ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?


Team Udayavani, May 31, 2023, 3:53 PM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ಶೀಘ್ರ ಆದೇಶ ಹೊರಬರುವ ಸಾಧ್ಯತೆ ಇದೆ.

ರಾಜಕೀಯ ಕಾರಣ ಸೇರಿದಂತೆ ಹಲವು ಕಾರಣಗಳಿಂದಾಗಿ ಕಳೆದ ಆರೇಳು ವರ್ಷಗಳಿಂದ ಪಾಲಿಕೆಯು ಆಸ್ತಿ ತೆರಿಗೆ ಹೆಚ್ಚಳ ಮಾಡದೆ ಹಾಗೆ ಉಳಿದಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರ ಗದ್ದುಗೆ ಹಿಡಿದಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಸಂಗ್ರಹದ ದೃಷ್ಟಿಯಿಂದ ಆಸ್ತಿ ತೆರಿಗೆಯಲ್ಲಿ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್‌ ಅವರು ಸೋಮವಾರ ಬಿಬಿಎಂಪಿಯ ಹಿರಿಯ ಅಧಿಕಾರಿಗಳ ಜತೆಗೆ ಮೂರು ತಾಸು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲಿಕೆಯ ಯೋಜ ನೆಗಳು, ಕಾಮಗಾರಿ, ಕಂದಾಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಜತೆಗೆ ಆಸ್ತಿ ತೆರಿಗೆ ಪಾವತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದರು. ಚುನಾವಣೆಗೂ ಮುಂಚೆ ಆಸ್ತಿ ತೆರಿಗೆಯ ಪರಿಷ್ಕರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಪಾಲಿಕೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ತಿ ತೆರಿಗೆ ಕುರಿತ 14 ಮಾನದಂಡಗಳು ಮತ್ತು ವಲಯವಾರು ಪೂರಕ ಮಾಹಿತಿ ಸಂಗ್ರಹಿಸಿದ್ದಾರೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೆರಿಗೆ ಸಂಗ್ರಹದ ವಿಧಾನ ಭಿನ್ನ ರೀತಿಯಲ್ಲಿದೆ. ಇತರ ರಾಜ್ಯಗಳಲ್ಲಿರುವ ತೆರಿಗೆ ಸಂಗ್ರಹ ವಿಧಾನ ಬಗ್ಗೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ತೆರಿಗೆ ಹೆಚ್ಚಳ?: ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೋಮವಾರ ಬಿಬಿಎಂಪಿ‌ ಹಿರಿಯ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಆಸ್ತಿ ತೆರಿಗೆ ಕುರಿತಂತೆ ಪ್ರಸ್ತಾಪವಾಯಿತು. ಉಪ ಮುಖ್ಯಮಂತ್ರಿಗಳಿಗೆ ಪಾಲಿಕೆಯ ಆಸ್ತಿ ತೆರಿಗೆ ಸಂಗ್ರಹದ ಕುರಿತಂತೆ ಮಾಹಿತಿ ನೀಡಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್‌ ಮುಂದಿನ ದಿನಗಳಲ್ಲಿ ಆಸ್ತಿ ತೆರಿಗೆ ಏರಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹವನ್ನು ಈಗಾಗಲೇ ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗೆಗಳಿಗೆ ಬಳಸಿಕೊಳ್ಳುವ ಇರಾದೆಯನ್ನು ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶೇ.5ರಷ್ಟು ಏರಿಕೆ ಸಾಧ್ಯತೆ: ವಸತಿ ಕಟ್ಟಡಗಳಿಗೆ ಶೇ.10 ರಿಂದ 15ರಷ್ಟು ತೆರಿಗೆ ಏರಿಕೆ ಸಾಧ್ಯತೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಶೇ.15 ರಿಂದ 20 ರಷ್ಟು ತೆರಿಗೆ ಏರಿಸುವ ನಿರೀಕ್ಷೆ ಇದೆ. ಪಾಲಿಕೆಯ ಕಾನೂನು ಹಾಗೂ ನಿಯಮಗಳ ಪ್ರಕಾರ ಪ್ರತಿ 3 ವರ್ಷಕ್ಕೆ ಒಮ್ಮೆ ಆಸ್ತಿ ತೆರಿಗೆಯನ್ನು ಶೇ.20 ರಿಂದ 25ರಷ್ಟು ಹೆಚ್ಚಿಸಲು ಅವಕಾಶವಿದೆ. ಆದರೆ, ಕಳೆದ ಹಲವು ವರ್ಷಗಳಿಂದ ಅಸ್ತಿ ತೆರಿಗೆ ಮೊತ್ತ ಹೆಚ್ಚಳವಾಗಿಲ್ಲ. ಆ ಹಿನ್ನೆಲೆಯಲ್ಲಿ ಬಿಬಿಎಂಪಿಯ ಆಸ್ತಿ ತೆರಿಗೆ ಗುರಿ 3500 – 4000 ಕೋಟಿ ರೂ. ಗೆ ಮಾತ್ರ ಸೀಮಿತವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಪ್ರಸಕ್ತ ಸಾಲಿನಲ್ಲಿ 4,100 ಕೋಟಿ ರೂ.ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ. ಇದಕ್ಕಾಗಿ ಪಾಲಿಕೆ ವಸತಿ ಕಟ್ಟಡಗಳಿಗೆ ಶೇ.10 ರಿಂದ 15 ಹಾಗೂ ವಾಣಿಜ್ಯ ಕಟ್ಟಡಗಳಿಗೆ ಶೇ.15ರಿಂದ 20 ರಷ್ಟು ತೆರಿಗೆ ಏರಿಕೆ ಮಾಡುವ ನಿರೀಕ್ಷೆಯಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವುದರಿಂದ ಪಾಲಿಕೆ ಬೊಕ್ಕಸ ಕೂಡ ಹಿರಿದಾಗಲಿದೆ. ಈ ತೆರಿಗೆಯನ್ನು ಸರ್ಕಾರ ಕೂಡ ಬಳಸಿಕೊಳ್ಳಬಹುದಾಗಿದೆ ಎನ್ನುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.