ಪದವೀಧರ ಶಿಕ್ಷಕರ ನೇಮಕ ಅಭ್ಯರ್ಥಿಗಳಲ್ಲಿ ಹೆಚ್ಚಿದ ಗೊಂದಲ


Team Udayavani, Jul 28, 2018, 6:10 AM IST

govt.jpg

ಬೆಂಗಳೂರು:ಪದವೀಧರ ಶಿಕ್ಷಕರ ನೇಮಕಾತಿ ಸಂಬಂಧ ಕಟ್‌ ಆಫ್ ಮಾರ್ಕ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುತ್ತೋಲೆ ಮೇಲೆ ಸುತ್ತೋಲೆ ಹೊರಡಿಸುತ್ತಿರುವುದರಿಂದ ಅಭ್ಯರ್ಥಿಗಳಲ್ಲಿ ಇನ್ನಷ್ಟು ಗೊಂದಲ ಉಂಟಾಗುತ್ತಿದೆ.

10 ಸಾವಿರ ಪದವೀಧರ ಶಿಕ್ಷಕರ ನೇಮಕ ಸಂಬಂಧ ಜೂನ್‌ ಅಂತ್ಯದಲ್ಲಿ 1:2 ಅನುಪಾತದಲ್ಲಿ ಅರ್ಹತಾ ಅಭ್ಯರ್ಥಿಗಳ ಪಟ್ಟಿಯನ್ನು ಸರ್ಕಾರ ಪ್ರಕಟಿಸಿತ್ತು.  10 ಸಾವಿರ ಹುದ್ದೆಗೆ ಕೇವಲ 2500 ಅಭ್ಯರ್ಥಿಗಳು ಮಾತ್ರ ಅರ್ಹತೆ ಪಡೆದಿದ್ದರು.ತದನಂತರ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪೇಪರ್‌ 2ರ ಕನಿಷ್ಠ ಅಂಕ ಶೇ.50 ಹಾಗೂ ಪೇಪರ್‌ 3ರ ಕನಿಷ್ಠ ಅಂಕ ಶೇ.60ರಷ್ಟು ನಿಗದಿ ಮಾಡಿರುವುದನ್ನು ರದ್ದು ಮಾಡಿ ಜುಲೈ 17ರಂದು ಆದೇಶ ಹೊರಡಿಸಿತ್ತು.

ಇದರ ಬೆನ್ನಲ್ಲೇ ಕನಿಷ್ಠ ಅಂಕ ರದ್ದು ಪಡಿಸಿದ್ದನ್ನು ಖಂಡಿಸಿ ಪದವಿಯ ನಾನ್‌ಸೆಮಿಸ್ಟರ್‌ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಜುಲೈ 26ರಂದು ಹೊಸ ಸುತ್ತೋಲೆ ಹೊರಡಿಸಿ, ಜುಲೈ 17ರಂದು ಹೊರಡಿಸಿದ ಸುತ್ತೋಲೆ ಎಲ್ಲ ಅಭ್ಯರ್ಥಿಗಳಿಗೆ ಅನ್ವಯ ಆಗುವುದಿಲ್ಲ ಎಂದು ಹೇಳಿದೆ. ಇದರಿಂದ ಇನ್ನಷ್ಟು ಅಭ್ಯರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.

ಈ ನಡುವೆ, ಜಿಲ್ಲಾವಾರು ಉಳಿಯಬಹುದಾದ ಹೆಚ್ಚುವರಿ ಹುದ್ದೆಗೆ ಎನ್‌ಐಸಿ ತಂತ್ರಾಂಶ ಆಧರಿಸಿ ಪೇಪರ್‌ 2 ಮತ್ತು 3ರಲ್ಲಿ ಶೇ.1ರಿಂದ 5ರಷ್ಟು ಕನಿಷ್ಠ ಅಂಕ ಕಡಿಮೆ ಮಾಡಲು ಸರ್ಕಾರ ಹೊಸದಾಗಿ ನಿರ್ಧರಿಸಿದೆ. ಈ ಹಿಂದೆ ಕನಿಷ್ಠ ಅಂಕವೇ ರದ್ದು ಮಾಡಿದ ಸರ್ಕಾರ ಈಗ ಶೇ.1ರಿಂದ 5ರಷ್ಟು ಕಡಿಮೆ ಮಾಡುವಂತೆ ಆದೇಶ ಹೊರಡಿಸಿದ್ದು, ಕೌನ್ಸೆಲಿಂಗ್‌ ಆಸೆಯಲ್ಲಿರುವ ಅಭ್ಯರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಶೇ.50 ಮತ್ತು 60ರ ಕನಿಷ್ಠ ಅಂಕದ ಆಧಾರದಲ್ಲಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಇರುವ ಅಭ್ಯರ್ಥಿಗಳಿಗೆ ಜುಲೈ 26ರ ಆದೇಶ ಅನ್ವಯಿಸುವುದಿಲ್ಲ. ಕನಿಷ್ಠ ಅಂಕ ಸಡಿಲಿಕೆಯಿಂದ ಎಷ್ಟು ಅಭ್ಯರ್ಥಿಗಳು ಅನುಕೂಲ ಪಡೆದಿದ್ದಾರೆ ಎಂಬುದರ ಜಿಲ್ಲಾವಾರು ಮಾಹಿತಿಯನ್ನು  ಎನ್‌ಐಸಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಮೂಲಕ ಸರ್ಕಾರಕ್ಕೆ ನೀಡುವಂತೆಯೂ ಸೂಚಿಸಿದೆ.

