ಜಿಎಸ್‌ಟಿಯಿಂದ ಆದಾಯ ವೃದ್ಧಿ


Team Udayavani, Jun 24, 2017, 11:11 AM IST

rv-deshpande.jpg

ಬೆಂಗಳೂರು: ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ ಜಾರಿ ಬಗೆಗಿನ ಗೊಂದಲಗಳಿಗೆ ತೆರೆಬಿದ್ದಿದ್ದು, ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆದಾಯ ಹೆಚ್ಚಳವಾಗುವ ಜತೆಗೆ ಗ್ರಾಹಕರಿಗೂ ಅನುಕೂಲವಾಗುವ ವಿಶ್ವಾಸವಿದೆ ಎಂದು ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.

ಅಸೋಚಾಮ್‌ ಸಿಇಎಎಂಎ ಸಂಸ್ಥೆಯು ವಿಡಿಯೋಕಾನ್‌ ಹಾಗೂ ವಿಡಿಯೋಕಾನ್‌ ಡಿ2ಎಚ್‌ ಸಹಯೋಗದಲ್ಲಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಎಸ್‌ಟಿ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸಾಕಷ್ಟು ಚರ್ಚೆ, ಜಾಗೃತಿ ಮೂಲಕ ಸುಮಾರು 12 ವರ್ಷದ ಬಳಿಕ “ಒಂದು ದೇಶ- ಒಂದು ತೆರಿಗೆ’ ಪರಿಕಲ್ಪನೆಯಡಿ ಜಿಎಸ್‌ಟಿ ಜಾರಿಗೆ ದಿನ ಗಣನೆ ಶುರುವಾಗಿದೆ.

ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ದೇಶ ನಿರ್ಮಾಣ ಕಾರ್ಯಕ್ಕೆ ಸಹಕಾರ ನೀಡುವುದನ್ನು ರಾಜ್ಯ ಸರ್ಕಾರ ಮುಂದುವರಿಸಿದೆ. ಜಿಎಸ್‌ಟಿ ಜಾರಿಯಿಂದ ಅನಧಿಕೃತ ವಹಿವಾಟು, ವ್ಯವಹಾರಗಳಿಗೆ ಕಡಿವಾಣ ಬೀಳುವ ನಿರೀಕ್ಷೆ ಇದೆ,’ ಎಂದು ಹೇಳಿದರು. “ಕರ್ನಾಟಕ ಮೊದಲಿನಿಂದಲೂ ತೆರಿಗೆ ಸಂಗ್ರಹಣೆಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದು, ವಾರ್ಷಿಕ ಸರಾಸರಿ ಶೇ.14ರಷ್ಟು ಬೆಳವಣಿಗೆ ದರದಲ್ಲಿ ಆದಾಯ ಗಳಿಸುತ್ತಿದೆ.

ಕೃಷಿ, ಕೈಗಾರಿಕೆ, ವ್ಯಾಪಾರ, ಉದ್ದಿಮೆಗಳಿಂದಾಗಿ ಉದ್ಯೋಗಾವಕಾಶದ ಜತೆಗೆ ದೇಶದ ಆರ್ಥಿಕ ಪ್ರಗತಿಗೆ ಜಿಎಸ್‌ಟಿ ಸಹಕಾರಿಯಾಗುತ್ತದೆ. ಆದರೆ ದೇಶದಲ್ಲಿ ಕೇವಲ ಶೇ.3ರಷ್ಟು ಜನರಷ್ಟೇ ಆದಾಯ ತೆರಿಗೆ ಪಾವತಿಸುತ್ತಿದ್ದು, ಜನತೆ ನ್ಯಾಯಯುತ ತೆರಿಗೆಯನ್ನು ಪಾವತಿಸಿದಾಗಷ್ಟೇ ದೇಶ, ರಾಜ್ಯ ಪ್ರಗತಿ ಕಾಣಲು ಸಾಧ್ಯ ಎಂಬುದನ್ನು ಅರಿಯಬೇಕು,’ ಎಂದು ಮನವಿ ಮಾಡಿದರು.

ಅಸೋಚಾಮ್‌ ಸಂಸ್ಥೆ ಹೊಸ ಜಿಎಸ್‌ಟಿ ವ್ಯವಸ್ಥೆ ಬಗ್ಗೆ ಉತ್ಪಾದಕರು, ಸಗಟು ಮಾರಾಟಗಾರರು ಸೇರಿದಂತೆ ಸಂಬಂಧಿತ ಕ್ಷೇತ್ರದವರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ ಈವರೆಗೆ 69 ಸಮ್ಮೇಳನ ಆಯೋಜಿಸುವ ಜತೆಗೆ ಒಟ್ಟು 200 ಸಮ್ಮೇಳನ ನಡೆಸುವ ಗುರಿ ಹೊಂದಿರುವುದು ಅಭಿನಂದನೀಯ ಎಂದು ಹೇಳಿದರು.

