ಭಾರತ ಪ್ರಾಚೀನ ಜ್ಞಾನ ಮರೆತಿದೆ


Team Udayavani, Aug 11, 2018, 11:29 AM IST

bharata.jpg

ಬೆಂಗಳೂರು: ಸಮಾಜ ಇಂದು ಭಾವನಾತ್ಮಕ ಬಿಕಟ್ಟು ಎದುರಿಸುತ್ತಿದ್ದು, ಈ ಬಿಕ್ಕಟ್ಟಿನಿಂದ ಹೊರಬರಲು ಆಧುನಿಕ ಭಾರತದಲ್ಲಿ ಪ್ರಾಚೀನ ಜ್ಞಾನವು ಶಿಕ್ಷಣದ ಭಾಗವಾಗಬೇಕು ಎಂದು ಟಿಬೆಟ್‌ನ ಧಾರ್ಮಿಕ ಗುರು ದಲೈ ಲಾಮಾ ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರು ನಗರದ ಹೋಟೆಲ್‌ ಒಂದರಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಧನ್ಯವಾದ ಕರ್ನಾಟಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತವು ತನ್ನ ಪ್ರಾಚೀನ ಜ್ಞಾನವನ್ನು ಮರೆತುಬಿಟ್ಟಿದೆ. ಇದರಿಂದ ಭಾವನಾತ್ಮಕ ಬಿಕ್ಕಟ್ಟು ಉಂಟಾಗಿದೆ. ಈ ಬಿಕ್ಕಟ್ಟು ಮನುಷ್ಯನನ್ನು ರಚನಾತ್ಮಕ ಮನಸ್ಥಿತಿಯಿಂದ ವಿನಾಶಕಾರಿ ಮನಸ್ಥಿತಿಯತ್ತ ಕೊಂಡೊಯ್ಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಪ್ರಾಚೀನ ಜ್ಞಾನ ಕುರಿತ ಪಠ್ಯ ಅಳವಡಿಸಬೇಕು. ಆ ಮೂಲಕ ಪ್ರಾಚೀನ ಜ್ಞಾನವನ್ನು ಮರುಸ್ಥಾಪನೆ ಮಾಡಬೇಕು ಎಂದರು.

ಪ್ರಾಚೀನ ಜ್ಞಾನವನ್ನು ಒಳಗೊಂಡ ಶಿಕ್ಷಣವು ಮಕ್ಕಳಲ್ಲಿ ಆರೋಗ್ಯದ ಜತೆಗೆ ನಿರ್ಮಲ ಭಾವನೆಗಳನ್ನು ಬಿತ್ತುವಂತಿರಬೇಕು. ಜತೆಗೆ ಮನಶಾÏಸ್ತ್ರ, ತತ್ವಶಾಸ್ತ್ರ ಮತ್ತಿತರ ವಿಷಯಗಳನ್ನೂ ಒಳಗೊಂಡಿರಬೇಕು ಅಂದಾಗ, ಈ ಭಾವನಾತ್ಮಕ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯ ಎಂದರು.

ಭಾರತವು ಅಹಿಂಸೆ ಪ್ರತಿಪಾದಿಸುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಅದು ನಿಜವಾದ ಕರುಣೆಯಿಂದ ಕೂಡಿರುವಂತಹದ್ದು. ಆ ಸಂಸ್ಕೃತಿಯನ್ನು ಟಿಬೆಟ್‌ ಪೋಷಿಸಿಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಭಾರತ “ಗುರು’ವಾಗಿದ್ದರೆ, ಟಿಬೆಟ್‌ ಅದರ “ಚೇಲಾ’ ಆಗಿತ್ತು. ಆದರೆ, ಈಗ ಇದು ತಿರುವು-ಮುರುವು ಆಗಿದೆ ಎಂದು ಸೂಚ್ಯವಾಗಿ ಹೇಳಿದರು.

ನಿಜಲಿಂಗಪ್ಪ ಮೆಲುಕು: ಟಿಬೆಟ್‌ನ ಸಂಸ್ಕೃತಿ ಮತ್ತು ಶಿಕ್ಷಣವನ್ನು ಉಳಿಸಿ-ಬೆಳೆಸುವಲ್ಲಿ ಭಾರತದ ಪಾತ್ರ ಮಹತ್ತರವಾಗಿದೆ. 1956ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ಟಿಬೆಟಿಯನ್ನರಿಗೆ ಆಶ್ರಯ ಕೊಟ್ಟರು. ನಂತರ ಟಿಬೆಟ್‌ ಕಾಲೊನಿ ಸ್ಥಾಪನೆಗೆ ಬೆಂಬಲಿಸಿದರು. ಅದೇ ರೀತಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಮುಂದೆಬಂದು, ಟಿಬೆಟ್‌ ನಿರಾಶ್ರಿತರಿಗೆ ಭೂಮಿ ಕೊಟ್ಟು, ಆಶ್ರಯ ನೀಡಿದರು. ಟಿಬೆಟ್‌ ಯಾವಾಗಲೂ ಭಾರತಕ್ಕೆ ಋಣಿಯಾಗಿದೆ ಎಂದು ಸ್ಮರಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ದಿವಂಗತ ಎಸ್‌. ನಿಜಲಿಂಗಪ್ಪ ಅವರು ಟಿಬೆಟಿಯನ್ನರಿಗೆ ಅಂದು ಆಶ್ರಯ ನೀಡಿದರು. ಈಗ ಟಿಬೆಟಿಯನ್ನರು ನಮ್ಮೊಳಗೆ ಒಬ್ಬರಾಗಿದ್ದಾರೆ. ಅವರದ್ದೇ ಆದ ಕೊಡುಗೆ ನೀಡುತ್ತಿದ್ದಾರೆ. ಸಂಸ್ಕೃತಿಗಳ ವಿನಿಮಯಕ್ಕೆ ಇದು ಅನುವು ಮಾಡಿಕೊಟ್ಟಿದೆ ಎಂದು ಬಣ್ಣಿಸಿದರು.

ಇದಕ್ಕೂ ಮೊದಲು ಕನ್ನಡ ಮತ್ತು ಟಿಬೆಟ್‌ ಸಂಸ್ಕೃತಿಯ ಸಮ್ಮಿಲನಕ್ಕೆ “ಧನ್ಯವಾದ ಕರ್ನಾಟಕ’ ವೇದಿಕೆಯಾಯಿತು. ಒಂದೆಡೆ ಕುವೆಂಪು ಅವರ “ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಹಾಡು, ಮತ್ತೂಂದೆಡೆ ಟಿಬೆಟ್‌ನ ಸಾಂಪ್ರದಾಯಿಕ ನೃತ್ಯ ಗಮನಸೆಳೆಯಿತು. ಕೇಂದ್ರ ಟಿಬೆಟ್‌ ಆಡಳಿತ ಅಧ್ಯಕ್ಷ ಡಾ.ಲೊಬ್ಸಂಗ್‌ ಸಿಂಘೆ, ಗಡಿಪಾರು ಟಿಬೆಟನ್‌ ಸಂಸತ್ತಿನ ಅಧ್ಯಕ್ಷ ಖೆಂಪೊ ಸೋನಂ ತೇಂಫೆಲ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.