ಕಾಲೇಜುಗಳಲ್ಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಹೆಚ್ಚಿದ ಬೇಡಿಕೆ


Team Udayavani, May 1, 2021, 10:30 PM IST

Increased demand to vaccinate students in colleges

ಬೆಂಗಳೂರು : ರಾಜ್ಯದಲ್ಲಿ 18ರಿಂದ 45 ವರ್ಷ ಒಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಸಾಂಕೇತಿಕ ಚಾಲನೆ ಸಿಕ್ಕಿದ್ದರೂ, ಅಧಿಕೃತವಾಗಿ ಲಸಿಕೆ ನೀಡುವ ಪ್ರಕ್ರಿಯೆ ಇನ್ನಷ್ಟೆ ಶುರುವಾಗಬೇಕಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಆವರಣದಲ್ಲೇ ಲಸಿಕೆಗೆ ವ್ಯವಸ್ಥೆ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿವೆ.

ಸರ್ಕಾರಿ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ, ಡೀಮ್ಡ್ ವಿಶ್ವವಿದ್ಯಾಲಯ, ಖಾಸಗಿ ಕಾಲೇಜು, ಸರ್ಕಾರಿ, ಅನುದಾನಿತ ಕಾಲೇಜು ಸೇರಿದಂತೆ ಎಲ್ಲ ಮಾದರಿಯ ಕಾಲೇಜುಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳಲ್ಲೇ ಲಸಿಕೆ ಹಾಕಿಸಲು ಸರ್ಕಾರ ವ್ಯವಸ್ಥೆ ಮಾಡಿದರೆ, ಉಳಿದಂತೆ ಸಾರ್ವಜನಿಕರು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಸರ್ಕಾರದ ಅಧಿಕೃತ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯಲು ಅನುಕೂಲವಾಗಲಿದೆ ಎಂಬುದು ವಿವಿಧ ಸಂಘಟನೆಗಳ ಬೇಡಿಕೆಯಾಗಿದೆ.
ಈ ಸಂಬಂಧ ಈಗಾಗಲೇ ಮಾಜಿ ಮೇಯರ್‌ ಬಿ.ಎಸ್‌. ಸತ್ಯನಾರಾಯಣ( ಕಟ್ಟೆಸತ್ಯ) ಸೇರಿದಂತೆ ಅನೇಕರು ಉಪಮುಖ್ಯಮಂತ್ರಿಯೂ ಆಗಿರುವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ.

18 ವರ್ಷ ಮೇಲ್ಪಟ್ಟವರಲ್ಲಿ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಿರುತ್ತಾರೆ. ಹೀಗಾಗಿ ಸಾಮಾನ್ಯ ನಾಗರಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಏಕಕಾಲದಲ್ಲಿ ಲಸಿಕಾ ಕೇಂದ್ರಕ್ಕೆ ಬಂದರೆ, ಹೆಚ್ಚು ಗೊಂದಲ ಸೃಷ್ಟಿಯಾಗುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳಲ್ಲೇ ಲಸಿಕೆ ಹಾಕಿಸಲು ಶಿಬಿರಗಳನ್ನು ಏರ್ಪಡಿಸಬೇಕು. ಈ ಹಿಂದೆ ಕಾಲೇಜುಗಳಲ್ಲಿ ಕೋವಿಡ್‌ ಪರೀಕ್ಷೆಯನ್ನು ಮಾಡಲಾಗಿತ್ತು.ಅದೇ ಮಾದರಿಯಲ್ಲಿ ಲಸಿಕೆಯನ್ನು ಹಾಕಿಸುವ ವ್ಯವಸ್ಥೆ ಆಗಬೇಕು ಎಂದು ಕೋರಿದ್ದಾರೆ.

ವಿಶ್ವವಿದ್ಯಾಲಯಗಳಿಗೆ ಸೂಚನೆ
ರಾಜ್ಯ ಸರ್ಕಾರದಿಂದ ಎಲ್ಲ ವಿಶ್ವವಿದ್ಯಾಲಯಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪ್ರತಿ ವಿಶ್ವವಿದ್ಯಾಲಯದಲ್ಲೂ ಕೊರೊನಾ ಲಸಿಕೆ ಹಾಕಿಸಲು ಶಿಬಿರಗಳನ್ನು ಆಯೋಜಿಸಬೇಕು. ಆರಂಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸಬೇಕು. ನಂತರ ವಿದ್ಯಾರ್ಥಿಗಳಿಗೆ ಹಾಕಿಸಬೇಕು. ಇಡೀ ಕ್ಯಾಂಪಸ್‌ನಲ್ಲಿ ಎಲ್ಲರೂ ಅತಿ ಶೀಘ್ರದಲ್ಲಿ ಲಸಿಕೆ ಪಡೆಯುವಂತೆ ಮಾಡಬೇಕು ಎಂದು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲಸಿಕೆ ಲಭ್ಯತೆ ಆಧಾರದಲ್ಲಿ ಕ್ರಮ 

ಕೊರೊನಾ ಲಸಿಕೆ ಲಭ್ಯತೆ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರತಿ ಕಾಲೇಜುಗಳಲ್ಲೂ ಲಸಿಕೆ ಶಿಬಿರ ನಡೆಸಿ, ನೀಡಬಹುದಾದಷ್ಟು ಪ್ರಮಾಣದಲ್ಲಿ ಲಸಿಕೆ ಲಭ್ಯತೆಯಾದರೆ, ಆ ಬಗ್ಗೆ ಯೋಚನೆ ಮಾಡಲಾಗುತ್ತದೆ. ಸದ್ಯಕ್ಕೆ ಸರ್ಕಾರದಿಂದ ಕಾಲೇಜುಗಳಲ್ಲಿ ಲಸಿಕೆ ಶಿಬಿರ ನಡೆಸುವ ಯಾವ ಸೂಚನೆಯೂ ಬಂದಿಲ್ಲ. ಅಲ್ಲದೆ, ಈಗ ಕಾಲೇಜುಗಳು ರಜೆ ಇರುವುದರಿಂದ ಆನ್‌ಲೈನ್‌ ತರಗತಿ ಮಾತ್ರ ನಡೆಯುತ್ತಿದೆ. ಮುಂದೆ, ಪರಿಸ್ಥಿತಿ ಆಧಾರದಲ್ಲಿ ಸರ್ಕಾರ ಹೊರಡಿಸಬಹುದಾದ ಮಾರ್ಗಸೂಚಿಯಂತೆ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.