ಠಾಣೆಯಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯ ನಡೆ; ಪಿಎಸ್ಐ ಅಮಾನತು, ಕೇಸ್
Team Udayavani, Apr 13, 2023, 1:54 PM IST
ಬೆಂಗಳೂರು: ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಸುದ್ದುಗುಂಟೆಪಾಳ್ಯ ಠಾಣೆಯ ಪಿಎಸ್ಐ ಮಂಜುನಾಥಸ್ವಾಮಿಯನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ. ಜತೆಗೆ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದರು.
ಏ.8ರಂದು ಸಂತ್ರಸ್ತೆ ಸಹೋದರನ ಸ್ನೇಹಿತನ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಠಾಣೆಗೆ ಬಂದಿದ್ದರು. ಆಗ ಪಿಎಸ್ಐ ಮಂಜುನಾಥಸ್ವಾಮಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೇಳಿಕೆ ಪಡೆಯುವ ವೇಳೆ ತನ್ನ ಸೊಂಟ ಮತ್ತು ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ, ತಡರಾತ್ರಿ ವಾಟ್ಸ್ಆ್ಯಪ್ ಚಾಟ್ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ.
ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಎಂದು ಹೇಳಲಾಗಿದ್ದು, ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಿಕೆ ನೀಡಲು ಹೋದಾಗ ದುರ್ಘಟನೆ ನಡೆದಿದೆ ಎಂದು ಸಂತ್ರಸ್ತೆ ಟ್ವಿಟರ್ನಲ್ಲಿ ಸರಣಿ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದಾಗ ಮಂಜುನಾಥಸ್ವಾಮಿ ಸಂತ್ರಸ್ತೆ ಜತೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸದ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ನೀಡಲಾಗಿದೆ.
ಜತೆಗೆ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