ಭಾರತೀಯರಿಗೆ ಸಂಪರ್ಕ ಭಾಷೆ ಅಗತ್ಯ


Team Udayavani, Jul 15, 2019, 3:04 AM IST

bharatiya

ಬೆಂಗಳೂರು: ಭಾರತೀಯರು ಪರಸ್ಪರ ಸಂವಹನ ಸಾಧಿಸಲು ಸಂಪರ್ಕ ಭಾಷೆಯೊಂದರ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.

ರತ್ನ ಬುಕ್‌ ಹೌಸ್‌, ನಗರದ ಹೋಟೆಲ್‌ ಒಂದರಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಲ್ಲಿಕಾರ್ಜುನ ಹಿರೇಮಠ ಅವರ “ಹವನ’ ಕಾದಂಬರಿಯ ಇಂಗ್ಲಿಷ್‌ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಪರ್ಕ ಭಾಷೆಯೊಂದು ಇಲ್ಲದ ಹಿನ್ನೆಲೆಯಲ್ಲಿ ತಮಿಳು, ತೆಲಗು ಸೇರಿದಂತೆ ಇನ್ನಿತರ ಭಾಷೆಯ ಜನರೊಂದಿಗೆ ಮಾತನಾಡಲು ಆಗುತ್ತಿಲ್ಲ. ಅವರೊಂದಿಗೆ ಸಂವಹನ ನಡೆಸಬೇಕಾದರೆ ಇಂಗ್ಲಿಷ್‌ ಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ ದೇಶದ ಇತರರೊಂದಿಗೆ ಸಂಪರ್ಕ ಸಾಧಿಸಲು, ಸಂಪರ್ಕ ಭಾಷೆಯೊಂದು ಅಗತ್ಯವಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್‌ ವ್ಯಾಮೋಹ ಹೆಚ್ಚಾಗಿದೆ. ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆಂಗ್ಲ ಭಾಷೆ ಕಲಿತವರೆಲ್ಲ ಬುದ್ಧಿವಂತರಲ್ಲ ಎಂಬುವುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜತೆಗೆ ಮಾತೃ ಭಾಷೆಯಲ್ಲೇ ಶಿಕ್ಷಣ ಪಡೆದರೆ ಮಕ್ಕಳ ಸೃಜನಶೀಲತೆ ಹೆಚ್ಚಾಗಲಿದೆ ಎಂಬುವುದನ್ನು ಅರಿಯಬೇಕು ಎಂದರು.

ಭಾರತದಲ್ಲಿ ಆಳ್ವಿಕೆ ನಡೆಸಿದ ಆಂಗ್ಲರು ನಮ್ಮಲ್ಲಿ ಕೀಳರಿಮೆ ಬೆಳಸಿದರು. ಹಾಗಾಗಿಯೇ ಬ್ರಿಟಿಷರು ಹೇಳಿದ ಎಲ್ಲದಕ್ಕೂ ನಮ್ಮ ಹಿರಿಯರು ತಲೆದೂಗಿದರು. ನಮ್ಮ ಆಯುರ್ವೇದ ಶ್ರೇಷ್ಠವಾಗಿದ್ದರೂ, ಇಂದಿಗೂ ಕೂಡ ಇಂಗ್ಲಿಷ್‌ ಔಷಧ ಶ್ರೇಷ್ಠ ಎಂದು ಕೊಂಡಿದ್ದೇವೆ ಎಂದು ಹೇಳಿದರು.

ಮಲ್ಲಿಕಾರ್ಜುನ ಹಿರೇಮಠ ಅವರ ಕನ್ನಡ “ಹವನ’ ಕಾದಂಬರಿ, ಇಂಗ್ಲಿಷ್‌ಗೆ ಅನುವಾದ ಆಗಿರುವುದು ಖುಷಿ ಕೊಟ್ಟಿದೆ. ಎಲ್ಲಾ ಭಾಷೆ ಜನರಿಗೂ ಇದು ತಲುಪಲಿ ಎಂದು ಆಶಿಸಿದರು.

ಹಿರಿಯ ವಿಮರ್ಶಕ ಡಾ.ಸಿ.ಎನ್‌.ರಾಮಚಂದ್ರನ್‌ ಮಾತನಾಡಿ, ಹವನ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಸಿಗಬೇಕಾಗಿತ್ತು.ಆದರೆ ಪ್ರಕಾಶಕರು ಮಾಡಿದ ಕೆಲವು ತಪ್ಪುಗಳಿಂದಾಗಿ ಈ ಕಾದಂಬರಿ ಓದುಗರ ಕೈಗೆ ತಲುಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಂಗ್ಲ ಭಾಷೆ ಪ್ರಕಾಶರು, ಈ ಕಾದಂಬರಿಗೆ ನ್ಯಾಯ ನೀಡಿದ್ದಾರೆ.ಅನುವಾದಕರು ಕೂಡ ಮೂಲ ವಸ್ತುವಿಗೆ ಚ್ಯುತಿಬಾರದ ಹಾಗೇ ಅನುವಾದ ಮಾಡಿದ್ದಾರೆ ಎಂದು ಪ್ರಶಂಸಿದರು.

ಕಾದಂಬರಿ ಕುರಿತು ಮಾತನಾಡಿದ ಲೇಖಕ ಡಾ.ಟಿ.ಪಿ.ಅಶೋಕ್‌ , ಹವನ ಕಾದಂಬರಿ ಬಂಜಾರ ಸಮುದಾಯವನ್ನು ಕುರಿತ ಕಥೆ ಹೊಂದಿದ್ದು ಆಧುನೀಕ ಭಾರತದ ತಲ್ಲಣಗಳು ಇದರಲ್ಲಿ ಅಡಗಿವೆ ಎಂದು ಹೇಳಿದರು. ರತ್ನ ಬುಕ್‌ ಹೌಸ್‌ನ ಶ್ರೀಧರ್‌ ಬಾಲನ್‌, ಡಾ.ವಿಜಯ ವಾಮನ್‌, ಕಾದಂಬರಿಕಾರ ಮಲ್ಲಿಕಾರ್ಜುನ ಹಿರೇಮಠ, ಅನುವಾದಕ ಎಸ್‌.ಮೋಹನ್‌ ರಾಜ್‌ ಇದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.