ಬೆಂವಿವಿ ದೂರ ಶಿಕ್ಷಣಕ್ಕೆ ಹೆಚ್ಚಿದ ಬೇಡಿಕೆ


Team Udayavani, Nov 22, 2017, 11:57 AM IST

bvvclr.jpg

ಬೆಂಗಳೂರು: ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಯುಜಿಸಿ ಮಾನ್ಯತೆ ಪಡೆಯಲು ವಿಫ‌ಲವಾಗಿದ್ದರಿಂದ ಬೆಂಗಳೂರು ವಿಶ್ವವಿದ್ಯಾಲಯ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ವಿವಿಧ ಕೋರ್ಸ್‌ಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ.

ಉದ್ಯೋಗ ಅಥವಾ ಇನ್ನಿತರೇ ಒತ್ತಡದಿಂದ ಪಿಯುಸಿ ನಂತರದ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕರು ಉನ್ನತ ಶಿಕ್ಷಣ ಮುಂದುವರಿಸಲು ಸಹಜವಾಗಿಯೇ ಅಂಚೆ ತೆರಪಿನ ಕೋರ್ಸ್‌ಗಳ ಮೊರೆ ಹೋಗುತ್ತಾರೆ. ಕಲಾ ಮತ್ತು ವಾಣಿಜ್ಯ ವಿಭಾಗದ ಪದವಿ ಸ್ನಾತಕೋತ್ತರ ಪದವಿಯನ್ನು ಎಲ್ಲಾ ವಿಶ್ವವಿದ್ಯಾಲಯದ ಅಂಚೆತೆರಪಿನ ಹಾಗೂ ದೂರಶಿಕ್ಷಣ ನಿರ್ದೇಶನಾಲಯದಿಂದ ನೀಡಲಾಗುತ್ತದೆ.

ಇದರ ಜತೆಗೆ ರಾಜ್ಯ ಸರ್ಕಾರ ದೂರ ಶಿಕ್ಷಣದ ಮೂಲಕವೇ ಪದವಿ, ಸ್ನಾತಕೋತ್ತರ ಪದವಿ ಪಡೆಯುವವರ ಅನುಕೂಲಕ್ಕಾಗಿ ಮೈಸೂರಿನಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತೆರೆದಿದೆ. 2013ರ ನಂತರ ಮೈಸೂರಿನ ಕೆಎಸ್‌ಒಯು ಕೆಲವೊಂದು ಕೋರ್ಸ್‌ಗಳಿಗೆ ಯುಜಿಸಿ ಮಾನ್ಯತೆ ಪಡೆಯಲು ಸಂಪೂರ್ಣ ವಿಫ‌ಲವಾಗಿದೆ.

ಇದೇ ಕಾರಣದಿಂದ ಬೆಂಗಳೂರು ವಿವಿಯ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದಿಂದ ನೀಡುವ ಬಿ.ಎ, ಬಿ.ಕಾಂ, ಬಿಬಿಎ ಹಾಗೂ ಅರ್ಥಶಾಸ್ತ್ರ, ಇತಿಹಾಸ, ಇಂಗ್ಲಿಷ್‌ ಮೊದಲಾದ ವಿಷಯದ ಎಂ.ಎ, ಎಂ.ಕಾಂ ಜತೆಗೆ ಕೆಲವೊಂದು ಡಿಪ್ಲೊಮಾ ಕೋರ್ಸ್‌ಗೆ ಬೇಡಿಕೆ ಹೆಚ್ಚಿದೆ. 

ಇಲ್ಲೂ ವಿಳಂಬವಾಗಿತ್ತು: 2017-18 ನೇ ಸಾಲಿಗೆ ಮಾನ್ಯತೆ ಪಡೆಯಬೇಕಿರುವ ಬೆಂವಿವಿ ದೂರ ಶಿಕ್ಷಣ ಸಂಸ್ಥೆಯ ಸೆ.23ರೊಳಗೆ ಯುಜಿಸಿಗೆ ಅಗತ್ಯ ದಾಖಲೆ ಸಲ್ಲಿಸಬೇಕಿತ್ತು. 2016-17ನೇ ಸಾಲಿನ ಪ್ರವೇಶಾತಿಯ ದತ್ತಾಂಶ, ಅಧ್ಯಯನ ಕೇಂದ್ರಗಳ ಮಾಹಿತಿ, ಸಿಬ್ಬಂದಿ ಮಾಹಿತಿ, ಮುಂದಿನ ಕಾರ್ಯಯೋಜನೆಗಳು ಹಾಗೂ ಹೊಸ ಕೋರ್ಸ್‌ಗಳ ಅವಶ್ಯಕತೆಯ ಬಗ್ಗೆ ಮಾಹಿತಿ ನಿಗದಿತ ಸಮಯದಲ್ಲಿ ನೀಡಬೇಕಿತ್ತು.

