ಪಾಲಿಕೆ ದೂರಿನಿಂದ ಗೇಲ್‌ ಕಾಮಗಾರಿಗೆ ಹಿನ್ನಡೆ


Team Udayavani, Jan 4, 2022, 11:36 AM IST

ಪಾಲಿಕೆ ದೂರಿನಿಂದ ಗೇಲ್‌ ಕಾಮಗಾರಿಗೆ ಹಿನ್ನಡೆ

ಬೆಂಗಳೂರು: ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮೀಷನ್‌ ಆರೋಪ ಇತ್ತೀಚೆಗೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದರಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿಲ್ಲ ಎಂಬ ಆರೋಪವೂ ಗುತ್ತಿಗೆದಾರರಿಂದ ಕೇಳಿಬಂದಿತ್ತು. ಆದರೆ, ಗುತ್ತಿಗೆ ಕಾಮಗಾರಿಗಳು ಮಾತ್ರವಲ್ಲ; ಸರ್ಕಾರಿ ಸಂಸ್ಥೆಗಳಿಗೂ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳದ ಸ್ಥಿತಿ ಈಗ ನಿರ್ಮಾಣವಾಗಿದೆ!

ಸರ್ಕಾರಿ ಸಂಸ್ಥೆಯೇ ಕೇಂದ್ರ ಸರ್ಕಾರಿ ಸಂಸ್ಥೆ ವಿರುದ್ಧ ಎಫ್ ಐಆರ್‌ ದಾಖಲಿಸಿ, ಅಭಿವೃದ್ಧಿ ಕಾಮಗಾರಿಗೆ ಅಡ್ಡಿ ಉಂಟುಮಾಡಿರುವುದು ನಗರದ ನಾಯಂಡಹಳ್ಳಿಯಲ್ಲಿ ನಡೆದಿದ್ದು, ಘಟನೆಯು ತಡವಾಗಿ ಬೆಳಕಿಗೆಬಂದಿದೆ.

ಕೇಂದ್ರದ ಮಹತ್ವಾಕಾಂಕ್ಷಿ ಅನಿಲ ಕೊಳವೆ ಮಾರ್ಗ ಯೋಜನೆಯನ್ನು ನಗರದಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೇಲ್‌)ವು ಕೈಗೆತ್ತಿಕೊಂಡಿದ್ದು, ಇದಕ್ಕಾಗಿ ಅಗತ್ಯ ಅನುಮತಿ ಯನ್ನೂ ಬಿಬಿಎಂಪಿಯಿಂದ ಪಡೆಯಲಾಗಿದೆ. ಆದಾಗ್ಯೂ “ಅಗತ್ಯ ಅನುಮತಿ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಆರೋಪಿಸಿ ಗೇಲ್‌ ಸಂಸ್ಥೆಯ ವಿರುದ್ಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಬಿಬಿಂಎಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪರ್ಸೆಂಟೇಜ್‌ ಘಮಲು ಇಲ್ಲಿಯೂ ಬರುತ್ತಿದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.

ಪಾಲಿಕೆ ದೂರು ನೀಡಿದ್ದರಿಂದ ಗೇಲ್‌ ಕಾಮಗಾರಿಗೆ ತುಸು ಹಿನ್ನಡೆಯಾಗಿತ್ತು. ಅಷ್ಟೇ ಅಲ್ಲ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಎರಡೂ ಅಭಿವೃದ್ಧಿ ಮಂತ್ರ ಪಠಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯೇ ಹೀಗೆ ಕೇಂದ್ರ ಸರ್ಕಾರದ ಅಂಗ ಸಂಸ್ಥೆ ವಿರುದ್ಧ ಎಫ್ಐಆರ್‌ ದಾಖಲಿಸಿರುವುದು ಮುಜುಗರ ಕೂಡ ಉಂಟುಮಾಡಿದೆ.

