಸ್ಥ ರಿಯಾಜ್‌ ಪಾಷಾ ಜತೆ ನಿಂತಿದ್ದರು. ಮೊಹಮ್ಮದ್‌ ರಿಯಾಜ್‌ ಬೈಕ್‌ನ ಹಿಂಬದಿ ಅಯ್ಯಪ್ಪ ಕುಳಿತಿದ್ದರು. ಇತರೆ ಗಾಯಾಳುಗಳು ತಮ್ಮ ಬೈಕ್‌ಗಳಲ್ಲಿ ಕುಳಿತಿದ್ದರು. ಈ ವೇಳೆ ಅತೀವೇಗವಾಗಿ ಬಂದ ಇನೋವಾ ಕ್ರಿಸ್ಟಾ ಕಾರಿನ ಚಾಲಕ ಮೋಹನ್‌ 3 ಬೈಕ್‌, 2 ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ.  ಈ ವೇಳೆ ಮುಜೀದ್‌ ಖಾನ್‌ ಬೈಕ್‌ಗೆ ಡಿಕ್ಕಿ ಹೊಡೆದಾಗ ಮುಜೀದ್‌ ಖಾನ್‌ ಕೆಳಗೆ ಬಿದ್ದಿದ್ದಾರೆ. ಆಗ ಕಾರು ನಿಯಂತ್ರಿಸದೆ ಚಾಲಕ ಅವರಮೇಲೆಯೇ ಕಾರು ಹತ್ತಿಸಿದ್ದಾನೆ. ಅದರಿಂದ ತೀವ್ರರಕ್ತಸ್ರಾವವಾಗಿ ಮುಜೀದ್‌ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನು ಮತ್ತೂಂದು ಬೈಕ್‌ ನಲ್ಲಿ ಹಿಂಬದಿ ಕುಳಿತಿದ್ದ ಅಯ್ಯಪ್ಪ ಕೂಡ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆಮೃತಪಟ್ಟಿದ್ದಾರೆ. ಇನ್ನು 2 ಕಾರಿನಲ್ಲಿ ಕುಳಿತಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ವಾಹನಗಳು ಜಖಂಗೊಂಡಿವೆ.

ಶಾಸಕ ಹಾಲಪ್ಪ ಬೀಗರ ವಾಹನ :

ಶಾಸಕ ಹರತಾಳು ಹಾಲಪ್ಪ ಪುತ್ರಿ ಯಲಹಂಕ ನಿವಾಸಿ, ನಿವೃತ್ತ ಅರಣ್ಯಾಧಿಕಾರಿ ರಾಮು ಸುರೇಶ್‌ ಎಂಬುವರ ಪುತ್ರನ ಜತೆ ವಿವಾಹವಾಗಿದ್ದಾರೆ. ಜಪ್ತಿ ಮಾಡಲಾಗಿರುವ ಕಾರು ರಾಮುಸುರೇಶ್‌ ಹೆಸರಿನಲ್ಲಿದೆ. ಆದರೆ, ಭಾನುವಾರ ಹಾಲಪ್ಪರ ಪುತ್ರಿ ತಂದೆ ಹಾಲಪ್ಪರ ಹೆಸರಿನಲ್ಲಿ ಸ್ಟಿಕರ್‌ ಅನ್ನುಮಾವನ ಕಾರಿಗೆ ಹಾಕಿಕೊಂಡು ಸಾಗರಕ್ಕೆ ತೆರಳಿದ್ದರು. ಸೋಮವಾರ ಮುಂಜಾನೆ ಇದೇ ಕಾರಿನಲ್ಲಿ ಬೆಂಗಳೂರಿಗೆಬಂದಿದ್ದಾರೆ. ಆದರೆ, ಸ್ಟಿಕರ್‌ ತೆಗೆದಿಲ್ಲ. ಚಾಲಕ ಮೋಹನ್‌ ಆಕಾರು ತಂದು ಅಪಘಾತ ಎಸಗಿದ್ದಾನೆ ಎಂದು ಹಾಲಪ್ಪಅಳಿಯ ಮಾಹಿತಿ ನೀಡಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು.

ಯಾವ ಕಾರಣಕ್ಕೆ ಸ್ಟಿಕರ್‌ ಪಾಸ್‌? :  ಸಾಮಾನ್ಯವಾಗಿ ಶಾಸಕರಿಗೆ ಸ್ಟಿಕರ್‌ ಪಾಸ್‌ ಕೊಡುವುದುವಿಧಾನಸೌಧ ಮತ್ತು ವಿಕಾಸಸೌಧ ಪ್ರವೇಶಿಸಲು ಅಥವಾ ಟೋಲ್‌ಗೇಟ್‌ನಲ್ಲಿ ಉಚಿತ ಪ್ರವೇಶ ಹಾಗೂ ಇತರೆ ಸೌಲಭ್ಯಗಳಿಗಾಗಿ. ಆದರೆ, ಹರತಾಳು ಹಾಲಪ್ಪ ಪುತ್ರಿ ಯಾವ ಕಾರಣಕ್ಕೆ ಮಾವ ರಾಮುಸುರೇಶ್‌ ಕಾರಿಗೆ ತಮ್ಮ ತಂದೆಯ ಶಾಸಕರ ಸ್ಟಿಕರ್‌ ಬಳಸಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ. ಘಟನೆ ಸಂಬಂಧ ತನಿಖೆ ನಡೆಯಬೇಕಿದೆ ಎಂದು ಪೊಲೀಸರು ಸಂಚಾರ ಠಾಣೆ ಹೇಳಿದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-7

ಮಹಿಳೆ ಜತೆ ಅಸಭ್ಯ ನಡೆ: ರೈಲ್ವೆ ಟಿಟಿಇ ಬಂಧನ

tdy-6

ಹಣ ಕೊಟ್ಟರೆ ಯುವಕರಿಗೂ ವೃದ್ಧಾಪ್ಯ ವೇತನ!

tdy-4

ವೈರಲ್: ಜ್ಯೂಸ್‌ ಮಾರುವುದರ ಜೊತೆ ಯೂಟ್ಯೂಬರ್ ಆಗಿಯೂ ಫೇಮ್‌ ಆದ ಬೆಂಗಳೂರಿನ ವ್ಯಾಪಾರಿ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

ಹನಿಟ್ರ್ಯಾಪ್‌ ಜಾಲಕ್ಕೆ ಬಿದ್ದ ಉದ್ಯಮಿ

ಹನಿಟ್ರ್ಯಾಪ್‌ ಜಾಲಕ್ಕೆ ಬಿದ್ದ ಉದ್ಯಮಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.