ಸರ್ಕಾರ ಮೇಲಿಂದ ಮೇಲೆ ಪರಿಷ್ಕರಣೆ ಸುತ್ತೋಲೆ  ಹೊರಡಿಸುತ್ತಿರುವುದರಿಂದ ಅಭ್ಯರ್ಥಿಗಳು ಜಿಜ್ಞಾಸೆಗೆ ಒಳಾಗಿಗಿದ್ದು  ಮೂಲ ಪಟ್ಟಿಯ ಆಧಾರದಲ್ಲೇ ನೇಮಕಾತಿ ನಡೆಯುತ್ತದೋ ಅಥವಾ ಹೊಸ ಪಟ್ಟಿ ಬಿಡುಗಡೆಯಾಗಿ ಅದರ ಆಧಾರದಲ್ಲಿ ಕೌನ್ಸೆಲಿಂಗ್‌ ನಡೆಸುತ್ತಾರೋ ಎಂಬುದ ಬಗ್ಗೆ ಗೊಂದಲ ಮೂಡಿದೆ.

ಚೆಕ್‌ ಮೂಲಕ ವೇತನ ನೀಡದಿರಲು ಸೂಚನೆ
ಬೆಂಗಳೂರು:
ರಾಜ್ಯದ ಪದವಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಚೆಕ್‌ ಮೂಲಕ ವೇತನ ನೀಡ ಕೂಡದು
ಎಂದು ಎಲ್ಲ ಕಾಲೇಜಿನ ಪ್ರಾಂಶುಪಾಲರಿಗೂ ಕಾಲೇಜು ಶಿಕ್ಷಣ ಇಲಾಖೆ ಖಡಕ್‌ ಎಚ್ಚರಿಕೆ ನೀಡಿದೆ. ಬೋಧಕ ಮತ್ತು ಬೋಧಕೇತರ
ಸಿಬ್ಬಂದಿ ವೇತನ ಹಾಗೂ ಇತರ ಭತ್ಯೆಯನ್ನು ಪ್ರಾಂಶುಪಾಲರು ನೇರವಾಗಿ ತಮ್ಮ ಖಾತೆಗೆ ಜಮಾ ಮಾಡಿಕೊಂಡು, ನಂತರ ಚೆಕ್‌
ಮೂಲಕ ಸಿಬ್ಬಂದಿ ವರ್ಗಕ್ಕೆ ವಿತರಿಸುತ್ತಿರುವ ಬಗ್ಗೆ ಇಲಾಖೆಗೆ ದೂರು ಬಂದಿದೆ. 

ಈ ಹಿನ್ನೆಲೆಯಲ್ಲಿ ಎಲ್ಲ ಪ್ರಾಂಶುಪಾಲರಿಗೂಎಚ್ಚರಿಕೆ ನೀಡಿರುವ ಇಲಾಖೆ, ಯಾವುದೇ ಕಾರಣಕ್ಕೂ ಚೆಕ್‌ ಮೂಲಕ ವೇತನ ನೀಡ ಕೂಡದೆಂದು ಸ್ಪಷ್ಟವಾಗಿ ತಿಳಿಸಿದೆ. ಚೆಕ್‌ ಮೂಲಕ ವೇತನ ನೀಡುವುದರಿಂದ ಸಿಬ್ಬಂದಿಗೆ ವೇತನ ಕೈ ಸೇರುವಾಗ ವಿಳಂಬವಾಗುತ್ತಿದೆ ಮತ್ತು ಅವ್ಯವಹಾರ ಆಗುವ ಸಾಧ್ಯತೆಯೂ ಹೆಚ್ಚಿದೆ. ಹೀಗಾಗಿ, ಇಸಿಎಸ್‌ (ಎಲೆಕ್ಟ್ರಾನಿಕ್‌ ಕ್ಲಿಯರಿಂಗ್‌ ಸರ್ವಿಸ್‌) ವ್ಯವಸ್ಥೆ ಮೂಲಕವೇ ವೇತನ ನೀಡುವಂತೆ ನಿರ್ದೇಶಿಸಿದೆ. 

ಹಾಗೆಯೇ, ಎಚ್‌ಆರ್‌ಎಂಎಸ್‌ ಜತೆಗೆ ಸಿಇಎಸ್‌ ಲಿಂಕ್‌ ಮಾಡಬೇಕು. ಚೆಕ್‌ ಮೂಲಕ ವೇತನ ನೀಡುವುದು ಕಂಡು ಬಂದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾಂಶುಪಾಲರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.