ಬಿಬಿಎಂಪಿ ವಿಶೇಷ ಆಯುಕ್ತರಿಗೆ ಹೆಚ್ಚಿದ ಜವಾಬ್ದಾರಿ


Team Udayavani, Sep 17, 2019, 3:08 AM IST

bbmp2

ಬೆಂಗಳೂರು: ಬಿಬಿಎಂಪಿ ಆಯುಕ್ತರ ಅಧಿಕಾರ ವಿಕೇಂದ್ರೀಕರಣ ಮಾಡುವ ಉದ್ದೇಶದಿಂದ ಬಿಬಿಎಂಪಿಯ ವಿಶೇಷ (ಅಪರ) ಆಯುಕ್ತರಿಗೆ ತಲಾ ಎರಡು ವಲಯಗಳ ಸಂಪೂರ್ಣ ಅಧಿಕಾರ ಜವಾಬ್ದಾರಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೆ.6ರಂದು ಬಿಬಿಎಂಪಿಯ ಆಡಳಿತ ವಿಕೇಂದ್ರೀಕರಣ ಹಾಗೂ ಜನರ ಸಮಸ್ಯೆಗಳು ವಲಯ ಮಟ್ಟದಲ್ಲೇ ಪರಿಹರಿಸುವುದಕ್ಕೆ ಕ್ರಮಕೈಗೊಳ್ಳುವ ಉದ್ದೇಶದಿಂದ ಪಾಲಿಕೆಯ ಎಂಟು ವಲಯಗಳಿಗೆ ನಾಲ್ಕು ಮಂದಿ ವಿಶೇಷ ಆಯುಕ್ತರನ್ನು ನೇಮಿಸಿ, ತಲಾ ಎರಡು ವಲಯಗಳ ಜವಾಬ್ದಾರಿ ನೀಡುವಂತೆ ಸೂಚನೆ ನೀಡಿದರು.

ಇದರಂತೆ ಸೋಮವಾರ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕ್ರಮವಹಿಸುವುದಕ್ಕೆ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಲಯಗಳಿದ್ದು, ಎಲ್ಲ ವಲಯಗಳ ಮೇಲುಸ್ತುವಾರಿಯನ್ನು ಬಿಬಿಎಂಪಿಯ ಆಯುಕ್ತರೇ ನಿರ್ವಹಿಸುತ್ತಿರುವುದರಿಂದ ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕೆ ಸಮಸ್ಯೆಯಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ವಿಶೇಷ ಆಯುಕ್ತರಿಗೆ ತಲಾ ಎರಡು ವಲಯಗಳ ಅಧಿಕಾರವಹಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೆಎಂಸಿ ಕಾಯ್ದೆಯಡಿ ವಿಶೇಷ ಆಯುಕ್ತರು ಎರಡು ವಲಯಗಳಿಗೆ ಸಂಬಂಧಿಸಿದ ಕಾಮಗಾರಿ, ಘನತ್ಯಾಜ್ಯ ನಿರ್ವಹಣೆ, ತೋಟಗಾರಿಕೆ, ರಸ್ತೆ ಗುಂಡಿ, ತ್ಯಾಜ್ಯ ವಿಲೇವಾರಿ ವಿದ್ಯುತ್‌, ಆರೋಗ್ಯ, ಶಿಕ್ಷಣ ಹಾಗೂ ಕಟ್ಟಡ ನಿರ್ಮಾಣ ಸೇರಿದಂತೆ ವಲಯಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಬಹುದಾಗಿದೆ. ಇದರೊಂದಿಗೆ ಪಾಲಿಕೆ ಆಯವ್ಯಯ, ವಿಶೇಷ ಅನುದಾನ, ಆಯವ್ಯಯದ ಯೋಜನೆಗಳಿಗೆ ಅನುಮೋದನೆ, ವಿಶೇಷ ಆಯುಕ್ತರಿಗೆ ಹಂಚಿಕೆಯಾಗದ ವಿಷಯ ಮತ್ತು ಶಾಖೆ ಜವಾಬ್ದಾರಿ, ಪಾಲಿಕೆ ಕೌನ್ಸಿಲ್‌ ಸಭೆ ಮತ್ತು ಸ್ಥಾಯಿ ಸಮಿತಿಗೆ ಪ್ರಸ್ತಾವನೆ ಮಂಡಿಸುವ ಅಧಿಕಾರಿ ನಿರ್ವಹಣೆ ಹಾಗೂ ಸರ್ಕಾರದ ಹಂತದ ಸಭೆ, ಸಮಿತಿಗಳಲ್ಲಿ ಪಾಲಿಕೆಯಿಂದ ಆಯುಕ್ತರು ಪ್ರತಿನಿಧಿಸುವ ಹೊಣೆಗಾರಿಕೆ ನೀಡಲಾಗಿದೆ.

ವಿಶೇಷ ಆಯುಕ್ತರಿಗೆ ಆಸ್ತಿ ತೆರಿಗೆ ಸಂಗ್ರಹ, ಕಂದಾಯ ಹಾಗೂ ಜಾಹೀರಾತು ಸೇರಿದಂತೆ ಬಿಬಿಎಂಪಿಯ ಆದಾಯ ಹೆಚ್ಚಿಸುವ ಜವಾಬ್ದಾರಿಯನ್ನೂ ನೀಡಲಾಗಿದೆ. ಈಗ ಎಲ್ಲ ಕಡತಗಳಿಗೂ ಆಯುಕ್ತರೇ ಸಹಿ ಮಾಡುತ್ತಿದ್ದು, ಇದರಿಂದ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿಲ್ಲ ಹಾಗೂ ಆಡಳಿತಾತ್ಮಕ ನಿರ್ವಹಣೆ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ, ಈಗ ವಿಶೇಷ ಆಯುಕ್ತರಿಗೆ ವಲಯಗಳ ಮೇಲುಸ್ತುವಾರಿ ನೀಡಿರುವುದರಿಂದ ಬಿಬಿಎಂಪಿ ಆಯುಕ್ತರಿಗೆ ಹೊರೆ ಕಡಿಮೆ ಆಗುವುದರ ಜತೆಗೆ ಸಮಸ್ಯೆಗಳಿಗೆ ಶ್ರೀಘ್ರ ಪರಿಹಾರ ಸಿಗಲಿದೆ. ವಿಶೇಷ ಆಯುಕ್ತರು ಈಗ ಇರುವ ಜವಾಬ್ದಾರಿಯ ಜತೆಗೆ ವಲಯಗಳ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.

ವಲಯ ವಿಶೇಷ ಆಯುಕ್ತರು
-ಪೂರ್ವ ಮತ್ತು ಯಲಹಂಕ ಡಾ.ರವಿಕುಮಾರ್‌ ಸುರಪುರ (ಯೋಜನೆ ವಿಭಾಗ)
-ದಕ್ಷಿಣ ಮತ್ತು ಆರ್‌.ಆರ್‌.ನಗರ ಎಂ.ಲೋಕೇಶ್‌ (ಹಣಕಾಸು)
-ಪಶ್ವಿ‌ಮ ಮತ್ತು ದಾಸರಹಳ್ಳಿ ಅನ್ಬುಕುಮಾರ್‌ (ಆಡಳಿತ)
-ಮಹಾದೇವಪುರ ಮತ್ತು ಬೊಮ್ಮನಹಳ್ಳಿ ಡಿ.ರಂದೀಪ್‌ (ಘನತ್ಯಾಜ್ಯ ನಿರ್ವಹಣೆ)

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.