ಇಂದಿರಾ ಕ್ಯಾಂಟೀನ್‌: ಪಾಲಿಕೆಗೆ ಆರ್ಥಿಕ ಹೊರೆ


Team Udayavani, Sep 25, 2019, 3:06 AM IST

indeera

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಯೋಜನೆಗೆ ಶೇ.50 ಆರ್ಥಿಕ ಹೊರೆ ಭರಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಶೇ.25 ಮಾತ್ರ ನೆರವು ಭರವಸೆ ನೀಡಿದೆ. ಹೀಗಾಗಿ, ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಯೋಜನೆಯ ಶೇ.100 ರಾಜ್ಯ ಸರ್ಕಾರವೇ ಭರಿಸಬೇಕು ಎಂಬುದು ಬಿಬಿಎಂಪಿ ಬೇಡಿಕೆಯಾಗಿತ್ತು. ಆದರೆ, ಶೇ.50 ಭರಿಸುವ ಭರವಸೆ ದೊರೆತಿತ್ತು. ಆದರೆ, ಹಣಕಾಸು ಇಲಾಖೆ ಶೇ.25 ಮಾತ್ರ ಕೊಡಲು ಸಾಧ್ಯ ಎಂದು ತಿಳಿಸಿದ್ದು, ಶೇ.75 ಪಾಲಿಕೆ ಭರಿಸಬೇಕಾಗಿದೆ.

ಶೇ.50 ನೆರವು ನೀಡಿದರೆ ಮಾತ್ರ ಯೋಜನೆ ಮುಂದುವರಿಸಲು ಸಾಧ್ಯ ಎಂದು ಬಿಬಿಎಂಪಿ ಹೇಳಿದೆ. ಒಂದೊಮ್ಮೆ ನಿರೀಕ್ಷಿತ ನೆರವು ಸಿಗದಿದ್ದರೆ ಬಿಬಿಎಂಪಿ ವತಿಯಿಂದ ಇಂದಿರಾ ಕ್ಯಾಂಟೀನ್‌ ನಡೆಸಲು ಸಾಧ್ಯವೇ ಎಂಬ ಬಗ್ಗೆ ಪಾಲಿಕೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವ ಸಾಧ್ಯತೆಯಿದೆ. ಹೀಗಾಗಿ, ರಾಜ್ಯ ಸರ್ಕಾರವು ಯಾವ ರೀತಿ ಸ್ಪಂದಿಸಲಿದೆ ಎಂಬುದರ ಮೇಲೆ ಯೋಜನೆಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌, ಸದ್ಯಕ್ಕೆ ಇಂದಿರಾ ಕ್ಯಾಂಟಿನ್‌ ಬಿಬಿಎಂಪಿ ವತಿಯಿಂದಲೇ ನಿರ್ವಹಣೆ ಮಾಡಲಾಗುತ್ತಿದೆ. ಸರ್ಕಾರ ಶೇ. 50 ಅನುದಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಹಣಕಾಸು ಇಲಾಖೆಯು ಸರ್ಕಾರದಿಂದ ಶೇ. 25ರಷ್ಟು ಮಾತ್ರ ಅನುದಾನ ನೀಡಲು ಸಾಧ್ಯ ಎಂದು ತಿಳಿಸಿದೆ.

ಬಿಬಿಎಂಪಿಗೆ ಶೇ. 50 ಅನುದಾನ ನೀಡಿದರೆ ಮಾತ್ರ ಇಂದಿರಾ ಕ್ಯಾಂಟಿನ್‌ ಯೋಜನೆ ಮುಂದುವರಿಸಲು ಸಾಧ್ಯ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಅನುದಾದ ವಿಷಯದಲ್ಲಿ ಪಾಲಿಕೆ ಸರ್ಕಾರದಿಂದ ಸ್ಪಷ್ಟ ಉತ್ತರ ಪಡೆಯಬೇಕಾಗಿದೆ. ಇಲ್ಲದಿದ್ದಲ್ಲಿ ಇಂದಿರಾ ಕ್ಯಾಂಟಿನ್‌ ಬಿಬಿಎಂಪಿ ವತಿಯಿಂದ ನಡೆಸಲು ಸಾಧ್ಯವೇ ಎನ್ನುವುದನ್ನು ಪಾಲಿಕೆಯ ಸಭೆಯಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಅನುದಾನವೇ ಸಿಕ್ಕಿಲ್ಲ: ಬಿಬಿಎಂಪಿ ವ್ಯಾಪ್ತಿಯಲ್ಲಿ 174 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟಿನ್‌ ಆರಂಭಿಸಲಾಗಿದೆ. 18 ಕಡೆ ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಾರಂಭದಲ್ಲಿ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟಿನ್‌ ಯೋಜನೆಗೆ 100 ಕೋಟಿ ರೂ. ಅನುದಾನ ಒದಗಿಸಿತ್ತು. ಆ ನಂತರ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಈ ಯೋಜನೆಗೆ ಯಾವುದೇ ಅನುದಾನ ನೀಡಿರಲಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಕೂಡಾ ಅನುದಾನ ನೀಡದೆ ಯೋಜನೆಯಲ್ಲಿ ಅವ್ಯವಹಾರ ಆರೋಪ ತನಿಖೆಗೆ ಸೂಚಿಸಿದೆ.

ಮತ್ತೊಂದು ಹೊರೆ: ಬಿಬಿಎಂಪಿ 2019-20 ನೇ ಸಾಲಿನಲ್ಲಿ ಕ್ಯಾಂಟೀನ್‌ ನಿರ್ವಹಣೆಗೆ 152 ಕೋಟಿ ರೂ. ಅಂದಾಜು ಮಾಡುವುದರ ಜತೆಗೆ ಈ ಹಿಂದಿನ ವರ್ಷದಲ್ಲಿ ಹೆಚ್ಚುವರಿಯಾಗಿ ವೆಚ್ಚ ಮಾಡಿದ 58 ಕೋಟಿ ರೂ. ಸೇರಿಸಿ ಒಟ್ಟು 210 ಕೋಟಿ ಬಿಡುಗಡೆ ಮಾಡುವಂತೆ ರಾಜ್ಯಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿತ್ತು. ಆದರೆ, ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಈ ವರ್ಷ ಪ್ರಾರಂಭದಿಂದ ಪ್ರತಿ ತಿಂಗಳು ಇಂದಿರಾ ಕ್ಯಾಂಟೀನ್‌ ಗುತ್ತಿಗೆದಾರರಿಗೆ ಬಿಲ್‌ ಪಾವತಿಗೆ ಬಿಬಿಎಂಪಿ ಬೇರೆ ಬೇರೆ ಯೋಜನೆಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.