ಸಂಚಾರ ಹೆಚ್ಚಿಸಿ, ಪ್ರಯಾಣ ದರ ಇಳಿಸಿ


Team Udayavani, Dec 8, 2019, 3:08 AM IST

sanchara

ಬೆಂಗಳೂರು: ಬಿಎಂಟಿಸಿ ಬಸ್‌ಗಳ ಸಂಖ್ಯೆ ಹೆಚ್ಚಿಸಿ ಟಿಕೆಟ್‌ ದರ ಇಳಿಸಿದರೆ ಮಾತ್ರ ಖಾಸಗಿ ವಾಹನಗಳ ಬಳಕೆ ಕಡಿಮೆಯಾಗುತ್ತದೆ ಎಂದು ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ ತಿಳಿಸಿದೆ.

ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆಯಿಂದ ನಗರದಲ್ಲಿ ನಡೆದ “ಎಲ್ಲರಿಗೂ ಬಿಎಂಟಿಸಿ: ಬೆಂಗ ಳೂರಿನ ಚಲನಶೀಲತೆಯನ್ನು ಬದಲಿಸುವ ನಿಟ್ಟಿನಲ್ಲಿ’ ಎಂಬ ಮುಕ್ತ ಚರ್ಚಾ ವೇದಿಕೆಯಲ್ಲಿ ಮಾತನಾಡಿದ ವೇದಿಕೆಯ ಸದಸ್ಯ ವಿನಯ್‌, ಖಾಸಗಿ ವಾಹನದಲ್ಲಿ ಪರಸ್ಪರ ಹಂಚಿಕೊಂಡು ಪ್ರಯಾಣಿಸುವ ಖರ್ಚಿಗಿಂತ ಕಡಿಮೆ ಖರ್ಚಿನಲ್ಲಿ ಬಸ್‌ನಲ್ಲಿ ಪ್ರಯಾಣಿಸಬಹುದು ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿಸಲು ಬಿಎಂಟಿಸಿ ಬಸ್‌ ಪ್ರಯಾಣ ದರ ಕಡಿಮೆ ಮಾಡಬೇಕು.

ಖಾಸಗಿ ವಾಹನಗಳ ಬಳಕೆ ಕಡಿಮೆ ಮಾಡಲು ವಾಹನ ನಿಲುಗಡೆ ನೀತಿ ರೂಪಿಸಬೇಕು. ಬಸ್‌ ಮತ್ತು ನಿಲ್ದಾಣಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಹೇಳಿದರು. ಚರ್ಚೆಯಲ್ಲಿ ಭಾಗವಸಿದ್ದ ಗೃಹ ಕಾರ್ಮಿಕರ ಸಂಘಧ ಪದಾಧಿಕಾರಿ ಯಲ್ಲಮ್ಮ, ಮನೆ ಕೆಲಸಗಳಿಗೆ ಹೋಗುವ ಮಹಿಳೆಯರು ಅನಿವಾರ್ಯವಾಗಿ ಆಟೋ ಬಳಸುವಂತಾಗಿದೆ. ಹೆಚ್ಚಿನ ಬಸ್‌ ಮತ್ತು ನಿಲ್ದಾಣಗಳಿಲ್ಲದ ಕಾರಣ ಬಸ್‌ ಬಳಸುವುದು ಕಡಿಮೆ.

ಒಂದು ವೇಳೆ 1200ರೂ ಕೊಟ್ಟು ಬಸ್‌ ಪಾಸ್‌ ಪಡೆದು ಕೊಂಡರೂ, ಬೆಳಿಗ್ಗೆ ವೇಳೆ ಬಸ್‌ ಸಿಗುತ್ತವೆ ರಾತ್ರಿ ವೇಳೆ ಸಿಗುವುದಿಲ್ಲ. ಹೀಗಾಗಿ, ಬಸ್‌ ಪಾಸ್‌ ಮತ್ತು ಆಟೋ ಎರಡಕ್ಕೂ ಹಣ ನೀಡಬೇಕಾಗುತ್ತದೆ. ಬಸ್‌ ಪ್ರಯಾಣ ದರ ಕಡಿಮೆ ಮಾಡಿದರೆ ಗೃಹ ಕಾರ್ಮಿಕರು ಬಿಎಂಟಿಸಿ ಬಸ್‌ಗಳನ್ನು ಬಳಸುತ್ತಾರೆ ಎಂದು ಹೇಳಿದರು. ಗಾರ್ಮೆಂಟ್ಸ್‌ ಕಾರ್ಮಿಕರ ಸಂಘದ ಅಧ್ಯಕ್ಷೆ ಪ್ರತಿಭಾ ಮಾತನಾಡಿ, ಶೇ.90ರಷ್ಟು ಗಾರ್ಮೆಂಟ್ಸ್‌ ಕಾರ್ಮಿಕರು ಬಿಎಂಟಿಸಿ ಬಸ್‌ ಗಳನ್ನು ಬಳಸುತ್ತಿಲ್ಲ.

