ಏರ್‌ಪೋರ್ಟ್‌ ಮಾರ್ಗದ ಟೋಲ್‌ ಶುಲ್ಕ ಹೆಚ್ಚಳ


Team Udayavani, Apr 2, 2019, 5:00 AM IST

toll

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಗೇಟ್‌ ಬಳಿ ಇರುವ ನವಯುಗ ಟೋಲ್‌ ಸಂಸ್ಥೆ, ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಟೋಲ್‌ ಶುಲ್ಕ ಹೆಚ್ಚಿಸಿದೆ. ಈ ನಿರ್ಧಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈಗಾಗಲೇ ದುಬಾರಿ ಟೋಲ್‌ ಶುಲ್ಕ ಪಾವತಿಸುತ್ತಿರುವ ಬಗ್ಗೆ ವಾಹನ ಚಾಲಕರು, ಪ್ರಯಾಣಿಕರು ಸಮಾಧಾನಗೊಂಡಿದ್ದಾರೆ. ಈ ನಡುವೆ ಇತ್ತೀಚೆಗಷ್ಟೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಟಿಕೆಟ್‌ ದರ ಶೇ.8ರಷ್ಟು ಹೆಚ್ಚಾಗಿದೆ. ಈ ನಡುವೆ ಟೋಲ್‌ ಶುಲ್ಕ ಕೂಡ ಹೆಚ್ಚಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಕಾರಣ ಈ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತವೆ. ಪ್ರಸ್ತುತ ದರ ಏರಿಕೆ ಪ್ರಕಾರ ಕಾರುಗಳ ಟೋಲ್‌ ಶುಲ್ಕದಲ್ಲಿ 5ರಿಂದ 10 ರೂ. ಏರಿಕೆ ಮಾಡಲಾಗಿದೆ. ಅದರಂತೆ, ಈ ಮೊದಲು 130 ರೂ. ಇದ್ದ ಕಾರು ಟೋಲ್‌ ಶುಲ್ಕ ಒಮ್ಮುಖ ಪ್ರಯಾಣಕ್ಕೆ (ಸಿಂಗಲ್‌ ಟ್ರಿಪ್‌) 135 ರೂ. ಮತ್ತು ರೌಂಡ್‌ ಟ್ರಿಪ್‌ಗೆ 140 ರೂ. ಆಗಲಿದೆ.

ವಿನಾಯ್ತಿ ನೀಡದ ಸಂಸ್ಥೆ: ಹೆದ್ದಾರಿ ಕಾಮಗಾರಿ ಈಗಾಗಲೇ ಶೇ.80ರಷ್ಟು ಮುಗಿದಿದೆ ಎಂದು 2012ರ ಸೆಪ್ಟೆಂಬರ್‌ನಲ್ಲಿ ಹೈಕಪೊರ್ಟ್‌ಗೆ ಸುಳ್ಳು ಮಾಹಿತಿ ನೀಡಿದ್ದ ಆಂಧ್ರ ಮೂಲದ ಟೋಲ್‌ ಸಂಸ್ಥೆ, ಕಾಮಗಾರಿ ಪೂರ್ಣಗೊಳ್ಳದಿದ್ದರೂ ವಾಹನ ಮಾಲೀಕರಿಂದ ಹಣ ವಸೂಲಿ ಮಾಡಿತ್ತು.

ಅಷ್ಟೇ ಅಲ್ಲದೆ, ಟೋಲ್‌ ಕೇಂದ್ರದಿಂದ 10.ಕಿ.ಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳ ನಿವಾಸಿಗಳಿಗೆ ಟೋಲ್‌ ಶುಲ್ಕದಿಂದ ವಿನಾಯ್ತಿ ನೀಡುವುದಾಗಿ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ ಸಂಸ್ಥೆ, ಈವರೆಗೂ ಗ್ರಾಮಸ್ಥರಿಗೆ ವಿನಾಯ್ತಿ ನೀಡುತ್ತಿಲ್ಲ.

