ಭಾನುವಾರ ಇಂದಿರಾ ಕ್ಯಾಂಟೀನ್‌ಗೆ ಬಂದವರೇ ಕಡಿಮೆ


Team Udayavani, Aug 21, 2017, 11:27 AM IST

canteen-kadime.jpg

ಬೆಂಗಳೂರು: ಇತರ ದಿನಗಳಿಗೆ ಹೋಲಿಸಿದರೆ ಭಾನುವಾರ ಇಂದಿರಾ ಕ್ಯಾಂಟೀನ್‌ನಲ್ಲಿ ಜನಸಂಧಣಿ ಕಡಿಮೆಯಾಗಿತ್ತು. ಕೇಂದ್ರ ಭಾಗದ ಕೆಲ ಕ್ಯಾಂಟೀನ್‌ಗಳ ಹೊರತು, ಉಳಿದೆಡೆ ಜನರ ಸಾಲು ಕಾಣಲಿಲ್ಲ. ಇಂದಿರಾ ಕ್ಯಾಂಟೀನ್‌ ಆರಂಭವಾದ ದಿನದಿಂದಲೂ ಕ್ಯಾಂಟೀನ್‌ಗಳ ಬಳಿ ಭಾರಿ ಜನಜಂಗುಳಿ ಇದ್ದ ಕಾರಣ ಕೆಲವರು ಆಹಾರ ದೊರೆಯದೆ ಬೇಸರದಿಂದ ಹಿಂದಿರುಗಿದ್ದರು. ಆದರೆ, ಭಾನುವಾರ ಆ ಸ್ಥಿತಿ ಕಾಣಲಿಲ್ಲ.

ಇಂದಿರಾ ಕ್ಯಾಂಟೀನ್‌ ಯೋಜನೆಗೆ ನಗರದ ಕೇಂದ್ರ ಭಾಗದಲ್ಲಿನ ವಾರ್ಡ್‌ಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅತಿ ಹೆಚ್ಚು ಜನರು ಭೇಟಿ ನೀಡುವ ಕ್ಯಾಂಟೀನ್‌ಗಳ ಮಾಹಿತಿಯನ್ನು ವಲಯ ಜಂಟಿ ಆಯುಕ್ತರಿಂದ ಪಡೆದು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಜನರ ಅಸಮಾಧಾನ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಕೊರತೆಯಾಗುತ್ತಿರುವ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಗಂಟೆಗಟ್ಟಲೇ ಕಾಯುವುದರ ಕುರಿತೂ ದೂರಿದ್ದಾರೆ. ಪ್ರತಿ ಕ್ಯಾಂಟೀನ್‌ನಲ್ಲಿ ಒಂದು ಹೊತ್ತಿಗೆ 500 ಜನರಿಗೆ ಆಹಾರ ವಿತರಿಸಲಾಗುತ್ತಿದೆ. ಆದರೆ, ಪ್ರತಿ ಕ್ಯಾಂಟೀನ್‌ಗಳಿಗೆ 200 ಊಟದ ತಟ್ಟೆಗಳನ್ನು ಮಾತ್ರ ನೀಡಿರುವುದರಿಂದ ಶೀಘ್ರ ಸಾರ್ವಜನಿಕರಿಗೆ ಆಹಾರ ಪೂರೈಕೆ ಮಾಡಲಾಗುತ್ತಿಲ್ಲ. ತಟ್ಟೆಗಳನ್ನು ಸ್ವತ್ಛಗೊಳಿಸಿ ತರುವುದರಲ್ಲಿ ಸಾರ್ವಜನಿಕರು ಗಲಾಟೆಗೆ ಮುಂದಾಗುತ್ತಿದ್ದಾರೆ ಎಂಬುದು ಕ್ಯಾಂಟೀನ್‌ ಸಿಬ್ಬಂದಿಯ ಅಭಿಪ್ರಾಯ. 

ಉಪಹಾರ ಸವಿದ ಜಮೀರ್‌
ನಗರದ ಗುಡ್ಡದಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಜಮೀರ್‌ ಅಹಮದ್‌ ಖಾನ್‌, ಅಲ್ಲಿಯೇ ಬೆಂಬಲಿಗರೊಂದಿಗೆ ಉಪ್ಪಿಟ್ಟು ಹಾಗೂ ಪಲಾವ್‌ ಸೇವಿಸಿದರು. 

ಇದೇ ವೇಳೆ ಕ್ಯಾಂಟೀನ್‌ನಲ್ಲಿ ದೊರೆಯುವ ಆಹಾರದ ಗುಣಮಟ್ಟ ಹಾಗೂ ಸ್ವತ್ಛತೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ಬಹುತೇಕರು ಕರೆ ಮಾಡಿ ಕ್ಯಾಂಟೀನ್‌ ನಿರ್ಮಿಸಿ ಉತ್ತಮ ಕೆಲಸ ಮಾಡಿದ್ದೀರಾ ಎಂದು ಅಭಿನಂದಿಸಿದ್ದಾರೆ ಇದನ್ನು ಸರ್ಕಾರ ಮಾಡಿದ್ದು ಎಂಬುದು ಅವರಿಗೆ ಗೊತ್ತಿಲ್ಲ. ಶಾಸಕರೇ ಮಾಡಿದ್ದಾರೆ ಎಂದು ಅವರು ಭಾವಿಸಿದ್ದಾರೆ.ಇದು ಸರ್ಕಾರದ ಕೆಲಸ ಎಂಬುದನ್ನು ತಿಳಿಸಿದ್ದೇನೆ ಎಂದರು. 

ಬಡವರಿಗೆ ಆಹಾರ ನೀಡಲು ಯೋಜನೆ ಜಾರಿಗೊಳಿಸಿರುವುದು ಉತ್ತಮ ಕಾರ್ಯ. 5 ರೂ.ಗಳಿಗೆ ತಿಂಡಿ ಕೊಡುತ್ತಿದ್ದು, ಅದರ ರುಚಿ ಹೇಗಿದೆ ಎಂಬುದನ್ನು ನೋಡಲು ಕ್ಯಾಂಟೀನ್‌ಗೆ ಭೇಟಿ ನೀಡಿದ್ದೇನೆ. ಕ್ಯಾಂಟೀನ್‌ಗೆ ಪ್ರತಿಕ್ರಿಯೆ ಹೇಗಿದೆ ಎಂದರೆ ಸ್ಪಾರ್‌ ಹೋಟೆಲ್‌ಗ‌ಳಲ್ಲಿ ಟೇಬಲ್‌ ಬುಕ್‌ ಮಾಡುವ ರೀತಿ ಇಲ್ಲಿ ಮೊದಲೇ ಟೋಕನ್‌ ಪಡೆಯಬೇಕಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.