ಸಿಎಸ್‌ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ?: ಇದಕ್ಕೆ ಪ್ರತಿಯಾಗಿ ಗೇಲ್‌ ಅಧಿಕಾರಿಗಳು, ಬಿಬಿಎಂಪಿ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ. ಜತೆಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಗಮನವನ್ನೂ ಸೆಳೆದಿದ್ದಾರೆ. ಆಗ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಪರಿಶೀಲನೆ ನಡೆಸಿ, ಬಿಬಿಎಂಪಿ ಮುಖ್ಯ ಆಯುಕ್ತರು, ಗೇಲ್‌ ಅಧಿಕಾರಿಗಳ ನಡುವೆ ಮಾತುಕತೆ ನಡೆಸಿದ್ದಾರೆ. ನಂತರ ಸಮಸ್ಯೆ ಬಗೆಹರಿದಿದೆ ಎನ್ನಲಾಗಿದೆ.

ಅಂತಿಮವಾಗಿ ಬಿಬಿಎಂಪಿ ಮುಖ್ಯ ಆಯುಕ್ತರು, “ಗೇಲ್‌ ನಗರದ ಹೊರವರ್ತುಲ ರಸ್ತೆಯಲ್ಲಿ ಅಂದರೆ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಸುಮನಹಳ್ಳಿ ಮತ್ತು ನಾಯಂಡಹಳ್ಳಿ ಮಾರ್ಗದಲ್ಲಿ ಅನಿಲ ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಅಗತ್ಯ ಅನುಮತಿ ಪಡೆದಿದ್ದಾರೆ.

ಆದರೆ, ಸ್ಥಳೀಯ ಅಧಿಕಾರಿಗಳ ಮಾಹಿತಿ ಕೊರತೆಯಿಂದ ದೂರು ದಾಖಲಿಸಲಾಗಿದ್ದು, ಅದನ್ನು ಈಗ ಹಿಂಪಡೆಯಬೇಕು’ ಎಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೂರನ್ನು ಅಲ್ಲಿಗೇ ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರಿನಲ್ಲಿ ಏನಿದೆ? :

“ನಾಯಂಡಹಳ್ಳಿಯ ಕಲ್ಯಾಣಿ ಮೋಟಾರ್ ಮುಂಭಾಗದಲ್ಲಿ ಗೇಲ್‌, ಡಿಗ್ಗಿಂಗ್‌ ಯಂತ್ರದಿಂದ ರಸ್ತೆ ಅಗೆದಿದ್ದು, ಸುಮಾರು 10 ಮೀಟರ್‌ಗೂ ಅಧಿಕರಸ್ತೆಯನ್ನು ಹಾಳುಮಾಡಿದೆ. ಈ ಬಗ್ಗೆ ಸಂಸ್ಥೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ನಮ್ಮದು ಸಣ್ಣಕಂಪನಿಯಲ್ಲ; ದೊಡ್ಡ ಕಂಪನಿಯಾಗಿದೆ. ನೀವೇನಾದರೂ ನಮ್ಮ ಕೆಲಸಕ್ಕೆ ಅಡ್ಡಿಪಡಿಸಿದರೆ, ನಿಮ್ಮ ಕೆಲಸ ಕಳೆದುಕೊಳ್ಳುತ್ತೀರಾ ಎಂದು ಬೆದರಿಕೆ ಹಾಕಿರುತ್ತಾರೆ. ಈಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಿಬಿಎಂಪಿ ಕಿರಿಯ ಎಂಜಿನಿಯರೊಬ್ಬರು ದೂರುದಾಖಲಿಸಿದ್ದಾರೆ. “ಮಾಹಿತಿ ಕೊರತೆಯಿಂದ ಗೇಲ್‌ವಿರುದ್ಧ ಎಫ್ಐಆರ್‌ ದಾಖಲಿಸಲಾಗಿತ್ತು. ನಂತರದಲ್ಲಿ ಕಾಮಗಾರಿಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿಅನುಮತಿ ಪಡೆದಿರುವುದು ಗೊತ್ತಾಯಿತು. ಹಾಗಾಗಿ, ದೂರು ಹಿಂಪಡೆಯಲಾಗಿದೆ. ಈ ಮಧ್ಯೆ ಕಾಮಗಾರಿಸ್ಥಗಿತಗೊಂಡಿಲ್ಲ; ಎಂದಿನಂತೆ ಅಲ್ಲಿ ಮುಂದುವರಿದಿದೆ’ ಎಂದು ದೂರು ನೀಡಿದ್ದ ಕಿರಿಯ ಎಂಜಿನಿಯರ್‌ “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.