ಹೈಟೆನ್ಷನ್‌ ತಂತಿ ತಗುಲಿ ಮಕ್ಕಳಿಗೆ ಗಾಯ


Team Udayavani, Sep 15, 2019, 3:06 AM IST

hitention

ಕೆ.ಆರ್‌.ಪುರ: ಮನೆ ಮಹಡಿ ಮೇಲೆ ಆಟವಾಡುತ್ತಿದ್ದ ಮಕ್ಕಳು ಹೈಟೆನ್ಷನ್‌ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್‌.ಪುರ ಪೊಸ್‌ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ನಡೆದಿದೆ. ಸೈಯದ್‌ ಇರ್ಫಾನ್‌ ಮಾಝ್ (11) ಹಾಗೂ ಆರಿಫಾ (15) ಗಾಯಗೊಂಡ ಮಕ್ಕಳು. ಘಟನೆ ವೇಳೆ ಹಲವು ಮನೆಗಳಲ್ಲಿ ಶಾರ್ಟ್‌ ಸರ್ಕಿಟ್‌ನಿಂದಾಗಿ ಎಲೆಕ್ಟ್ರಾನಿಕ್‌ ವಸ್ತುಗಳು ಹಾನಿಗೀಡಾಗಿವೆ.

ದೇವಸಂದ್ರ ವಾರ್ಡ್‌ನ ತ್ರಿವೇಣಿನಗರದ ರಾಜಣ್ಣ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ರಾಜಣ್ಣ ಅವರ ಕಟ್ಟಡದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಆರಿಫಾ ಕುಟುಂಬ ವಾಸವಿತ್ತು. ಬಾಲಕ ಸೈಯದ್‌ ಇರ್ಫಾನ್‌ ಕುಟುಂಬ ಪಕ್ಕದ ಮನೆಯಲ್ಲಿ ವಾಸವಿದೆ. ಶನಿವಾರ ಸಂಜೆ 4 ಗಂಟೆಗೆ ಇಬ್ಬರೂ ಕೂಡಿ ಆರಿಫಾಳ ಮನೆಯ ಮಹಡಿ ಮೇಲೆ ಆಟವಾಡಲು ತೆರಳಿದ್ದಾರೆ.

ಈ ವೇಳೆ ಮನೆ ಮೇಲೆ ಕೈಟುಕುವ ಅಂತರದಲ್ಲಿ ಹಾದುಹೋಗಿರುವ ಹೈಟೆನ್ಷನ್‌ ತಂತಿಯನ್ನು ಮುಟ್ಟಿದ ಪರಿಣಾಮ ಇಬ್ಬರಿಗೂ ಶಾಕ್‌ ಹೊಡೆದಿದೆ. ಶಾಕ್‌ ಹೊಡೆದ ರಭಸಕ್ಕೆ ಬಾಲಕ ಸೈಯದ್‌ ಇರ್ಫಾನ್‌ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಆರಿಫಾಳ ದೇಶ ಶೇ.50ರಷ್ಟು ಸುಟ್ಟುಹೋಗಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಯಲಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ದೇವಸಂದ್ರ ವಾರ್ಡ್‌ನ ತ್ರಿವೇಣಿನಗರದಲ್ಲಿ 2011ರಲ್ಲಿ ಕಟ್ಟಡ ನಿರ್ಮಿಸಿರುವ ರಾಜಣ್ಣ ಅಪಾಯದ ಅರಿವಿದ್ದರೂ ಹೈಟೆನ್ಷನ್‌ ತಂತಿಗಳ ಕೆಳಗೇ ಕಟ್ಟಡ ನಿರ್ಮಿಸಿಸುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ. ಆದರೆ ಈ ಬಗ್ಗೆ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ಗಮನಹರಿಸಿಲ್ಲ. ಅಲ್ಲದೆ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮನೆ ಮಾಲೀಕ ರಾಜಣ್ಣ ಹಾಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಕೆ.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯಲು ಪರದಾಟ: ಘಟನೆ ಸಂಭವಿಸಿದ ಬಳಿಕ ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಹರಸಾಹಸ ಪಟ್ಟರು. ಘಟನೆ ನಡೆದ ತಕ್ಷಣವೇ “108’ಕ್ಕೆ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್‌ ಬರಲಿಲ್ಲ. ಹೀಗಾಗಿ ಸೈಯದ್‌ ಇರ್ಪಾನ್‌ನನ್ನು ಬೈಕ್‌ನಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಿಫಾಳನ್ನು ಕೆಇಬಿ ವಾಹನದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕೋrರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

“ಉದಯವಾಣಿ’ ಮೊದಲೇ ಎಚ್ಚರಿಸಿತ್ತು: ದೇವಸಂದ್ರ ವಾರ್ಡ್‌ನ ತ್ರಿವೇಣಿನಗರದ ವಸತಿ ಪ್ರದೇಶದಲ್ಲಿ ಹೈಟೆನ್ಷನ್‌ ತಂತಿಗಳು ಕೈಗೆಟುಕುವ ಮಟ್ಟದಲ್ಲಿರುವುದು, ಜತೆಗೆ ನಿಯಮ ಉಲ್ಲಂ ಸಿ ಹೈಟೆನ್ಷನ್‌ ತಂತಿಗಳ ಕೆಳಗೇ ಮನೆಗಳನ್ನು ನಿರ್ಮಿಸಿರುವುದು ಹಾಗೂ ಅದರಿಂದ ಈ ಹಿಂದೆ ಸಂಭವಿಸಿರುವ ಅಪಾಯಗಳ ಕುರಿತು 2019ರ ಏ.26ರಂದು “ಹೈಟೆನ್ಷನ್‌ ತಂತಿಗಳ ಕೆಳಗೆ ಅಪಾಯದ ಬದುಕು’ ಎಂಬ ಶೀರ್ಷಿಕೆಯಡಿ ವರದಿ “ಉದಯವಾಣಿ’ ವರದಿ ಪ್ರಕಟಿಸಿ, ಸಂಬಂಧಿಸಿದ ಇಲಾಖೆ, ಪಾಲಿಕೆಯನ್ನು ಎಚ್ಚರಿಸುವ ಕೆಲಸ ಮಾಡಿತ್ತು. ಆದರೂ, ಅಧಿಕಾರಿಗಳು, ಜನಪ್ರತಿನಿದಿಗಳು ಆ ಬಗ್ಗೆ ಗಮನಹರಿಸಿಲ್ಲ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

7

Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್‌ ಮನೆಯಲ್ಲಿ ಕಳವು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.