ಇಂದಿರಾ ಕ್ಯಾಂಟೀನ್ ಟೆಂಡರ್ ರದ್ದು ಮಾಡುವ ಬಗ್ಗೆ ಪರಿಶೀಲನೆ?
Team Udayavani, Dec 23, 2019, 7:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಇಂದಿರಾ ಕ್ಯಾಂಟೀನ್ನ ನಿರ್ವಹಣೆ ಮತ್ತು ಆಹಾರ ಪೂರೈಕೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ಚೆಪ್ಟಾಕ್ ಮತ್ತು ರಿವಾರ್ಡ್ ಸಂಸ್ಥೆಗಳು ಭಾಗವಹಿಸಿವೆ ಎಂದು ಮೇಯರ್ ಎಂ. ಗೌತಮ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರ ಜತೆ ಸೋಮವಾರ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ನಾಲ್ಕು ಪ್ಯಾಕೇಜ್ಗಳಂತೆ ಟೆಂಡರ್ ಕರೆಯಲಾಗಿದ್ದು, ಮೂರು ಪ್ಯಾಕೇಜ್ಗಳಲ್ಲಿ ಚೆಪ್ಟಾಕ್ ಮತ್ತು ರಿವಾರ್ಡ್ ಸಂಸ್ಥೆಗಳು ಭಾಗವಹಿಸಿವೆ. ಇವುಗಳ ತಾಂತ್ರಿಕ ಬಿಡ್ ಆಗಿದೆ ಎಂದು ತಿಳಿಸಿದರು.
ಪೂರ್ವ ವಲಯದಲ್ಲಿ ನಾಲ್ಕು ಏಜಿನ್ಸಿಗಳು ಭಾಗವಹಿಸಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಪೂರ್ವ ವಲಯದಲ್ಲಿ ಅಂತಿಮವಾಗಿಲ್ಲ. ಇಂದಿರಾ ಕ್ಯಾಂಟೀನ್ ಟೆಂಡರ್ಗೆ ಸಂಬಂಧಿಸಿದಂತೆ ಈ ಹಿಂದೆಯೇ ಡಿಪಿಆರ್ (ಸಮಗ್ರ ಯೋಜನಾ ವರದಿ) ರಚನೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್ನ ಬಗ್ಗೆ ಎಸಿಬಿ ತನಿಖೆ ಮಾಡಿದೆ ಈ ವರದಿಯನ್ನು ಪರಿಶೀಲಿಸಲಾಗುವುದು, ಮೆನು ಬದಲಾವಣೆ ಬಗ್ಗೆಯೂ ಪರಿಶೀಲಿಸಿ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು.
ಚೆಪ್ಟಾಕ್ ಮತ್ತು ರಿವಾರ್ಡ್ ಸಂಸ್ಥೆಗಳು ಇಂದಿರಾ ಕ್ಯಾಂಟೀನ್ನ ನಿರ್ವಹಣೆ ಸರ್ಮಪಕವಾಗಿ ಮಾಡಿಲ್ಲ, ಗುಣಮಟ್ಟದ ಆಹಾರ ನೀಡುತ್ತಿಲ್ಲ ಹಾಗೂ ಹೆಚ್ಚು ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ, ಈ ಬಾರಿ ಚೆಪ್ಟಾಕ್ ಮತ್ತು ರಿವಾರ್ಡ್ ಸಂಸ್ಥೆಗಳ ಟೆಂಡರ್ ರದ್ದುಪಡಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..