ಇದರ ವಿರುದ್ಧ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಎಲ್ಲ ಟೋಲ್‌ಗ‌ಳ ಬಳಿ ಸುಂಕರಹಿತ ಸೇವಾ ರಸ್ತೆ (ಸರ್ವೀಸ್‌ ರೋಡ್‌) ನಿರ್ಮಿಸಿರುತ್ತಾರೆ. ಆದರೆ, ನವಯುಗ ಟೋಲ್‌ ಸಂಸ್ಥೆ, ಸರ್ವೀಸ್‌ ರಸ್ತೆಗಳನ್ನು ನಿರ್ಮಿಸಿಲ್ಲ ಎಂದು ಪ್ರಯಾಣಿಕರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಆರೋಪಿಸಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿ ದಿನ ಈ ಮಾರ್ಗವಾಗಿ 9 ಸಾವಿರಕ್ಕೂ ಹೆಚ್ಚು ಟ್ಯಾಕ್ಸಿಗಳು ಸಂಚರಿಸುತ್ತಿವೆ. ಇದರೊಂದಿಗೆ ಇದು ಬೆಂಗಳೂರು-ಹೈದರಾಬಾದ್‌ ಹೆದ್ದಾರಿಯಾಗಿರುವ ಕಾರಣ ಪ್ರತಿ ದಿನ ಸಾವಿರಾರು ಕಾರು, ಬಸ್‌ ಹಾಗೂ ಭಾರೀ ವಾಹನಗಳು ಸಂಚರಿಸುತ್ತವೆ. ಈಗ ಏಕಾಏಕಿ ಟೋಲ್‌ ಶುಲ್ಕ ಹೆಚ್ಚಳದಿಂದ ವಾಹನ ಸವಾರರ ಜೇಬಿಗೆ ಹೆಚ್ಚುವರಿ ಹೊರೆ ಬಿದ್ದಂತಾಗಿದೆ.

ಪರಿಷ್ಕೃತ ಟೋಲ್‌ ಶುಲ್ಕ
-ವಾಹನ ಸಿಂಗಲ್‌ ಟ್ರಿಪ್‌ ರೌಂಡ್‌ ಟ್ರಿಪ್‌
-ಕಾರು/ಜೀಪು/ವ್ಯಾನ್‌ 90 135
-ಮಿನಿ ಬಸ್‌ 140 210
-ಬಸ್‌/ಲಾರಿ 280 420
-ಎಚ್‌.ಸಿ.ಎಂ/ ಎಂಎವಿ ¬425 635
-ಹೆಚ್ಚು ಗಾತ್ರದ ವಾಹನಗಳು 555 830
-ಸ್ಥಳೀಯ ಬಳಕೆದಾರರಿಗೆ ತಿಂಗಳಿಗೆ 265 ರೂ.

ಟೋಲ್‌ ಶುಲ್ಕ ಹೆಚ್ಚಳದಿಂದ ಈ ಭಾಗದ ರೈತರ ಮೇಲೆ ಹೆಚ್ಚುವರಿ ಹೊರೆ ಬಿದ್ದಂತಾಗಿದೆ. ಬೆಳೆದ 2, 3 ಮೂಟೆ ಧಾನ್ಯವನ್ನು ಬಸ್‌ಗಳಲ್ಲಿ ಕೊಂಡೊಯ್ಯಲು ಈಗ ಹೆಚ್ಚುವರಿ ದರ ತೆರಬೇಕು. ಬಂದ ಹಣವನ್ನೆಲ್ಲಾ ಟೋಲ್‌ ಕಟ್ಟಿದರೆ ಹೊಟ್ಟೆಗೇನು ಮಾಡಬೇಕು?
-ಚಿಕ್ಕನಹಳ್ಳಿ ವಿ. ಸುಬ್ಬಣ್ಣ, ಪ್ರಗತಿಪರ ರೈತ

ಟೋಲ್‌ ಶುಲ್ಕ ಹೆಚ್ಚಳದಿಂದ ಟ್ಯಾಕ್ಸಿ ಚಾಲಕರಿಗೆ ಮಾತ್ರವಲ್ಲದೆ ಸಾರ್ವಜನಿಕರ ಜೇಬಿಗೂ ಹೆಚ್ಚಿನ ಹೊರೆ ಬಿದ್ದಂತಾಗಿದೆ. ಈಗಾಗಲೇ ದುಡಿದ ಹಣದಲ್ಲಿ ಬಹು ಪಾಲು ಟೋಲ್‌ ರೂಪದಲ್ಲಿ ವೆಚ್ಚವಾಗುತ್ತಿದ್ದು, ಬೀದಿ ಪಾಲಾಗುವ ಸ್ಥಿತಿಯಿದೆ.
-ನಟರಾಜ್‌, ಟ್ಯಾಕ್ಸಿ ಚಾಲಕ

* ಎಸ್‌.ಮಹೇಶ್‌

ಟಾಪ್ ನ್ಯೂಸ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.