ಬಿಎಂಟಿಸಿ ಬಸ್‌ ಪ್ರಯಾಣ ದರ ಖಾಸಗಿ ಬಸ್‌ಗಳಿ ಗಿಂತ ಹೆಚ್ಚಾಗಿರುವ ಕಾರಣ ಎಲ್ಲರೂ ಖಾಸಗಿ ಬಸ್‌ ಮತ್ತು ಖಾಸಗಿ ವಾಹನ ಗಳನ್ನು ಬಳಸುತಿದ್ದಾರೆ. ಖಾಸಗಿ ಬಸ್‌ಗಳಲ್ಲಿ ಮಹಿಳೆ ಯರಿಗೆ ಹೆಚ್ಚಿನ ಸುರಕ್ಷತೆ ಯಿರುವುದಿಲ್ಲ. ಹೀಗಾಗಿ, ಪ್ರಯಾಣ ದರ ಇಳಿಸಿ, ಹೆಚ್ಚಿನ ಬಸ್‌ಗಳನ್ನು ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ಕಳುಹಿಸಿದರೆ ಕಾರ್ಮಿಕರಿಗೆ ಸುರಕ್ಷತೆ ಸಿಕ್ಕಂತಾಗುತ್ತದೆ ಎಂದರು. ಕರ್ನಾಟಕ ಸ್ಲಂ ಜನಗಳ ಸಂಘದ ಅಧ್ಯಕ್ಷ ಮೋಹನ್‌ ಸೂರ್ಯ ಮಾತನಾಡಿ, ಕೊಳಗೇರಿ ಪ್ರದೇಶಗಳ ಬಳಿ ಬಸ್‌ ನಿಲ್ದಾಣಗಳಿರುವದೇ ಕಡಿಮೆ.

ನಗರದ ಕೆಲ ಜನ ನಿಬಿಡ ಸ್ಲಂಗಳಿಗೆ ಸರಿಯಾದ ಬಸ್‌ ಸಂಪರ್ಕ ವ್ಯವಸ್ಥೆ ಯಿಲ್ಲ. ಹೀಗಾಗಿ, ಎಲ್ಲಾ ಸ್ಲಂ ನಿವಾಸಿಗಳು ಅನಿ ವಾರ್ಯವಾಗಿ ದ್ವಿಚಕ್ರ ವಾಹನಗಳನ್ನು ಹೊಂದು ವಂ ತಾಗಿದೆ ಎಂದರು. ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಿದ ಪರಿಸರ ಬೆಂಬಲ ತಂಡದ ಲಿಯೋ ಸಲ್ಡಾನಾ , ಡೇಟಾ ಮೀಟಾ ಸಂಘದ ತೇಜಸ್‌, ಸಂಚಾರ ತಜ್ಞ ಸುಜಯಾ ಒಳಗೊಂಡ ತಜ್ಞರ ತಂಡ ಎಲ್ಲಾ ಸಂಘ ಟನೆಗಳ ಪ್ರತಿ ನಿಧಿಗಳ ಪ್ರಸ್ತಾವನೆಯನ್ನು ಒಪ್ಪಿಕೊಂಡು ತಮ್ಮ ಶಿಫಾ ರಸ್ಸುಗಳನ್ನು ಮಂಡಿಸಿದರು.

ತಜ್ಞರ ಶಿಫಾರಸುಗಳು: ಹೊಸ ಲೇ ಔಟ್‌ಗಳು ಅಭಿ ವೃದ್ಧಿಪಡಿಸುವಾಗ ಯೋಜನೆ ಶುಲ್ಕದ ಜತೆ ಸಂಚಾರ ಶುಲ್ಕವನ್ನು ಪಡೆಯಬೇಕು. ಈ ಹಣದಲ್ಲಿ ರಸ್ತೆ, ಹೆಚು ವರಿ ಬಸ್‌ ಮತ್ತು ನಿಲ್ದಾಣಗಳ ನಿರ್ಮಾಣ.

ಪ್ರತಿ ಬಸ್‌ಗೆ ಸಂಚಾರ ಸಮಯ ನಿಗದಿ: ಬಿಎಂಟಿಸಿ ಸಿಬ್ಬಂದಿ ಖುದ್ದಾಗಿ ಪ್ರತಿ ಜನನಿಬಿಡ ಪ್ರದೇಶಕ್ಕೆ ಹೋಗಿ ಅಲ್ಲಿನ ಸಂಚಾರ ಸಮಸ್ಯೆಗಳನ್ನು ತಿಳಿದುಕೊಂಡು ಪರಿ ಹಾರ ಒದಗಿಸಬೇಕು.

ನಿರ್ಭಯಾ ಕೊಠಡಿ ಸ್ಥಾಪನೆಗೆ ಚಿಂತನೆ
ಬೆಂಗಳೂರು: ನಿರ್ಭಯಾ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ನಿರೀಕ್ಷಣಾ ಕೊಠಡಿ ನಿರ್ಮಿಸಲು ಬಿಎಂಟಿಸಿ ಉದ್ದೇಶಿಸಿದೆ. ನಗರದ 12 ಟಿಟಿಎಂಸಿ ಕೇಂದ್ರ ಗಳಲ್ಲಿ ನಿರೀಕ್ಷಣಾ ಕೊಠಡಿ ನಿರ್ಮಿಸಲಿದ್ದು, ಯೋಜನೆ ಯಶ ಸ್ಸಿಗೆ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಶ್ರಮಿಸಲಿವೆ.

ನಿರೀಕ್ಷಣಾ ಕೊಠಡಿಯಲ್ಲಿ ಉತ್ತಮ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಮಕ್ಕಳಿಗೆ ಹಾಲುಣಿಸಲು ಪ್ರತ್ಯೇಕ ಕೊಠಡಿ, ಬಸ್‌ ಸಂಚಾರ ಗಮನಿ ಸಲು ಗಾಜಿನ ಕಿಟಕಿ ಅಳವಡಿಸಲಾಗುವುದು. ಇನ್ನು ನಿರ್ಭಯಾ ಕೊಠಡಿಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಿದ್ದು, ಬೆಳಗ್ಗೆ 6ರಿಂದ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.