ಅಶ್ಲೀಲವಾಗಿ ಫೋಟೋ ಮಾರ್ಫಿಂಗ್ ಮಾಡಿ ಸಂದೇಶ ರವಾನೆ
ಡೆತ್ನೋಟ್ ಬರೆದು ವ್ಯಕ್ತಿ ಆತ್ಮಹತ್ಯೆ
Team Udayavani, Jul 27, 2022, 9:38 AM IST
ಬೆಂಗಳೂರು: ಆನ್ಲೈನ್ನಲ್ಲಿ ಪಡೆದ ಸಾಲ ಹಿಂತಿರುಗಿಸುವುದು ತಡವಾದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಿಚಿತರ ಮೊಬೈಲ್ಗೆ ಸಾಲ ಪಡೆದ ವ್ಯಕ್ತಿಯ ಅಶ್ಲೀಲ ಫೋಟೊ ಕಳುಹಿಸಿದ್ದರಿಂದ ನೊಂದ ಬ್ಯಾಂಕ್ ಉದ್ಯೋಗಿಯೊಬ್ಬರು ಡೆತ್ ನೋಟ್ ಬರೆದಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾಗದೇವನಹಳ್ಳಿಯ ನಿವಾಸಿ ನಂದಕುಮಾರ್ (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ನಂದಕುಮಾರ್ ಆನ್ಲೈನ್ ನಲ್ಲಿ ಲಕ್ಷಾಂತರ ರೂ. ಸಾಲ ತೆಗೆದುಕೊಂಡಿದ್ದರು. ಸಾಲದ ಹಣ ಮರುಪಾವತಿಸಲು ಕೊಂಚ ತಡವಾದರೂ ಸಾಲ ಕೊಟ್ಟ ಆನ್ಲೈನ್ ಆ್ಯಪ್ ಸಂಸ್ಥೆಯ ಸಿಬ್ಬಂದಿ ಕರೆ ಮಾಡಿ ಬೆದರಿಸುತ್ತಿದ್ದರು. ನಂದಕುಮಾರ್ ಅವರ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಅಶ್ಲೀಲವಾಗಿ ಮಾರ್ಪಡಿಸಿ ಅವರ ಫೋಟೊವನ್ನು ಕಳುಹಿಸುತ್ತಿದ್ದರು. ಇದರಿಂದ ಮನನೊಂದ ನಂದನ್ ಸೈಬರ್ ಕ್ರೈಂ ಠಾಣೆಗೆ ದೂರು ಕೊಟ್ಟಿದ್ದರು.
ಇದನ್ನೂ ಓದಿ: ಪಬ್ನವರೇ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು
ಇಷ್ಟಾದರೂ, ಆನ್ಲೈನ್ನಲ್ಲಿ ಸಾಲ ಕೊಟ್ಟವರು ಕಿರುಕುಳ ಕೊಡಲಾರಂಭಿಸಿದ್ದರು. ಇದರಿಂದ ನೊಂದ ನಂದಕುಮಾರ್ ಜು.25ರಂದು ಬೆಳಗ್ಗೆ ಕೆಂಗೇರಿ ಮತ್ತು ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಮಧ್ಯದಲ್ಲಿ ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್ಲೈನ್ ಆ್ಯಪ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡೆತ್ ನೋಟ್ನಲ್ಲಿ ಉಲ್ಲೇಖೀಸಿದ್ದಾರೆ. ಬೆಂಗಳೂರು ಸಿಟಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