ವಿಧಾನಸಭೆ ಚುನಾವಣೆಗೆ ಇಂದಿರಾ ವಸ್ತ್ರ ಭಾಗ್ಯ ಯೋಜನೆ


Team Udayavani, Jan 11, 2018, 6:00 AM IST

Ban11011806Medn.jpg

ಬೆಂಗಳೂರು: ಅಧಿಕಾರಕ್ಕೆ ಬಂದಾಗಿನಿಂದ ಭಾಗ್ಯಗಳ ಮೂಲಕ ಯೋಜನೆಗಳನ್ನು ನೀಡುತ್ತ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಈಗ ಚುನಾವಣೆ ಹೊಸ್ತಿಲಲ್ಲಿ ಮತ್ತೂಂದು ಭಾಗ್ಯ ನೀಡಲು ಚಿಂತನೆ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿಗೆ ಪರ್ಯಾಯವಾಗಿ ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ  ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳಿಗೆ ಉಚಿತವಾಗಿ ಪುರುಷರಿಗೆ  ಒಂದು ಪಂಚೆ ಮತ್ತು ಶರ್ಟ್‌ ಬಟ್ಟೆ ಹಾಗೂ ಮಹಿಳೆಯರಿಗೆ ಒಂದು ಸೀರೆ ಮತ್ತು ರವಿಕೆ ಬಟ್ಟೆಯನ್ನು ಉಚಿತವಾಗಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯನ್ನು 2018-19 ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಹಯೋಗದೊಂದಿಗೆ  ಜವಳಿ ಮೂಲಸೌಲಭ್ಯ ಅಭಿವೃದ್ದಿ ನಿಗಮದ ಮೂಲಕ ಯೋಜನೆ ಜಾರಿಗೆ ಯೋಚಿಸಲಾಗಿದೆ. ಚುನಾವಣೆಗೂ ಮುಂಚೆಯೇ ಯೋಜನೆ ಜಾರಿಗೊಳಿಸಲು ಜವಳಿ ಸಚಿವ ರುದ್ರಪ್ಪ ಲಮಾಣಿ ಅವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ್‌ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸಚಿವರು ಎಸಿಎಸ್‌ಗೆ ಬರೆದ ಪತ್ರ ಉದಯವಾಣಿಗೆ ಲಭ್ಯವಾಗಿದೆ.

ಪುರುಷರಿಗೆ ಎರಡು ಮೀಟರ್‌ನ ಒಂದು ಪಾಲಿ ಹತ್ತಿ ಪಂಚೆಗೆ 150 ರೂಪಾಯಿ, 2 ಮೀಟರ್‌ ಪಾಲಿವಿಸ್ಕೋಸ್‌ ಶರ್ಟ್‌ ಬಟ್ಟೆಗೆ 100 ರೂಪಾಯಿ, ಮಹಿಳೆಯರಿಗೆ 5.5 ಮೀಟರ್‌ ಪಾಲಿಯೇಸ್ಟರ್‌ ಸೀರೆಗೆ 200 ರೂಪಾಯಿ, 80 ಸೆಂಟಿ ಮೀಟರ್‌ ಪಾಲಿ ಹತ್ತಿ ರವಿಕೆ ಬಟ್ಟೆಗೆ 50 ರೂಪಾಯಿ ದರ ಲೆಕ್ಕಾಚಾರ ಹಾಕಿದ್ದು, ಒಂದು ಕುಟುಂಬಕ್ಕೆ 500 ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ಯೋಜನೆಯ ಅನುಷ್ಠಾನಕ್ಕೆ ವಾರ್ಷಿಕ 550 ಕೋಟಿ ರೂಪಾಯಿ ಅಗತ್ಯವಿದ್ದು, ಆ ಅನುದಾನವನ್ನು 2018-19 ಬಜೆಟ್‌ನಲ್ಲಿ ಘೋಷಿಸಿ, ಹಣ ಒದಗಿಸಲು ಸಚಿವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ನೇಕಾರರಿಗೆ ಅನುಕೂಲ: ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ತರುವುದರಿಂದ ರಾಜ್ಯದಲ್ಲಿನ ನೇಕಾರರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ. ರಾಜ್ಯದಲ್ಲಿ 1.50 ಲಕ್ಷ ವಿದ್ಯುತ್‌ ಮಗ್ಗಗಳಿವೆ. ಅಲ್ಲದೇ 25 ಸಾವಿರ ಅಸಂಘಟಿತ ವಲಯದ ನೇಕಾರರ ಕುಟುಂಬಗಳಿವೆ. ಇಂದಿರಾ ವಸ್ತ್ರ ಭಾಗ್ಯ ಯೋಜನೆಯಿಂದ ನೇಕಾರರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎನ್ನುವುದು ಕೂಡ ಸರ್ಕಾರದ ಲೆಕ್ಕಾಚಾರ.