ದೇಶದ ಮಹತ್ವಾಕಾಂಕ್ಷೆಯ ಜಿಎಸ್‌ಟಿ ಜಾರಿಗೆ ಕರ್ನಾಟಕ ಸರ್ಕಾರ ಸರ್ವಾನುಮತದಿಂದ ಅನುಮೊದನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ದೇಶದ ಉಳಿದೆಲ್ಲಾ ರಾಜ್ಯಗಳು ಜಿಎಸ್‌ಟಿ ಜಾರಿಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ವರ್ಷದಿಂದೀಚೆಗೆ ಜಿಎಸ್‌ಟಿ ಜಾರಿ ಬಗ್ಗೆ ವ್ಯಾಪಾರ, ಉದ್ದಿಮೆ, ಕೈಗಾರಿಕಾ ಒಕ್ಕೂಟಗಳೊಂದಿಗೆ ಸಾಕಷ್ಟು ಚರ್ಚೆ ನಡೆಸಲಾಗಿದೆ.

ಹೊಸ ತೆರಿಗೆ ವ್ಯವಸ್ಥೆಯಿಂದ ವಾಣಿಜ್ಯ ತೆರಿಗೆ, ಸುಂಕ, ಸೇವಾ ತೆರಿಗೆ, ರಾಜ್ಯ ಪ್ರವೇಶ ತೆರಿಗೆ, ವ್ಯಾಟ್‌ ಸೇರಿದಂತೆ ಇತರೆ ನಾನಾ ಬಗೆಯ ತೆರಿಗೆ ವಿಧಿಸುವ ವ್ಯವಸ್ಥೆ ಅಂತ್ಯವಾಗಲಿದೆ. ರಾಜ್ಯಗಳ ಗಡಿಯಲ್ಲಿನ ಟೋಲ್‌ಗೇಟ್‌ಗಳು ರದ್ದಾಗಲಿವೆ. ಇಷ್ಟಾದರೂ ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆ ಬರಲಿದೆ ಎಂದು ವಿವರಿಸಿದರು.

ಜಿಎಸ್‌ಟಿ ಜಾರಿ ಬಳಿಕ ರಾಜ್ಯಗಳ ಸರಾಸರಿ ವಾರ್ಷಿಕ ಆದಾಯ ಸಂಗ್ರಹಣೆಯಲ್ಲಿ ಇಳಿಕೆಯಾದರೆ ಐದು ವರ್ಷಗಳವರೆಗೆ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿರುವುದು ಉತ್ತಮ ಹೆಜ್ಜೆ. ಜಿಎಸ್‌ಟಿಯಿಂದ ವ್ಯಾಪಾರ, ವಹಿವಾಟು ನಡೆಸುವವರಿಗೆ ಅನುಕೂಲವಾಗಲಿದೆ. ಸದ್ಯ ಕರ್ನಾಟಕದಲ್ಲಿ ವ್ಯಾಪಾರಿಯೊಬ್ಬರು ಎಲೆಕ್ಟ್ರಾನಿಕ್‌ ಉಪಕರಣ ಆಮದು ಮಾಡಿಕೊಂಡರೆ ಶೇ.5ರಷ್ಟು ವ್ಯಾಟ್‌ ಪಾವತಿಸಬೇಕು.

ಆದರೆ ಕೆಲ ರಾಜ್ಯಗಳಲ್ಲಿ ವ್ಯಾಟ್‌ ಪ್ರಮಾಣ ಶೇ.12.5ರಷ್ಟಿದೆ. ಈ ರೀತಿಯ ತೆರಿಗೆ ಹೊರೆಗಳು ತಪ್ಪಲಿದ್ದು, ಏಕಪ್ರಕಾರದ ತೆರಿಗೆ ವ್ಯವಸ್ಥೆ ಜಾರಿಯಾಗಲಿದೆ ಎಂದು ಹೇಳಿದರು. ಅಸೋಚಾಮ್‌ನ ಪ್ರದೀಪ್‌ ದೂಧ್‌, ಸೇವಾ ತೆರಿಗೆ ಆಯುಕ್ತ ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.