ಮಾಸಿಕ ಪಾಸ್ ಬೇಡಿಕೆ ದುಪ್ಪಟ್ಟು
Team Udayavani, Sep 6, 2020, 12:12 PM IST
ಬೆಂಗಳೂರು: ಕೋವಿಡ್ ಹಾವಳಿ ನಡುವೆ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿರುವ ಬೆನ್ನಲ್ಲೇ ಬಿಎಂಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಪಾಸುಗಳ ವಿತರಣೆ ಕಳೆದ ತಿಂಗಳಿಗೆ ಹೋಲಿಸಿದರೆ ಹೆಚ್ಚು-ಕಡಿಮೆ ದುಪ್ಪಟ್ಟಾಗಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಪಾಸುಗಳನ್ನು ಪಡೆಯುವವರೇ ಇರಲಿಲ್ಲ. ಆದರೆ, ನಿಧಾನವಾಗಿ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಪ್ರಾರಂಭವಾಗುತ್ತಿವೆ. ಇದಕ್ಕೆ ಪೂರಕವಾಗಿ ವರ್ಕ್ ಫ್ರಂ ಹೋಂ ನಿಯಮಗಳೂ ಸಡಿಲವಾಗಿ ಜನ ಎಂದಿ ನಂತೆ ಕೆಲಸ-ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಬಸ್ಗಳ ಮೊರೆಹೋಗುತ್ತಿದ್ದಾರೆ.
ನಿತ್ಯ ಬಸ್ಗಳಲ್ಲಿ 11 ಲಕ್ಷ ಜನ ಪ್ರಯಾಣಿಸುತ್ತಿದ್ದು, ಇದರಲ್ಲಿ ಪಾಸು ಪಡೆದು ನಿಯಮಿತವಾಗಿ ಓಡಾಡುವವರ ಸಂಖ್ಯೆ ಅಂದಾಜು 90 ಸಾವಿರದಿಂದ ಒಂದು ಲಕ್ಷ ಜನ ಇದ್ದಾರೆ. ಆಗಸ್ಟ್ ನಲ್ಲಿ ಈ ಮಾದರಿಯ ಪಾಸು ಹೊಂದಿದವರ ಸಂಖ್ಯೆ 54,550 ಇತ್ತು. ಸೆಪ್ಟೆಂಬರ್ನಲ್ಲಿ (4ರವರೆಗೆ ಮಾತ್ರ) 72,500 ಇದ್ದು, ಇನ್ನೂ ಸಮಯ ಇರುವುದರಿಂದ 80ರಿಂದ 90 ಸಾವಿರ ಏರಿಕೆ ಆಗುವ ಸಾಧ್ಯತೆ ಇದೆ. ಜತೆಗೆ ದಿನದ ಪಾಸ್ ಬಳಕೆಯೂ ಹೆಚ್ಚುತ್ತಿದೆ. ತಿಂಗಳಿಗೆ 9 ಕೋಟಿ ಆದಾಯ ಹರಿದುಬರುತ್ತಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.
ಕೋವಿಡ್ ಹಾವಳಿಗೂ ಮುನ್ನ ಮಾಸಿಕ ಪಾಸುಗಳಿಂದಲೇ 30-35 ಕೋಟಿ ರೂ. ಆದಾಯ ಬರುತ್ತಿತ್ತು. ಆ ಪೈಕಿ ಸದ್ಯ ಶೇ. 30 ಮಾತ್ರ ಬರುತ್ತಿದೆ. ಹಂತ-ಹಂತವಾಗಿ ಚೇತರಿಕೆ ಕಂಡುಬರಲಿದೆ. ಇನ್ನು ಬಹುತೇಕ ಕೈಗಾರಿಕೆಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪಾಳಿ ಪದ್ಧತಿ ಅನುಸರಿಸುತ್ತಿರುವ ಕಾರಣ ಜನರ ಓಡಾಟ ಕಡಿಮೆಯಿದೆ ಎಂದರು.
ಈ ಮಧ್ಯೆ ಸಂಸ್ಥೆಯಿಂದ 300 ರೂ. ಮೊತ್ತದ ವಾರದ ಬಸ್ ಪಾಸ್ ಪರಿಚಯಿಸಿದ್ದು, ಇದಕ್ಕೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪ್ರಸ್ತುತ ನಿತ್ಯ 11 ಲಕ್ಷ ಜನ ಪ್ರಯಾಣಿಸುತ್ತಿದ್ದಾರೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