ಇಂದಿರಾ ಕ್ಯಾಂಟೀನ್‌ಗೆ ಒಂದು ವರ್ಷದ ಸಂಭ್ರಮ


Team Udayavani, Aug 16, 2018, 12:58 PM IST

indira-can.jpg

ಬೆಂಗಳೂರು: ನಗರದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿರುವ ಇಂದಿರಾ ಕ್ಯಾಂಟೀನ್‌ ಯೋಜನೆ ಅನುಷ್ಠಾನಗೊಂಡು ವರ್ಷ ಕಳೆದಿದ್ದು, ಒಂದು ವರ್ಷದಲ್ಲಿ ಆರು ಕೋಟಿ ಜನರಿಗೆ ಆಹಾರ ಪೂರಕೆ ಮಾಡಿದ ಕೀರ್ತಿಗೆ ಕ್ಯಾಂಟೀನ್‌ಗಳಿಗೆ ಸೇರಿದೆ.

ರಾಜ್ಯ ಸರ್ಕಾರದ 2017-18ನೇ ಸಾಲಿನ ಬಜೆಟ್‌ನಲ್ಲಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಅದರಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯ ಒಟ್ಟು 171 ಇಂದಿರಾ ಕ್ಯಾಂಟೀನಗಳು ಹಾಗೂ 17 ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ನಿತ್ಯ ಸುಮಾರು 2 ಲಕ್ಷ ಮಂದಿಗೆ ಆಹಾರ ಪೂರೈಸುತ್ತಿವೆ. 

ಇದರೊಂದಿಗೆ ಜನರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ಗಳ ಮೆನು ಸಹ ಬದಲಾವಣೆ ಮಾಡಲಾಗಿದೆ. ಜತೆಗೆ ಕೆಲವು ಕ್ಯಾಂಟೀನ್‌ಗಳಲ್ಲಿ ಪ್ರಾಯೋಗಿಕವಾಗಿ ಮುದ್ದೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾಫಿ-ಟೀ ಸಹ ನೀಡಲು ಯೋಜನೆ ರೂಪಿಸಲಾಗಿದೆ. 

ಇಂದಿರಾ ಕ್ಯಾಂಟೀನ್‌ ಸಾಗಿ ಬಂದ ಹಾದಿ: ಮುಖ್ಯಮಂತ್ರಿಗಳು 2017-18ನೇ ಬಜೆಟ್‌ನಲ್ಲಿ ಇಂದಿರಾ ಕ್ಯಾಂಟೀನ್‌ ಘೋಷಿಸಿದ್ದರು. ಅದರಂತೆ 2018ರ ಆ.16ರಂದು 101 ಕ್ಯಾಂಟೀನ್‌ಗಳಿಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚಾಲನೆ ನೀಡಿದ್ದರು. ಆ ನಂತರದಲ್ಲಿ ಗಾಂಧಿ ಜಯಂತಿ 50 ಕ್ಯಾಂಟೀನ್‌ಗಳು ಹಾಗೂ ಜನವರಿ ವೇಳೆ 23 ಕ್ಯಾಂಟೀನ್‌ಗಳು ಸಾರ್ವಜನಿಕರಿಗೆ ಲಭ್ಯವಾಗಿದ್ದವು. 

ಆದರೆ, ಪಾಲಿಕೆಯ 17 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳನ್ನು ನಿರ್ಮಿಸಲು ಜಾಗ ದೊರೆಯದ ಹಿನ್ನೆಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾದನ ಸಂಚಾರಿ ಮೊಬೈಲ್‌ ಕ್ಯಾಂಟೀನ್‌ಗಳನ್ನು ಪಾಲಿಕೆಯಿಂದ ಪರಿಚಯಿಸಲಾಗಿತ್ತು. ಅದರಂತೆ ಜನವರಿ 26ರಂದು 24 ಮೊಬೈಲ್‌ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಾಗಿತ್ತಾದರೂ, ಸದ್ಯ 17 ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. 

ಸೈನಿಕರಿಂದ ಕ್ಯಾಂಟೀನ್‌ಗಳಲ್ಲಿ ಶಿಸ್ತು: ಇಂದಿರಾ ಕ್ಯಾಂಟೀನ್‌ ಯೋಜನೆಗಳು ಜಾರಿಗೊಳಿಸಿದ ಬಳಿಕ ಕೆಲವೊಂದು ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ನಡೆದಿದ್ದವು. ಜತೆಗೆ ಕ್ಯಾಂಟೀನ್‌ ಸಿಬ್ಬಂದಿ ಆಹಾರ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲವೆಂಬ ದೂರುಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ಪಾಲಿಕೆಯ ಪ್ರತಿಯೊಂದು ಕ್ಯಾಂಟೀನ್‌ಗೂ ಮಾರ್ಷಲ್‌ ನೇಮಿಸುವ ಮೂಲಕ ಶಿಸ್ತು ತರಲಾಗಿತ್ತು. 

ಯಾವುದೇ ಆಹಾರ ಸರಬರಾಜು ಹಾಗೂ ವಿತರಣೆ ಅನುಭವವಿಲ್ಲದಿದ್ದರೂ ಯಶಸ್ವಿಯಾಗಿ ಒಂದು ವರ್ಷ ಕ್ಯಾಂಟೀನ್‌ಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರಲಾಗುವುದು. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

2017ರ ಆ.16 ರಿಂದ ಇಲ್ಲಿವರೆಗೆ
-6 ಕೋಟಿ ಮಂದಿ ಊಟ, ತಿಂಡಿ ಸೇವಿಸಿದವರು 
-2.15 ಲಕ್ಷ ಮಂದಿ  ಪ್ರತಿ ದಿನ ಊಟ, ತಿಂಡಿ ಸೇವಿಸಿದವರು-  
-1,200 ಸರಾಸರಿ ಜನ ಒಂದು ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ಮಾಡಿದವರು- 
-20 ಕೇಂದ್ರೀಕೃತ ಅಡುಗೆ ಮನೆಗಳು
-24 ಮೊಬೈಲ್‌ ಕ್ಯಾಂಟೀನ್‌ಗಳು

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.