ಬಡ ಕುಟುಂಬಗಳೇ ಟಾರ್ಗೆಟ್‌: ರಾಜ್ಯದಲ್ಲಿ ಸರ್ಕಾರದ ಲೆಕ್ಕಾಚಾರದಲ್ಲಿ ಸಧ್ಯ 1 ಕೋಟಿ 10 ಲಕ್ಷ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿವೆ. ಪ್ರತಿ ಕುಟುಂಬದ ಗಂಡ ಹೆಂಡತಿ ಲೆಕ್ಕ ಹಾಕಿದರೆ 2 ಕೋಟಿ 20 ಲಕ್ಷ ಫ‌ಲಾನುಭವಿಗಳಾಗುತ್ತಾರೆ.

ಎರಡು ವರ್ಷದಿಂದಲೇ ಪ್ಲಾನ್‌: ಬಾಬುರಾವ್‌ ಚಿಂಚನಸೂರು ಜವಳಿ ಖಾತೆ ಸಚಿವರಾಗಿದ್ದಾಗಲೇ ವಸ್ತ್ರಭಾಗ್ಯ ಯೋಜನೆ ಜಾರಿಗೆ ತರುವ ಕುರಿತು ಆಲೋಚನೆ ಮಾಡಿದ್ದರು. 15-16 ನೇ ಸಾಲಿನ ಬಜೆಟ್‌ನಲ್ಲಿ ಯೋಜನೆ ಸೇರಿಸಲು ಪ್ರಯತ್ನ ನಡೆಸಿದ್ದರು ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆ ಜಾರಿಗೆ ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆದರೆ, ಈಗ ಚುನಾವಣೆ ವರ್ಷವಾಗಿರುವುದರಿಂದ ನೇರವಾಗಿ ಮತದಾರರಿಗೆ ಯೋಜನೆ ತಲುಪುವುದರಿಂದ ಚುನಾವಣೆಗೆ ಹೆಚ್ಚಿನ ಅನುಕೂಲವಾಗುವ ಸಾಧ್ಯತೆ ಇದೆ. ಹಿಂದೆ ದೇವರಾಜ್‌ ಅರಸು ಮುಖ್ಯಮಂತ್ರಿಯಾಗಿದ್ದಾಗ ಸೀರೆ, ಪಂಚೆ, ಸ್ಟೀಲ್‌ ಊಟದ ತಟ್ಟೆ ವಿತರಿಸಿದ್ದರು. ಅದು ಅವರಿಗೆ ಸಾಕಷ್ಟು ಜನಪ್ರೀಯತೆ ತಂದು ಕೊಟ್ಟಿತ್ತು.

ಭಾಗ್ಯಗಳ ಸರಣಿಯನ್ನೇ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಚುನಾವಣೆ ಹೊಸ್ತಿಲಲ್ಲಿರುವುದರಿಂದ ಮತದಾರರ ಸೆಳೆಯಲು ಮತ್ತೂಂದು ಭಾಗ್ಯ ಘೋಷಿಸುವುದರಲ್ಲಿ ಅನುಮಾನವಿಲ್ಲ.

ಪುರುಷರಿಗೆ                ಮಹಿಳೆಯರಿಗೆ
ಪಂಚೆ    150              ಸೀರೆ         200
ಶರ್ಟ್‌    100              ರವಿಕೆ         50
ಒಟ್ಟು    250                              250

ವಸ್ತ್ರಭಾಗ್ಯ ಯೋಜನೆಯನ್ನು ಬಜೆಟ್‌ನಲ್ಲಿ ಸೇರಿಸುವಂತೆ ಶಿಫಾರಸ್ಸು ಮಾಡಿದ್ದೇನೆ. ಬಡವರಿಗೆ ಸೀರೆ ಪಂಚೆ ಕೊಡುವುದರಿಂದ ಅವರಿಗೂ ಅನುಕೂಲ ಆಗುತ್ತದೆ. ನೇಕಾರರಿಗೂ ಉದ್ಯೋಗ ದೊರೆತಂತಾಗುತ್ತದೆ. ಮುಖ್ಯಮಂತ್ರಿಯವರ ಮನವೊಲಿಸಿ ಈ ಯೋಜನೆಯನ್ನು ಜಾರಿಗೆ ತರುತ್ತೇವೆ. ಬಡವರಿಗೆ ಒಂದು ಒಳ್ಳೆ ಕೆಲಸ ಮಾಡಿದಂತಾಗುತ್ತದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಇದು ಅನುಕೂಲ ಆಗುತ್ತದೆ.
– ರುದ್ರಪ್ಪ ಲಮಾಣಿ, ಜವಳಿ ಸಚಿವ.

– ಶಂಕರ್‌ ಪಾಗೋಜಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.