ಹಿಂದಿನ ನಿರ್ದೇಶಕರ ನಿವೃತ್ತಿಯಿಂದಾಗಿ ಸ್ವಲ್ಪ ವಿಳಂಬವಾಗಿತ್ತು. ಆನಂತರ ಎಲ್ಲಾ ಮಾಹಿತಿಗಳನ್ನು ಯುಜಿಸಿಗೆ ಒಪ್ಪಿಸಿ, 2017-18ನೇ ಸಾಲಿಗೆ ಅನುಮತಿ ಪಡೆಯಲಾಗಿದೆ. ಪ್ರತಿ ವರ್ಷ ಜುಲೈನಲ್ಲಿ ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಯುಜಿಸಿ ಮಾನ್ಯತೆ ಹಿಂಪಡೆದಿದ್ದರಿಂದ 2016-17ನೇ ಸಾಲಿನ ಪ್ರವೇಶ ಪ್ರಕ್ರಿಯೆ ವಿಳಂಬವಾಗಿತ್ತು.

ಫೆಬ್ರವರಿ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ್ದು, 2600 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. 2017-18ನೇ ಸಾಲಿಗೆ ಈಗ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಬಿ.ಎ, ಬಿ.ಕಾಂ ಹಾಗೂ ಎಂ.ಎ, ಎಂ.ಕಾಂ ಕೋರ್ಸ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. 2004 ರಿಂದ 2008ರ ಅವಧಿಯಲ್ಲಿ 45,000 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು ಎಂಬ ಮಾಹಿತಿ ಬೆಂವಿವಿ ಮೂಲದಿಂದ ತಿಳಿದುಬಂದಿದೆ.

ನಿರ್ದೇಶಕರಾಗಿ ಪ್ರೊ.ಮೈಲಾರಪ್ಪ: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ.ಬಿ.ಸಿ.ಮೈಲಾರಪ್ಪರನ್ನು ಬೆಂವಿವಿ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಗಿದೆ. ಈ ಹಿಂದೆಯೂ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿರುವ ಅನುಭವನ್ನು ಹೊಂದಿದ್ದಾರೆ.  ಬೆಂವಿವಿ ದೂರ ಶಿಕ್ಷಣ ಕೇಂದ್ರವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಮೈಲಾರಪ್ಪರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ವಿವಿಯ ಆಡಳಿತ ಮಂಡಳಿ ತಿಳಿಸಿದೆ.

ಪ್ರಸಕ್ತ ಸಾಲಿನಲ್ಲಿ ದೂರ ಶಿಕ್ಷಣಕ್ಕೆ ಸಾಕಷ್ಟು ಅರ್ಜಿಗಳು ಬರುತ್ತಿದೆ. ಕಲಾ ಮತ್ತು ವಾಣಿಜ್ಯ ವಿಭಾಗದ ಕೆಲವು ಕೋರ್ಸ್‌ಗಳಿಗೆ ಬೇಡಿಕೆ ಹೆಚ್ಚಿದೆ. ಅರ್ಜಿ ಪ್ರಕ್ರಿಯೆ ಮುಗಿದ ನಂತರ ಅಂಕಿಸಂಖ್ಯೆಯ ಸ್ಪಷ್ಟ ಮಾಹಿತಿ ನೀಡಲಾಗುವುದು.
-ಪ್ರೊ.ಬಿ.ಸಿ.ಮೈಲಾರಪ್ಪ, ನಿರ್ದೇಶಕ, ಅಂಚೆ ಮತ್ತು ದೂರ ಶಿಕ್ಷಣ ನಿರ್ದೇಶನಾಲಯ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.